ವಾಟ್ಸಪ್ ಗ್ರೂಪ್​ನಲ್ಲಿ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ, ಅಕೌಂಟ್​ನಲ್ಲಿದ್ದ ಲಕ್ಷ ಲಕ್ಷ ಹಣ ಮಾಯ

ಗದಗ(Gadag) ನಗರದ ರಾಜೀವ್​ ಗಾಂಧಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಟ್ಸಪ್ ಗ್ರೂಪ್‌ಗೆ ಬಂದ ಮೆಸೇಜ್​ವೊಂದನ್ನು ಓಪನ್ ಮಾಡಿ ನೋಡಿದ್ದಕ್ಕೆ ಬ್ಯಾಂಕ್​ ಖಾತೆಯಲ್ಲಿದ್ದ ಮೂರುವರೆ ಲಕ್ಷ ಹಣ ಮಾಯವಾಗಿರುವ ಘಟನೆ ನಡೆದಿದೆ. ಸಧ್ಯ ರಾಜೀವ್ ಗಾಂಧಿ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

ವಾಟ್ಸಪ್ ಗ್ರೂಪ್​ನಲ್ಲಿ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ, ಅಕೌಂಟ್​ನಲ್ಲಿದ್ದ ಲಕ್ಷ ಲಕ್ಷ ಹಣ ಮಾಯ
ಗದಗ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 07, 2024 | 9:31 PM

ಗದಗ, ಜೂ.07: ವಾಟ್ಸಪ್ ಗ್ರೂಪ್‌ಗೆ ಬಂದ ಮೆಸೇಜ್​ವೊಂದನ್ನು ಓಪನ್ ಮಾಡಿ ನೋಡಿದ್ದಕ್ಕೆ ಬ್ಯಾಂಕ್​ ಖಾತೆಯಲ್ಲಿದ್ದ ಮೂರುವರೆ ಲಕ್ಷ ಹಣ ಮಾಯವಾಗಿರುವ ಘಟನೆ ಗದಗ(Gadag) ನಗರದ ರಾಜೀವ್​ ಗಾಂಧಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೋಣ ಶಾಸಕ ಜಿಎಸ್ ಪಾಟೀಲ್​​  ಲೇಔಟ್‌ನಲ್ಲಿ ವಾಸವಾಗಿರುವ ಅನಿಲ್ ಮಲ್ಲಪ್ಪ ಚಿನ್ನಾಪುರ ಎಂಬ ವ್ಯಾಪಾರಿಯೊಬ್ಬರಿಗೆ ಮೊದಲು ವಾಟ್ಸಪ್ ಗ್ರೂಪ್​ನಲ್ಲಿ ಯುನಿಯನ್ ಬ್ಯಾಂಕ್ ಹೆಸರಿನಲ್ಲಿ APK ಲಿಂಕ್ ಮೆಸೇಜ್​ ಬಂದಿದೆ. ಅದನ್ನು ಒಂದು ಬಾರಿ ಅನಿಲ್​ ನೋಡಿ‌ಬಿಟ್ಟಿದ್ದ‌ರು.

ಮರುದಿನವೇ ಯುನಿಯನ್ ಬ್ಯಾಂಕ್ ಹೆಡ್‌ ಎಂದು ಅನಿಲ್​ಗೆ ಓರ್ವ ಫೋನ್​ ಕರೆ ಮಾಡಿದ್ದಾನೆ. ಬಳಿಕ ನಿಮ್ಮ ಬ್ಯಾಂಕ್ ಖಾತೆ ಡಿವ್ ಆಗಿದೆ ಎಂದು ಕೆಲವು ನಿಮಿಷಗಳ ಮಾತುಕತೆ ನಡೆಸಿದ್ದಾರೆ. ನಂತರ ಅರ್ಧಗಂಟೆಯಲ್ಲಿ ಮೊದಲ ಹಂತದಲ್ಲಿ 50 ಸಾವಿರ, 2ನೇ ಹಂತದಲ್ಲಿ 2,25,000 ಹೀಗೆ ಒಟ್ಟು 3,74,998 ರೂಪಾಯಿಯನ್ನು ವಂಚಕರು ಅವರ ಬ್ಯಾಂಕ್​ ಖಾತೆಯಿಂದ ಎಗರಿಸಿದ್ದಾರೆ. ಇದರಿಂದ ಸೈಬರ್ ಕ್ರೈಂ ಠಾಣೆಗೆ ದೂರು‌‌ ನೀಡಲು ಮುಂದಾದಾಗ ತಾಂತ್ರಿಕ ತೊಂದರೆ ಅನುಭವಿಸಿ, ತಡವಾಗಿ ರಾಜೀವ್ ಗಾಂಧಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:Cyber Crime: ಸೈಬರ್​ ವಂಚನೆಯಲ್ಲಿ 2 ಕೋಟಿ ರೂ. ಕಳೆದುಕೊಂಡ ಕಾಫಿ ಬೆಳಗಾರ

ಈ ಕುರಿತು ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಅನಿಲ್ ಅವರ ಖಾತೆಯಿಂದ ಎಗರಿಸಿದ ಮೊತ್ತ,‌ ತಮಿಳುನಾಡು ಹಾಗೂ ಬಾಂಗ್ಲಾದೇಶದಲ್ಲಿರುವ ಖಾತೆಗಳಿಗೆ‌ ಜಮೆ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ನಾಗರಿಕರು ಪದೇ ಪದೇ ಸೈಬರ್ ವಂಚನೆಗಳಿಗೆ ಮೋಸ ಹೋಗಿ,‌ ಲಕ್ಷಗಟ್ಟಲೇ ಹಣ ಕಳೆದುಕೊಳ್ಳುತ್ತಿದ್ದು, ಸೈಬರ್ ಕ್ರೈಂ ಪೊಲೀಸ್‌ ಠಾಣೆ ಇದ್ದರೂ ಹಣ‌ ಕಳೆದುಕೊಂಡವರಿಗೆ ನೋ ಯೂಸ್ ಎಂಬಂತಾಗಿದೆ. ಸಧ್ಯ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 pm, Fri, 7 June 24

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್