AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸಪ್ ಗ್ರೂಪ್​ನಲ್ಲಿ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ, ಅಕೌಂಟ್​ನಲ್ಲಿದ್ದ ಲಕ್ಷ ಲಕ್ಷ ಹಣ ಮಾಯ

ಗದಗ(Gadag) ನಗರದ ರಾಜೀವ್​ ಗಾಂಧಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಟ್ಸಪ್ ಗ್ರೂಪ್‌ಗೆ ಬಂದ ಮೆಸೇಜ್​ವೊಂದನ್ನು ಓಪನ್ ಮಾಡಿ ನೋಡಿದ್ದಕ್ಕೆ ಬ್ಯಾಂಕ್​ ಖಾತೆಯಲ್ಲಿದ್ದ ಮೂರುವರೆ ಲಕ್ಷ ಹಣ ಮಾಯವಾಗಿರುವ ಘಟನೆ ನಡೆದಿದೆ. ಸಧ್ಯ ರಾಜೀವ್ ಗಾಂಧಿ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

ವಾಟ್ಸಪ್ ಗ್ರೂಪ್​ನಲ್ಲಿ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ, ಅಕೌಂಟ್​ನಲ್ಲಿದ್ದ ಲಕ್ಷ ಲಕ್ಷ ಹಣ ಮಾಯ
ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jun 07, 2024 | 9:31 PM

Share

ಗದಗ, ಜೂ.07: ವಾಟ್ಸಪ್ ಗ್ರೂಪ್‌ಗೆ ಬಂದ ಮೆಸೇಜ್​ವೊಂದನ್ನು ಓಪನ್ ಮಾಡಿ ನೋಡಿದ್ದಕ್ಕೆ ಬ್ಯಾಂಕ್​ ಖಾತೆಯಲ್ಲಿದ್ದ ಮೂರುವರೆ ಲಕ್ಷ ಹಣ ಮಾಯವಾಗಿರುವ ಘಟನೆ ಗದಗ(Gadag) ನಗರದ ರಾಜೀವ್​ ಗಾಂಧಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೋಣ ಶಾಸಕ ಜಿಎಸ್ ಪಾಟೀಲ್​​  ಲೇಔಟ್‌ನಲ್ಲಿ ವಾಸವಾಗಿರುವ ಅನಿಲ್ ಮಲ್ಲಪ್ಪ ಚಿನ್ನಾಪುರ ಎಂಬ ವ್ಯಾಪಾರಿಯೊಬ್ಬರಿಗೆ ಮೊದಲು ವಾಟ್ಸಪ್ ಗ್ರೂಪ್​ನಲ್ಲಿ ಯುನಿಯನ್ ಬ್ಯಾಂಕ್ ಹೆಸರಿನಲ್ಲಿ APK ಲಿಂಕ್ ಮೆಸೇಜ್​ ಬಂದಿದೆ. ಅದನ್ನು ಒಂದು ಬಾರಿ ಅನಿಲ್​ ನೋಡಿ‌ಬಿಟ್ಟಿದ್ದ‌ರು.

ಮರುದಿನವೇ ಯುನಿಯನ್ ಬ್ಯಾಂಕ್ ಹೆಡ್‌ ಎಂದು ಅನಿಲ್​ಗೆ ಓರ್ವ ಫೋನ್​ ಕರೆ ಮಾಡಿದ್ದಾನೆ. ಬಳಿಕ ನಿಮ್ಮ ಬ್ಯಾಂಕ್ ಖಾತೆ ಡಿವ್ ಆಗಿದೆ ಎಂದು ಕೆಲವು ನಿಮಿಷಗಳ ಮಾತುಕತೆ ನಡೆಸಿದ್ದಾರೆ. ನಂತರ ಅರ್ಧಗಂಟೆಯಲ್ಲಿ ಮೊದಲ ಹಂತದಲ್ಲಿ 50 ಸಾವಿರ, 2ನೇ ಹಂತದಲ್ಲಿ 2,25,000 ಹೀಗೆ ಒಟ್ಟು 3,74,998 ರೂಪಾಯಿಯನ್ನು ವಂಚಕರು ಅವರ ಬ್ಯಾಂಕ್​ ಖಾತೆಯಿಂದ ಎಗರಿಸಿದ್ದಾರೆ. ಇದರಿಂದ ಸೈಬರ್ ಕ್ರೈಂ ಠಾಣೆಗೆ ದೂರು‌‌ ನೀಡಲು ಮುಂದಾದಾಗ ತಾಂತ್ರಿಕ ತೊಂದರೆ ಅನುಭವಿಸಿ, ತಡವಾಗಿ ರಾಜೀವ್ ಗಾಂಧಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:Cyber Crime: ಸೈಬರ್​ ವಂಚನೆಯಲ್ಲಿ 2 ಕೋಟಿ ರೂ. ಕಳೆದುಕೊಂಡ ಕಾಫಿ ಬೆಳಗಾರ

ಈ ಕುರಿತು ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಅನಿಲ್ ಅವರ ಖಾತೆಯಿಂದ ಎಗರಿಸಿದ ಮೊತ್ತ,‌ ತಮಿಳುನಾಡು ಹಾಗೂ ಬಾಂಗ್ಲಾದೇಶದಲ್ಲಿರುವ ಖಾತೆಗಳಿಗೆ‌ ಜಮೆ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ನಾಗರಿಕರು ಪದೇ ಪದೇ ಸೈಬರ್ ವಂಚನೆಗಳಿಗೆ ಮೋಸ ಹೋಗಿ,‌ ಲಕ್ಷಗಟ್ಟಲೇ ಹಣ ಕಳೆದುಕೊಳ್ಳುತ್ತಿದ್ದು, ಸೈಬರ್ ಕ್ರೈಂ ಪೊಲೀಸ್‌ ಠಾಣೆ ಇದ್ದರೂ ಹಣ‌ ಕಳೆದುಕೊಂಡವರಿಗೆ ನೋ ಯೂಸ್ ಎಂಬಂತಾಗಿದೆ. ಸಧ್ಯ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 pm, Fri, 7 June 24

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್