AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣದಲ್ಲಿ ಸತ್ಯಾಂಶ ಇಲ್ಲದಿದ್ರೆ ಇಷ್ಟು ದೊಡ್ಡ ಚರ್ಚೆ ಆಗ್ತಿರಲಿಲ್ಲ; ಸಿಎಂ ಹೇಳಿಕೆಗೆ ಬೊಮ್ಮಾಯಿ ಟಾಂಗ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಸಾಕಷ್ಟು ಟೀಕೆಗಳನ್ನು ಮಾಡುತ್ತಿದ್ದು, ಇದೀಗ ಟಿವಿ9 ಕನ್ನಡ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಮುಡಾ ಸೈಟ್ ಹಂಚಿಕೆಯಲ್ಲಿ ಯಾವ ಹಗರಣವೂ ಆಗಿಲ್ಲ ಎಂದಿದ್ದಾರೆ. ಇದಕ್ಕೆ ಟಾಂಗ್​ ಕೊಟ್ಟ ಸಂಸದ ಬಸವರಾಜ ಬೊಮ್ಮಾಯಿ, ‘ಯಾವುದೇ ಹಗರಣ ಇಲ್ಲವೆಂದ ಮೇಲೆ ಯಾಕೆ ಭಯ ಪಡಬೇಕು?, ಸಿಬಿಐ ತನಿಖೆ ನಡೆಸಲಿ ಎಂದಿದ್ದಾರೆ.

ಮುಡಾ ಹಗರಣದಲ್ಲಿ ಸತ್ಯಾಂಶ ಇಲ್ಲದಿದ್ರೆ ಇಷ್ಟು ದೊಡ್ಡ ಚರ್ಚೆ ಆಗ್ತಿರಲಿಲ್ಲ; ಸಿಎಂ ಹೇಳಿಕೆಗೆ ಬೊಮ್ಮಾಯಿ ಟಾಂಗ್
ಸಿಎಂ ಹೇಳಿಕೆಗೆ ಬೊಮ್ಮಾಯಿ ಟಾಂಗ್
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 13, 2024 | 7:10 PM

Share

ಗದಗ, ಜು.13: ಮುಡಾ ಸೈಟ್ ಹಂಚಿಕೆಯಲ್ಲಿ ಯಾವ ಹಗರಣವೂ ಆಗಿಲ್ಲ ಎಂದು ಟಿವಿ9 ನಡೆಸಿದ ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಹೇಳಿದ್ದಾರೆ. ಇದಕ್ಕೆ ಗದಗನಲ್ಲಿ ಪ್ರತಿಕ್ರಿಯಿಸಿದ ಸಂಸದ ಬಸವರಾಜ್ ಬೊಮ್ಮಾಯಿ(Basavaraj Bommai), ‘ಮುಡಾ ಹಗರಣದಲ್ಲಿ ಯಾವುದೇ ಸತ್ಯಾಂಶ ಇಲ್ಲವೆಂದರೆ ಇಷ್ಟು ದೊಡ್ಡ ಚರ್ಚೆ ಆಗುತ್ತಿರಲಿಲ್ಲ ಎಂದು ಸಿಎಂ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಯಾವುದೇ ಹಗರಣ ಇಲ್ಲಾಂದ್ರೆ ಯಾಕೆ ಭಯ?

ಈ ಹಗರಣದಲ್ಲಿ ಏನೂ ಇಲ್ಲ ಅಂದರೆ ಸ್ವತಂತ್ರವಾಗಿ ಯಾಕೆ ತನಿಖೆಗೆ ಹಿಂಜರಿಕೆ. ವಿಚಾರಣೆ ಮಾಡೋದು ಬೇರೆ, ತನಿಖೆ ಮಾಡುವುದು ಬೇರೆ. ಮುಡಾ ಹಗರಣದ ತನಿಖೆಗೆ ಒಪ್ಪಿಸಬೇಕು. ಸಂಪೂರ್ಣವಾಗಿ ಮುಡಾದಲ್ಲಿ ಎಕ್ಸೆಂಜ್ ಸೈಟ್​ಗಳು ಯಾವ್ಯಾವು ಇವೆ. ಯಾವ ಸಂದರ್ಭದಲ್ಲಿ, ಯಾರಿಗೆ ನೀಡಿದ್ದೀರಿ ಸಂಪೂರ್ಣ ತನಿಖೆ ಆಗಬೇಕು. ಹೀಗಾಗಿ ಸಿಬಿಐ ತನಿಖೆಗೆ ನೀಡಲಿ. ಯಾವುದೇ ಹಗರಣ ಇಲ್ಲವೆಂದ ಮೇಲೆ ಯಾಕೆ ಭಯ ಪಡಬೇಕು ಎಂದರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ಪತ್ನಿಗೆ ಬಂದ ಜಮೀನು ಸರ್ಕಾರಿ ಭೂಮಿ -ಹೆಚ್​ಡಿ ಕುಮಾರಸ್ವಾಮಿ

ಇನ್ನು ಬಹಳ ಸ್ಪಷ್ಟವಾಗಿ ಮಾಧ್ಯಮಗಳು ತೋರಿಸಿಕೊಟ್ಟಿದ್ದೀರಿ. ಸಿಎಂ ಸಿದ್ದರಾಮಯ್ಯ ಬೇಕಾದದ್ದು ಹೇಳಲಿ. ಎಕ್ಸೆಂಜ್ ಸೈಟ್ ಯಾವ ಯಾವ ಲೇಔಟ್​ನಲ್ಲಿ ಪಡೆದುಕೊಳ್ಳಬೇಕು ಎನ್ನುವ ಕಾನೂನು ಸ್ಪಷ್ಟವಾಗಿ ಉಲ್ಲಂಘನೆ ಆಗಿದೆ. ಯಾವ ಕಾನೂನು ಉಲ್ಲಂಘನೆ ಆಗಿದೆ ಎಂದು ನಮ್ಮ ಪಕ್ಷದ ನಾಯಕರು ಓದಿ ಹೇಳಿದ್ದಾರೆ. 50/50 ಯಾವ ಲೇಔಟ್​ನಲ್ಲಿ ನೀಡಬೇಕು ಅಲ್ಲಿ ನೀಡಿಲ್ಲ. ಮೇಲ್ನೋಟಕ್ಕೆ ಉಲ್ಲಂಘನೆ ಆಗಿದ್ದು ಸ್ಪಷ್ಟವಾಗಿದೆ. ಯಾವ ಸಂದರ್ಭದಲ್ಲಿ ಸೈಟ್ ಪಡೆದುಕೊಂಡ್ರು, ಯಾವ ರೀತಿ ಪಡೆದುಕೊಂಡರು ಎನ್ನುವ ಪ್ರಶ್ನೆ ಇದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?