AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸಪ್ ಗ್ರೂಪ್​ನಲ್ಲಿ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ, ಅಕೌಂಟ್​ನಲ್ಲಿದ್ದ ಲಕ್ಷ ಲಕ್ಷ ಹಣ ಮಾಯ

ಗದಗ(Gadag) ನಗರದ ರಾಜೀವ್​ ಗಾಂಧಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಟ್ಸಪ್ ಗ್ರೂಪ್‌ಗೆ ಬಂದ ಮೆಸೇಜ್​ವೊಂದನ್ನು ಓಪನ್ ಮಾಡಿ ನೋಡಿದ್ದಕ್ಕೆ ಬ್ಯಾಂಕ್​ ಖಾತೆಯಲ್ಲಿದ್ದ ಮೂರುವರೆ ಲಕ್ಷ ಹಣ ಮಾಯವಾಗಿರುವ ಘಟನೆ ನಡೆದಿದೆ. ಸಧ್ಯ ರಾಜೀವ್ ಗಾಂಧಿ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

ವಾಟ್ಸಪ್ ಗ್ರೂಪ್​ನಲ್ಲಿ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ, ಅಕೌಂಟ್​ನಲ್ಲಿದ್ದ ಲಕ್ಷ ಲಕ್ಷ ಹಣ ಮಾಯ
ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Jun 07, 2024 | 9:31 PM

Share

ಗದಗ, ಜೂ.07: ವಾಟ್ಸಪ್ ಗ್ರೂಪ್‌ಗೆ ಬಂದ ಮೆಸೇಜ್​ವೊಂದನ್ನು ಓಪನ್ ಮಾಡಿ ನೋಡಿದ್ದಕ್ಕೆ ಬ್ಯಾಂಕ್​ ಖಾತೆಯಲ್ಲಿದ್ದ ಮೂರುವರೆ ಲಕ್ಷ ಹಣ ಮಾಯವಾಗಿರುವ ಘಟನೆ ಗದಗ(Gadag) ನಗರದ ರಾಜೀವ್​ ಗಾಂಧಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೋಣ ಶಾಸಕ ಜಿಎಸ್ ಪಾಟೀಲ್​​  ಲೇಔಟ್‌ನಲ್ಲಿ ವಾಸವಾಗಿರುವ ಅನಿಲ್ ಮಲ್ಲಪ್ಪ ಚಿನ್ನಾಪುರ ಎಂಬ ವ್ಯಾಪಾರಿಯೊಬ್ಬರಿಗೆ ಮೊದಲು ವಾಟ್ಸಪ್ ಗ್ರೂಪ್​ನಲ್ಲಿ ಯುನಿಯನ್ ಬ್ಯಾಂಕ್ ಹೆಸರಿನಲ್ಲಿ APK ಲಿಂಕ್ ಮೆಸೇಜ್​ ಬಂದಿದೆ. ಅದನ್ನು ಒಂದು ಬಾರಿ ಅನಿಲ್​ ನೋಡಿ‌ಬಿಟ್ಟಿದ್ದ‌ರು.

ಮರುದಿನವೇ ಯುನಿಯನ್ ಬ್ಯಾಂಕ್ ಹೆಡ್‌ ಎಂದು ಅನಿಲ್​ಗೆ ಓರ್ವ ಫೋನ್​ ಕರೆ ಮಾಡಿದ್ದಾನೆ. ಬಳಿಕ ನಿಮ್ಮ ಬ್ಯಾಂಕ್ ಖಾತೆ ಡಿವ್ ಆಗಿದೆ ಎಂದು ಕೆಲವು ನಿಮಿಷಗಳ ಮಾತುಕತೆ ನಡೆಸಿದ್ದಾರೆ. ನಂತರ ಅರ್ಧಗಂಟೆಯಲ್ಲಿ ಮೊದಲ ಹಂತದಲ್ಲಿ 50 ಸಾವಿರ, 2ನೇ ಹಂತದಲ್ಲಿ 2,25,000 ಹೀಗೆ ಒಟ್ಟು 3,74,998 ರೂಪಾಯಿಯನ್ನು ವಂಚಕರು ಅವರ ಬ್ಯಾಂಕ್​ ಖಾತೆಯಿಂದ ಎಗರಿಸಿದ್ದಾರೆ. ಇದರಿಂದ ಸೈಬರ್ ಕ್ರೈಂ ಠಾಣೆಗೆ ದೂರು‌‌ ನೀಡಲು ಮುಂದಾದಾಗ ತಾಂತ್ರಿಕ ತೊಂದರೆ ಅನುಭವಿಸಿ, ತಡವಾಗಿ ರಾಜೀವ್ ಗಾಂಧಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:Cyber Crime: ಸೈಬರ್​ ವಂಚನೆಯಲ್ಲಿ 2 ಕೋಟಿ ರೂ. ಕಳೆದುಕೊಂಡ ಕಾಫಿ ಬೆಳಗಾರ

ಈ ಕುರಿತು ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಅನಿಲ್ ಅವರ ಖಾತೆಯಿಂದ ಎಗರಿಸಿದ ಮೊತ್ತ,‌ ತಮಿಳುನಾಡು ಹಾಗೂ ಬಾಂಗ್ಲಾದೇಶದಲ್ಲಿರುವ ಖಾತೆಗಳಿಗೆ‌ ಜಮೆ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ನಾಗರಿಕರು ಪದೇ ಪದೇ ಸೈಬರ್ ವಂಚನೆಗಳಿಗೆ ಮೋಸ ಹೋಗಿ,‌ ಲಕ್ಷಗಟ್ಟಲೇ ಹಣ ಕಳೆದುಕೊಳ್ಳುತ್ತಿದ್ದು, ಸೈಬರ್ ಕ್ರೈಂ ಪೊಲೀಸ್‌ ಠಾಣೆ ಇದ್ದರೂ ಹಣ‌ ಕಳೆದುಕೊಂಡವರಿಗೆ ನೋ ಯೂಸ್ ಎಂಬಂತಾಗಿದೆ. ಸಧ್ಯ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 pm, Fri, 7 June 24

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್