AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡವರ ಪಾಲಾಗಬೇಕಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳರ ಪಾಲು, ಗದಗದಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ ವಶಕ್ಕೆ

ಗದಗ ಜಿಲ್ಲೆಯಲ್ಲಿ ಎಗ್ಗಿಲ್ಲದೇ ಅಕ್ರಮ ಅನ್ನಭಾಗ್ಯ ಅಕ್ಕಿ ದಂಧೆ ನಡೆಯುತ್ತಿದೆ. ನರಸಾಪೂರ ಕೈಗಾರಿಕೆ ಪ್ರದೇಶದ ಗೋಡೌನ್​ನಲ್ಲಿ ಅಪಾರ ಪ್ರಮಾಣದಲ್ಲಿ ಅಕ್ಕಿ ಸಂಗ್ರಹ ಮಾಡಲಾಗಿತ್ತು. ಖಚಿತ ಮಾಹಿತಿ ಪಡೆದ ಆಹಾರ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ಅನ್ನಭಾಗ್ಯ ಅಕ್ಕಿ ಸೀಜ್ ಮಾಡಿದ್ದಾರೆ.

ಬಡವರ ಪಾಲಾಗಬೇಕಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳರ ಪಾಲು, ಗದಗದಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ ವಶಕ್ಕೆ
ಗೋಡೌನ್​ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ ವಶಕ್ಕೆ ಪಡೆದ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Jul 08, 2023 | 7:19 PM

Share

ಗದಗ: ಬಡವರ ಪಾಲಾಗಬೇಕಿದ್ದ ಅನ್ನಭಾಗ್ಯ ಯೋಜನೆಯ (Anna Bhagya Scheme) ಅಕ್ಕಿ ಕಳ್ಳರ ಪಾಲಾಗುತ್ತಿದೆ. ಗೋಡೌನ್​ನಲ್ಲಿ ಅಪಾರ ಪ್ರಮಾಣದಲ್ಲಿ ಅಕ್ರಮ‌ ಅಕ್ಕಿ ಸಂಗ್ರಹ ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಆಹಾರ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ಮೌಲ್ಯದ ಅಕ್ಕಿ ವಶಕ್ಕೆ ಪಡೆದ ಘಟನೆ ಜಿಲ್ಲೆಯ ನರಸಾಪೂರ ಕೈಗಾರಿಕೆ ಪ್ರದೇಶದಲ್ಲಿ ನಡೆದಿದೆ.

ದಾಳಿ ವೇಳೆ ಲಕ್ಷಾಂತರ ಮೌಲ್ಯದ 50 ಕೆಜಿಯ 150 ಕ್ಕೂ ಹೆಚ್ಚು ಗೋಣಿ ಚೀಲಗಳು ಪತ್ತೆಯಾಗಿವೆ. ಯಾರಿಗೂ ಗೋತ್ತಾಗಬಾರದು ಅಂತ ಜನನೀಬಿಡ ಪ್ರದೇಶದ ಗೋಡೌನ್​ನಲ್ಲಿ ದಂಧೆಕೋರರು ಅಪಾರ ಪ್ರಮಾಣದಲ್ಲಿ ಅಕ್ಕಿ ಸಂಗ್ರಹ ಮಾಡಿದ್ದರು. ಆದರೆ ಸಾರ್ವಜನಿಕರ ಮಾಹಿತಿ ಹಿನ್ನೆಲೆಯಲ್ಲಿ ಬೆಟಗೇರಿ ಸಿಪಿಐ ಬಿ ಜಿ ಸುಬ್ಬಾಪೂರಮಠ ಹಾಗೂ ಆಹಾರ ಇಲಾಖೆ ಆಹಾರ ನಿರೀಕ್ಷಕಿ ಸುವರ್ಣಾ ಜಂಟಿ‌ ಕಾರ್ಯಾಚರಣೆ ಮಾಡಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಜೂನ್ ತಿಂಗಳಲ್ಲಿ ಅನ್ನಭಾಗ್ಯದ ಅಕ್ಕಿ ಪಡೆಯದವರಿಗಿಲ್ಲ ಹಣ; ಆಹಾರ ಇಲಾಖೆ ನಿರ್ಧಾರ

ಅಕ್ರಮ ಅನ್ನಭಾಗ್ಯ ಅಕ್ಕಿ ಸಂಗ್ರಹ‌ ಮಾಡಿದ ಬಗ್ಗೆ ಅಧಿಕಾರಿಗಳಿಗೆ ಜುಲೈ 7ರ ತಡರಾತ್ರಿ ಮಾಹಿತಿ ತಿಳಿದುಬಂದಿದೆ. ಮಾಹಿತಿ ಸಿಕ್ಕಿದ್ದೇ ತಡ ರಾತ್ರೋರಾತ್ರಿ ಕೈಗಾರಿಕೆ ಪ್ರದೇಶದ ಗೋಡೌನ್ ಮೇಲೆ ದಾಳಿ ಮಾಡಿದ್ದಾರೆ. ತಡರಾತ್ರಿ ಆಗಿದ್ದರಿಂದ ಗೋಡೌನ್ ಸೀಲ್ ಮಾಡಿ ಹೋಗಿದ್ದರು. ಇಂದು ಮಧ್ಯಾಹ್ನ ಆಹಾರ, ಪೊಲೀಸ್ ಹಾಗೂ ಕಂದಾಯ ಇಲಾಖೆ ಸಮ್ಮುಖದಲ್ಲಿ ಸೀಲ್ ಓಪನ್ ಮಾಡಿದ ಅಧಿಕಾರಿಗಳು ಅನ್ನಭಾಗ್ಯ ಅಕ್ಕಿ ಸಂಗ್ರಹ ನೋಡಿ ಶಾಕ್ ಆಗಿದ್ದಾರೆ.

ಅಧಿಕಾರಿಗಳು ಅಕ್ಕಿ ಪರಿಶೀಲನೆ ಮಾಡಿದಾಗ ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿ ಅಂತ ಖಚಿತವಾಗಿದೆ. ಹೀಗಾಗಿ ಅಕ್ಕಿ ತುಂಬಿದ್ದ ಗೋಣಿ ಚೀಲಗಳನ್ನು ಜಪ್ತಿ ಮಾಡಿದ ಪೊಲೀಸರು ಆಹಾರ ಇಲಾಖೆ ವಶಕ್ಕೆ ಒಪ್ಪಿಸಿದ್ದಾರೆ. ಈ ಅಕ್ಕಿ ಯಾವುದೇ ಗೋಡೌನ್​ಗಳಿಂದ ಹೋಗಿದ್ದಲ್ಲ. ಫಲಾನುಭವಿಗಳಿಗೆ ನೀಡಿದ ಅಕ್ಕಿ ಸಂಗ್ರಹ ಮಾಡಿರಬಹುದು ಅಂತ ಆಹಾರ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಗದಗ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲೇ ಇದು ಮೂರನೇ ದಾಳಿಯಾಗಿದ್ದು, ಅಕ್ರಮ ಅಕ್ಕಿ ದಾಸ್ತಾನು ದಂಧೆಗೆ ಕಡಿವಾಣ ಹಾಕಲು ಸಾಕಷ್ಟು ಕ್ರಮ ಕೈಗೊಳ್ಳಾಗಿದೆ ಎಂದು ಆಹಾರ ಇಲಾಖೆ ಅಧಿಕಾರಿ ಬಾಬುಸಾಬ್ ಹೇಳಿದ್ದಾರೆ.

ಅಕ್ರಮ ಅಕ್ಕಿ ಸಾಗಾಟಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ತಾಲೂಕು ಮಟ್ಟದಲ್ಲಿ ಆಹಾರ, ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳ ಜಾಗೃತ ತಂಡಗಳು ರಚನೆ ಮಾಡಲಾಗಿದೆ. ಸರ್ಕಾರದ ಉದ್ದೇಶ ಯಶಸ್ವಿಗಾಗಿ ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಅವೆಲ್ಲವನ್ನು ಕಟ್ಟುನಿಟ್ಟಾಗಿ ಕೈಗೊಂಡಿದ್ದೇವೆ. ಈ ಬಾರಿ ಬಾಲ ಬಿಚ್ಚಿದರೆ ತಕ್ಕಪಾಠ ಕಲಿಸುತ್ತೇವೆ ಎಂದು ಆಹಾರ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:17 pm, Sat, 8 July 23

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ