AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣದಲ್ಲಿ ಸತ್ಯಾಂಶ ಇಲ್ಲದಿದ್ರೆ ಇಷ್ಟು ದೊಡ್ಡ ಚರ್ಚೆ ಆಗ್ತಿರಲಿಲ್ಲ; ಸಿಎಂ ಹೇಳಿಕೆಗೆ ಬೊಮ್ಮಾಯಿ ಟಾಂಗ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಸಾಕಷ್ಟು ಟೀಕೆಗಳನ್ನು ಮಾಡುತ್ತಿದ್ದು, ಇದೀಗ ಟಿವಿ9 ಕನ್ನಡ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಮುಡಾ ಸೈಟ್ ಹಂಚಿಕೆಯಲ್ಲಿ ಯಾವ ಹಗರಣವೂ ಆಗಿಲ್ಲ ಎಂದಿದ್ದಾರೆ. ಇದಕ್ಕೆ ಟಾಂಗ್​ ಕೊಟ್ಟ ಸಂಸದ ಬಸವರಾಜ ಬೊಮ್ಮಾಯಿ, ‘ಯಾವುದೇ ಹಗರಣ ಇಲ್ಲವೆಂದ ಮೇಲೆ ಯಾಕೆ ಭಯ ಪಡಬೇಕು?, ಸಿಬಿಐ ತನಿಖೆ ನಡೆಸಲಿ ಎಂದಿದ್ದಾರೆ.

ಮುಡಾ ಹಗರಣದಲ್ಲಿ ಸತ್ಯಾಂಶ ಇಲ್ಲದಿದ್ರೆ ಇಷ್ಟು ದೊಡ್ಡ ಚರ್ಚೆ ಆಗ್ತಿರಲಿಲ್ಲ; ಸಿಎಂ ಹೇಳಿಕೆಗೆ ಬೊಮ್ಮಾಯಿ ಟಾಂಗ್
ಸಿಎಂ ಹೇಳಿಕೆಗೆ ಬೊಮ್ಮಾಯಿ ಟಾಂಗ್
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jul 13, 2024 | 7:10 PM

Share

ಗದಗ, ಜು.13: ಮುಡಾ ಸೈಟ್ ಹಂಚಿಕೆಯಲ್ಲಿ ಯಾವ ಹಗರಣವೂ ಆಗಿಲ್ಲ ಎಂದು ಟಿವಿ9 ನಡೆಸಿದ ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಹೇಳಿದ್ದಾರೆ. ಇದಕ್ಕೆ ಗದಗನಲ್ಲಿ ಪ್ರತಿಕ್ರಿಯಿಸಿದ ಸಂಸದ ಬಸವರಾಜ್ ಬೊಮ್ಮಾಯಿ(Basavaraj Bommai), ‘ಮುಡಾ ಹಗರಣದಲ್ಲಿ ಯಾವುದೇ ಸತ್ಯಾಂಶ ಇಲ್ಲವೆಂದರೆ ಇಷ್ಟು ದೊಡ್ಡ ಚರ್ಚೆ ಆಗುತ್ತಿರಲಿಲ್ಲ ಎಂದು ಸಿಎಂ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಯಾವುದೇ ಹಗರಣ ಇಲ್ಲಾಂದ್ರೆ ಯಾಕೆ ಭಯ?

ಈ ಹಗರಣದಲ್ಲಿ ಏನೂ ಇಲ್ಲ ಅಂದರೆ ಸ್ವತಂತ್ರವಾಗಿ ಯಾಕೆ ತನಿಖೆಗೆ ಹಿಂಜರಿಕೆ. ವಿಚಾರಣೆ ಮಾಡೋದು ಬೇರೆ, ತನಿಖೆ ಮಾಡುವುದು ಬೇರೆ. ಮುಡಾ ಹಗರಣದ ತನಿಖೆಗೆ ಒಪ್ಪಿಸಬೇಕು. ಸಂಪೂರ್ಣವಾಗಿ ಮುಡಾದಲ್ಲಿ ಎಕ್ಸೆಂಜ್ ಸೈಟ್​ಗಳು ಯಾವ್ಯಾವು ಇವೆ. ಯಾವ ಸಂದರ್ಭದಲ್ಲಿ, ಯಾರಿಗೆ ನೀಡಿದ್ದೀರಿ ಸಂಪೂರ್ಣ ತನಿಖೆ ಆಗಬೇಕು. ಹೀಗಾಗಿ ಸಿಬಿಐ ತನಿಖೆಗೆ ನೀಡಲಿ. ಯಾವುದೇ ಹಗರಣ ಇಲ್ಲವೆಂದ ಮೇಲೆ ಯಾಕೆ ಭಯ ಪಡಬೇಕು ಎಂದರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ಪತ್ನಿಗೆ ಬಂದ ಜಮೀನು ಸರ್ಕಾರಿ ಭೂಮಿ -ಹೆಚ್​ಡಿ ಕುಮಾರಸ್ವಾಮಿ

ಇನ್ನು ಬಹಳ ಸ್ಪಷ್ಟವಾಗಿ ಮಾಧ್ಯಮಗಳು ತೋರಿಸಿಕೊಟ್ಟಿದ್ದೀರಿ. ಸಿಎಂ ಸಿದ್ದರಾಮಯ್ಯ ಬೇಕಾದದ್ದು ಹೇಳಲಿ. ಎಕ್ಸೆಂಜ್ ಸೈಟ್ ಯಾವ ಯಾವ ಲೇಔಟ್​ನಲ್ಲಿ ಪಡೆದುಕೊಳ್ಳಬೇಕು ಎನ್ನುವ ಕಾನೂನು ಸ್ಪಷ್ಟವಾಗಿ ಉಲ್ಲಂಘನೆ ಆಗಿದೆ. ಯಾವ ಕಾನೂನು ಉಲ್ಲಂಘನೆ ಆಗಿದೆ ಎಂದು ನಮ್ಮ ಪಕ್ಷದ ನಾಯಕರು ಓದಿ ಹೇಳಿದ್ದಾರೆ. 50/50 ಯಾವ ಲೇಔಟ್​ನಲ್ಲಿ ನೀಡಬೇಕು ಅಲ್ಲಿ ನೀಡಿಲ್ಲ. ಮೇಲ್ನೋಟಕ್ಕೆ ಉಲ್ಲಂಘನೆ ಆಗಿದ್ದು ಸ್ಪಷ್ಟವಾಗಿದೆ. ಯಾವ ಸಂದರ್ಭದಲ್ಲಿ ಸೈಟ್ ಪಡೆದುಕೊಂಡ್ರು, ಯಾವ ರೀತಿ ಪಡೆದುಕೊಂಡರು ಎನ್ನುವ ಪ್ರಶ್ನೆ ಇದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು