AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣದಲ್ಲಿ ಸತ್ಯಾಂಶ ಇಲ್ಲದಿದ್ರೆ ಇಷ್ಟು ದೊಡ್ಡ ಚರ್ಚೆ ಆಗ್ತಿರಲಿಲ್ಲ; ಸಿಎಂ ಹೇಳಿಕೆಗೆ ಬೊಮ್ಮಾಯಿ ಟಾಂಗ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಸಾಕಷ್ಟು ಟೀಕೆಗಳನ್ನು ಮಾಡುತ್ತಿದ್ದು, ಇದೀಗ ಟಿವಿ9 ಕನ್ನಡ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಮುಡಾ ಸೈಟ್ ಹಂಚಿಕೆಯಲ್ಲಿ ಯಾವ ಹಗರಣವೂ ಆಗಿಲ್ಲ ಎಂದಿದ್ದಾರೆ. ಇದಕ್ಕೆ ಟಾಂಗ್​ ಕೊಟ್ಟ ಸಂಸದ ಬಸವರಾಜ ಬೊಮ್ಮಾಯಿ, ‘ಯಾವುದೇ ಹಗರಣ ಇಲ್ಲವೆಂದ ಮೇಲೆ ಯಾಕೆ ಭಯ ಪಡಬೇಕು?, ಸಿಬಿಐ ತನಿಖೆ ನಡೆಸಲಿ ಎಂದಿದ್ದಾರೆ.

ಮುಡಾ ಹಗರಣದಲ್ಲಿ ಸತ್ಯಾಂಶ ಇಲ್ಲದಿದ್ರೆ ಇಷ್ಟು ದೊಡ್ಡ ಚರ್ಚೆ ಆಗ್ತಿರಲಿಲ್ಲ; ಸಿಎಂ ಹೇಳಿಕೆಗೆ ಬೊಮ್ಮಾಯಿ ಟಾಂಗ್
ಸಿಎಂ ಹೇಳಿಕೆಗೆ ಬೊಮ್ಮಾಯಿ ಟಾಂಗ್
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 13, 2024 | 7:10 PM

ಗದಗ, ಜು.13: ಮುಡಾ ಸೈಟ್ ಹಂಚಿಕೆಯಲ್ಲಿ ಯಾವ ಹಗರಣವೂ ಆಗಿಲ್ಲ ಎಂದು ಟಿವಿ9 ನಡೆಸಿದ ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಹೇಳಿದ್ದಾರೆ. ಇದಕ್ಕೆ ಗದಗನಲ್ಲಿ ಪ್ರತಿಕ್ರಿಯಿಸಿದ ಸಂಸದ ಬಸವರಾಜ್ ಬೊಮ್ಮಾಯಿ(Basavaraj Bommai), ‘ಮುಡಾ ಹಗರಣದಲ್ಲಿ ಯಾವುದೇ ಸತ್ಯಾಂಶ ಇಲ್ಲವೆಂದರೆ ಇಷ್ಟು ದೊಡ್ಡ ಚರ್ಚೆ ಆಗುತ್ತಿರಲಿಲ್ಲ ಎಂದು ಸಿಎಂ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಯಾವುದೇ ಹಗರಣ ಇಲ್ಲಾಂದ್ರೆ ಯಾಕೆ ಭಯ?

ಈ ಹಗರಣದಲ್ಲಿ ಏನೂ ಇಲ್ಲ ಅಂದರೆ ಸ್ವತಂತ್ರವಾಗಿ ಯಾಕೆ ತನಿಖೆಗೆ ಹಿಂಜರಿಕೆ. ವಿಚಾರಣೆ ಮಾಡೋದು ಬೇರೆ, ತನಿಖೆ ಮಾಡುವುದು ಬೇರೆ. ಮುಡಾ ಹಗರಣದ ತನಿಖೆಗೆ ಒಪ್ಪಿಸಬೇಕು. ಸಂಪೂರ್ಣವಾಗಿ ಮುಡಾದಲ್ಲಿ ಎಕ್ಸೆಂಜ್ ಸೈಟ್​ಗಳು ಯಾವ್ಯಾವು ಇವೆ. ಯಾವ ಸಂದರ್ಭದಲ್ಲಿ, ಯಾರಿಗೆ ನೀಡಿದ್ದೀರಿ ಸಂಪೂರ್ಣ ತನಿಖೆ ಆಗಬೇಕು. ಹೀಗಾಗಿ ಸಿಬಿಐ ತನಿಖೆಗೆ ನೀಡಲಿ. ಯಾವುದೇ ಹಗರಣ ಇಲ್ಲವೆಂದ ಮೇಲೆ ಯಾಕೆ ಭಯ ಪಡಬೇಕು ಎಂದರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ಪತ್ನಿಗೆ ಬಂದ ಜಮೀನು ಸರ್ಕಾರಿ ಭೂಮಿ -ಹೆಚ್​ಡಿ ಕುಮಾರಸ್ವಾಮಿ

ಇನ್ನು ಬಹಳ ಸ್ಪಷ್ಟವಾಗಿ ಮಾಧ್ಯಮಗಳು ತೋರಿಸಿಕೊಟ್ಟಿದ್ದೀರಿ. ಸಿಎಂ ಸಿದ್ದರಾಮಯ್ಯ ಬೇಕಾದದ್ದು ಹೇಳಲಿ. ಎಕ್ಸೆಂಜ್ ಸೈಟ್ ಯಾವ ಯಾವ ಲೇಔಟ್​ನಲ್ಲಿ ಪಡೆದುಕೊಳ್ಳಬೇಕು ಎನ್ನುವ ಕಾನೂನು ಸ್ಪಷ್ಟವಾಗಿ ಉಲ್ಲಂಘನೆ ಆಗಿದೆ. ಯಾವ ಕಾನೂನು ಉಲ್ಲಂಘನೆ ಆಗಿದೆ ಎಂದು ನಮ್ಮ ಪಕ್ಷದ ನಾಯಕರು ಓದಿ ಹೇಳಿದ್ದಾರೆ. 50/50 ಯಾವ ಲೇಔಟ್​ನಲ್ಲಿ ನೀಡಬೇಕು ಅಲ್ಲಿ ನೀಡಿಲ್ಲ. ಮೇಲ್ನೋಟಕ್ಕೆ ಉಲ್ಲಂಘನೆ ಆಗಿದ್ದು ಸ್ಪಷ್ಟವಾಗಿದೆ. ಯಾವ ಸಂದರ್ಭದಲ್ಲಿ ಸೈಟ್ ಪಡೆದುಕೊಂಡ್ರು, ಯಾವ ರೀತಿ ಪಡೆದುಕೊಂಡರು ಎನ್ನುವ ಪ್ರಶ್ನೆ ಇದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ