Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸಪ್ ಗ್ರೂಪ್​ನಲ್ಲಿ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ, ಅಕೌಂಟ್​ನಲ್ಲಿದ್ದ ಲಕ್ಷ ಲಕ್ಷ ಹಣ ಮಾಯ

ಗದಗ(Gadag) ನಗರದ ರಾಜೀವ್​ ಗಾಂಧಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಟ್ಸಪ್ ಗ್ರೂಪ್‌ಗೆ ಬಂದ ಮೆಸೇಜ್​ವೊಂದನ್ನು ಓಪನ್ ಮಾಡಿ ನೋಡಿದ್ದಕ್ಕೆ ಬ್ಯಾಂಕ್​ ಖಾತೆಯಲ್ಲಿದ್ದ ಮೂರುವರೆ ಲಕ್ಷ ಹಣ ಮಾಯವಾಗಿರುವ ಘಟನೆ ನಡೆದಿದೆ. ಸಧ್ಯ ರಾಜೀವ್ ಗಾಂಧಿ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

ವಾಟ್ಸಪ್ ಗ್ರೂಪ್​ನಲ್ಲಿ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ, ಅಕೌಂಟ್​ನಲ್ಲಿದ್ದ ಲಕ್ಷ ಲಕ್ಷ ಹಣ ಮಾಯ
ಗದಗ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 07, 2024 | 9:31 PM

ಗದಗ, ಜೂ.07: ವಾಟ್ಸಪ್ ಗ್ರೂಪ್‌ಗೆ ಬಂದ ಮೆಸೇಜ್​ವೊಂದನ್ನು ಓಪನ್ ಮಾಡಿ ನೋಡಿದ್ದಕ್ಕೆ ಬ್ಯಾಂಕ್​ ಖಾತೆಯಲ್ಲಿದ್ದ ಮೂರುವರೆ ಲಕ್ಷ ಹಣ ಮಾಯವಾಗಿರುವ ಘಟನೆ ಗದಗ(Gadag) ನಗರದ ರಾಜೀವ್​ ಗಾಂಧಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೋಣ ಶಾಸಕ ಜಿಎಸ್ ಪಾಟೀಲ್​​  ಲೇಔಟ್‌ನಲ್ಲಿ ವಾಸವಾಗಿರುವ ಅನಿಲ್ ಮಲ್ಲಪ್ಪ ಚಿನ್ನಾಪುರ ಎಂಬ ವ್ಯಾಪಾರಿಯೊಬ್ಬರಿಗೆ ಮೊದಲು ವಾಟ್ಸಪ್ ಗ್ರೂಪ್​ನಲ್ಲಿ ಯುನಿಯನ್ ಬ್ಯಾಂಕ್ ಹೆಸರಿನಲ್ಲಿ APK ಲಿಂಕ್ ಮೆಸೇಜ್​ ಬಂದಿದೆ. ಅದನ್ನು ಒಂದು ಬಾರಿ ಅನಿಲ್​ ನೋಡಿ‌ಬಿಟ್ಟಿದ್ದ‌ರು.

ಮರುದಿನವೇ ಯುನಿಯನ್ ಬ್ಯಾಂಕ್ ಹೆಡ್‌ ಎಂದು ಅನಿಲ್​ಗೆ ಓರ್ವ ಫೋನ್​ ಕರೆ ಮಾಡಿದ್ದಾನೆ. ಬಳಿಕ ನಿಮ್ಮ ಬ್ಯಾಂಕ್ ಖಾತೆ ಡಿವ್ ಆಗಿದೆ ಎಂದು ಕೆಲವು ನಿಮಿಷಗಳ ಮಾತುಕತೆ ನಡೆಸಿದ್ದಾರೆ. ನಂತರ ಅರ್ಧಗಂಟೆಯಲ್ಲಿ ಮೊದಲ ಹಂತದಲ್ಲಿ 50 ಸಾವಿರ, 2ನೇ ಹಂತದಲ್ಲಿ 2,25,000 ಹೀಗೆ ಒಟ್ಟು 3,74,998 ರೂಪಾಯಿಯನ್ನು ವಂಚಕರು ಅವರ ಬ್ಯಾಂಕ್​ ಖಾತೆಯಿಂದ ಎಗರಿಸಿದ್ದಾರೆ. ಇದರಿಂದ ಸೈಬರ್ ಕ್ರೈಂ ಠಾಣೆಗೆ ದೂರು‌‌ ನೀಡಲು ಮುಂದಾದಾಗ ತಾಂತ್ರಿಕ ತೊಂದರೆ ಅನುಭವಿಸಿ, ತಡವಾಗಿ ರಾಜೀವ್ ಗಾಂಧಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:Cyber Crime: ಸೈಬರ್​ ವಂಚನೆಯಲ್ಲಿ 2 ಕೋಟಿ ರೂ. ಕಳೆದುಕೊಂಡ ಕಾಫಿ ಬೆಳಗಾರ

ಈ ಕುರಿತು ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಅನಿಲ್ ಅವರ ಖಾತೆಯಿಂದ ಎಗರಿಸಿದ ಮೊತ್ತ,‌ ತಮಿಳುನಾಡು ಹಾಗೂ ಬಾಂಗ್ಲಾದೇಶದಲ್ಲಿರುವ ಖಾತೆಗಳಿಗೆ‌ ಜಮೆ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ನಾಗರಿಕರು ಪದೇ ಪದೇ ಸೈಬರ್ ವಂಚನೆಗಳಿಗೆ ಮೋಸ ಹೋಗಿ,‌ ಲಕ್ಷಗಟ್ಟಲೇ ಹಣ ಕಳೆದುಕೊಳ್ಳುತ್ತಿದ್ದು, ಸೈಬರ್ ಕ್ರೈಂ ಪೊಲೀಸ್‌ ಠಾಣೆ ಇದ್ದರೂ ಹಣ‌ ಕಳೆದುಕೊಂಡವರಿಗೆ ನೋ ಯೂಸ್ ಎಂಬಂತಾಗಿದೆ. ಸಧ್ಯ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 pm, Fri, 7 June 24

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ