Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಒಂದೂವರೆ ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ದಾರುಣ ಅಂತ್ಯ

ರಂಜಾನ್​ ಹಬ್ಬಕ್ಕೆ ತನ್ನ ಮಗಳನ್ನು ಕರೆತರಲು ಪೋಷಕರು ಯೋಚಿಸುತ್ತಿದ್ದರು. ಆದರೆ ಇತ್ತ ಪತ್ನಿಯನ್ನು ಕೊಂದ ಪತಿ ಮೃತದೇಹ ಆಸ್ಪತ್ರೆಯಲ್ಲಿಟ್ಟು ತನ್ನ ಕುಟುಂಬದೊಂದಿಗೆ ಪರಾರಿಯಾಗಿದ್ದಾನೆ. ಗದಗದಲ್ಲಿ ನಡೆದ ಈ ಕೃತ್ಯದ ಮಾಹಿತಿ ಇಲ್ಲಿದೆ.

ಗದಗ: ಒಂದೂವರೆ ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ದಾರುಣ ಅಂತ್ಯ
ಪತ್ನಿಯನ್ನು ಕೊಂದ ಪತಿ (ಸಾಂದರ್ಭಿಕ ಚಿತ್ರ)
Follow us
Rakesh Nayak Manchi
|

Updated on:Apr 21, 2023 | 3:38 PM

ಗದಗ: ರಂಜಾನ್​ ಹಬ್ಬಕ್ಕೆ ತನ್ನ ಮಗಳನ್ನು ಕರೆತರಲು ಪೋಷಕರು ಪ್ಲನ್ ಮಾಡಿಕೊಂಡಿದ್ದರು. ಇದಕ್ಕಾಗಿ ಎಲ್ಲಾ ತಯಾರಿಗಳನ್ನು ಮನೆಯವರು ನಡೆಸುತ್ತಿದ್ದರು. ಇಷ್ಟೊಂದು ಸಂತೋಷದಲ್ಲಿದ್ದ ತವರು ಮನೆಯಲ್ಲಿ ನೀರವ ಮೌನ ಆವರಿಸಿದೆ. ಪೋಷಕರು, ಸಂಬಂಧಿಗಳು ಕಣ್ಣಿರಿನಲ್ಲಿ ಕೈತೊಳೆಯುತ್ತಿದ್ದಾರೆ. ಹೌದು, ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾದವಾಗಿದ್ದ ನವವಿವಾಹಿತೆಯನ್ನು ಪತಿಯೇ ಕೊಲೆ ಮಾಡಿ ತನ್ನ ಕುಟುಂಬದೊಂದಿಗೆ ಪರಾರಿಯಾದ ಘಟನೆ ಗದಗದ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ನವವಿವಾಹಿತೆ ಶಹನಾಜ್ ಬೇಗಂ (24) ಒಂದೂವರೆ ತಿಂಗಳ ಹಿಂದೆಯಷ್ಟೇ ಧಾರವಾಡ ಜಿಲ್ಲೆ ಅಣ್ಣಿಗೇರಿ ಮೂಲದ ಶಹಬಾಜ್ ಮುಳಗುಂದ ಎಂಬಾತನನ್ನು ವಿವಾಹವಾಗಿದ್ದಳು. ಒಂದೆಡೆ ಶಹನಾಜ್ ಬೇಗಂ ತವರು ಮನೆಯಲ್ಲಿ ಮಗಳ ಮದುವೆಯಾದ ಸಂತಸವಿದ್ದರೆ, ಇನ್ನೊಂದೆಡೆ ರಂಜಾನ್ ಹಬ್ಬದ ಸಂಭ್ರಮ ಸಡಗರ. ಈ ಹಬ್ಬಕ್ಕೆ ನವವಿವಾಹಿತೆ ಶಹನಾಜ್​ ಬೇಗಂಳನ್ನು ಕರೆತರುವ ಪ್ಲಾನ್ ಕೂಡ ಪೋಷಕರು ಹಾಕಿಕೊಂಡಿದ್ದರು.

ಇದನ್ನೂ ಓದಿ: Hassan: ಮೊದಲು ಮಿಸ್ಸಿಂಗ್, ಆ ಮೇಲೆ ಕಿಡ್ನಾಪ್, ಕೊನೆಗೆ ಕೊಲೆ ಕೇಸ್: ಇದು ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಗೆಳೆಯರಿಂದಲೇ ನವವಿವಾಹಿತ ಹತ್ಯೆಯಾದ ಕತೆ

ಗಂಡನ ಮನೆಯಿಂದ ಶಹನಾಜ್ ಬೇಗಂಳ ತವರಿಗೆ ಬರುತ್ತಿರುವ ಹಿನ್ನೆಲೆ ಹಬ್ಬವನ್ನು ಪ್ರತಿ ವರ್ಷಕ್ಕಿಂತ ಅದ್ದೂರಿಯಾಗಿ ನಡೆಸಲು ಬೇಕಾದ ಎಲ್ಲಾ ತಯಾರಿಗಳನ್ನು ನಡೆಸಲಾಗುತ್ತಿತ್ತು. ಆಕೆಗೆ ನೀಡಲೆಂದೇ ಹೊಸ ಬಟ್ಟೆ, ಚಿನ್ನವನ್ನು ಖರೀದಿಸಿಟ್ಟಿದ್ದರು. ಆದರೆ, ಇತ್ತ ಕೆಟ್ಟ ಪಿಡುಗಿನ ಹಿಂದೆ ಬಿದ್ದ ಬೇಗಂ ಪತಿ ಶಹಬಾಜ್ ಮುಳಗುಂದ ಮತ್ತು ಆತನ ಕುಟುಂಬದ ಸದಸ್ಯರು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ರಂಜಾನ್ ಹಬ್ಬದಂದು ಮಗಳು ಬೇಗಂ ಬರುತ್ತಿದ್ದಾಳೆ ಎಂದು ಕಾಯುತ್ತಿದ್ದ ಪೋಷಕರಿಗೆ ತನ್ನ ಮಗಳ ಮೃತದೇಹ ಆಸ್ಪತ್ರೆಯಲ್ಲಿರುವ ಮಾಹಿತಿ ತಿಳಿದುಬಂದು ಬರ ಸಿಡಿಲು ಬಡಿದಂತಾಗಿದೆ. ಕೊಲೆ ನಂತರ ಶಹಬಾಜ್ ಮುಳಗುಂದ ಮತ್ತು ಕುಟುಂಬ ಪರಾರಿಯಾಗಿದ್ದು, ಇತ್ತ ಮೃತಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಬೇಗಂ ಕುಟುಂಬಸ್ಥರು ಆರೋಪಿಸಿದ್ದಾರೆ.

ಕ್ರೈಂ ನ್ಯೂಸ್​ಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Fri, 21 April 23

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ