AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸಪ್ ಗ್ರೂಪ್​ನಲ್ಲಿ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ, ಅಕೌಂಟ್​ನಲ್ಲಿದ್ದ ಲಕ್ಷ ಲಕ್ಷ ಹಣ ಮಾಯ

ಗದಗ(Gadag) ನಗರದ ರಾಜೀವ್​ ಗಾಂಧಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಟ್ಸಪ್ ಗ್ರೂಪ್‌ಗೆ ಬಂದ ಮೆಸೇಜ್​ವೊಂದನ್ನು ಓಪನ್ ಮಾಡಿ ನೋಡಿದ್ದಕ್ಕೆ ಬ್ಯಾಂಕ್​ ಖಾತೆಯಲ್ಲಿದ್ದ ಮೂರುವರೆ ಲಕ್ಷ ಹಣ ಮಾಯವಾಗಿರುವ ಘಟನೆ ನಡೆದಿದೆ. ಸಧ್ಯ ರಾಜೀವ್ ಗಾಂಧಿ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

ವಾಟ್ಸಪ್ ಗ್ರೂಪ್​ನಲ್ಲಿ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ, ಅಕೌಂಟ್​ನಲ್ಲಿದ್ದ ಲಕ್ಷ ಲಕ್ಷ ಹಣ ಮಾಯ
ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jun 07, 2024 | 9:31 PM

Share

ಗದಗ, ಜೂ.07: ವಾಟ್ಸಪ್ ಗ್ರೂಪ್‌ಗೆ ಬಂದ ಮೆಸೇಜ್​ವೊಂದನ್ನು ಓಪನ್ ಮಾಡಿ ನೋಡಿದ್ದಕ್ಕೆ ಬ್ಯಾಂಕ್​ ಖಾತೆಯಲ್ಲಿದ್ದ ಮೂರುವರೆ ಲಕ್ಷ ಹಣ ಮಾಯವಾಗಿರುವ ಘಟನೆ ಗದಗ(Gadag) ನಗರದ ರಾಜೀವ್​ ಗಾಂಧಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೋಣ ಶಾಸಕ ಜಿಎಸ್ ಪಾಟೀಲ್​​  ಲೇಔಟ್‌ನಲ್ಲಿ ವಾಸವಾಗಿರುವ ಅನಿಲ್ ಮಲ್ಲಪ್ಪ ಚಿನ್ನಾಪುರ ಎಂಬ ವ್ಯಾಪಾರಿಯೊಬ್ಬರಿಗೆ ಮೊದಲು ವಾಟ್ಸಪ್ ಗ್ರೂಪ್​ನಲ್ಲಿ ಯುನಿಯನ್ ಬ್ಯಾಂಕ್ ಹೆಸರಿನಲ್ಲಿ APK ಲಿಂಕ್ ಮೆಸೇಜ್​ ಬಂದಿದೆ. ಅದನ್ನು ಒಂದು ಬಾರಿ ಅನಿಲ್​ ನೋಡಿ‌ಬಿಟ್ಟಿದ್ದ‌ರು.

ಮರುದಿನವೇ ಯುನಿಯನ್ ಬ್ಯಾಂಕ್ ಹೆಡ್‌ ಎಂದು ಅನಿಲ್​ಗೆ ಓರ್ವ ಫೋನ್​ ಕರೆ ಮಾಡಿದ್ದಾನೆ. ಬಳಿಕ ನಿಮ್ಮ ಬ್ಯಾಂಕ್ ಖಾತೆ ಡಿವ್ ಆಗಿದೆ ಎಂದು ಕೆಲವು ನಿಮಿಷಗಳ ಮಾತುಕತೆ ನಡೆಸಿದ್ದಾರೆ. ನಂತರ ಅರ್ಧಗಂಟೆಯಲ್ಲಿ ಮೊದಲ ಹಂತದಲ್ಲಿ 50 ಸಾವಿರ, 2ನೇ ಹಂತದಲ್ಲಿ 2,25,000 ಹೀಗೆ ಒಟ್ಟು 3,74,998 ರೂಪಾಯಿಯನ್ನು ವಂಚಕರು ಅವರ ಬ್ಯಾಂಕ್​ ಖಾತೆಯಿಂದ ಎಗರಿಸಿದ್ದಾರೆ. ಇದರಿಂದ ಸೈಬರ್ ಕ್ರೈಂ ಠಾಣೆಗೆ ದೂರು‌‌ ನೀಡಲು ಮುಂದಾದಾಗ ತಾಂತ್ರಿಕ ತೊಂದರೆ ಅನುಭವಿಸಿ, ತಡವಾಗಿ ರಾಜೀವ್ ಗಾಂಧಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:Cyber Crime: ಸೈಬರ್​ ವಂಚನೆಯಲ್ಲಿ 2 ಕೋಟಿ ರೂ. ಕಳೆದುಕೊಂಡ ಕಾಫಿ ಬೆಳಗಾರ

ಈ ಕುರಿತು ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಅನಿಲ್ ಅವರ ಖಾತೆಯಿಂದ ಎಗರಿಸಿದ ಮೊತ್ತ,‌ ತಮಿಳುನಾಡು ಹಾಗೂ ಬಾಂಗ್ಲಾದೇಶದಲ್ಲಿರುವ ಖಾತೆಗಳಿಗೆ‌ ಜಮೆ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ನಾಗರಿಕರು ಪದೇ ಪದೇ ಸೈಬರ್ ವಂಚನೆಗಳಿಗೆ ಮೋಸ ಹೋಗಿ,‌ ಲಕ್ಷಗಟ್ಟಲೇ ಹಣ ಕಳೆದುಕೊಳ್ಳುತ್ತಿದ್ದು, ಸೈಬರ್ ಕ್ರೈಂ ಪೊಲೀಸ್‌ ಠಾಣೆ ಇದ್ದರೂ ಹಣ‌ ಕಳೆದುಕೊಂಡವರಿಗೆ ನೋ ಯೂಸ್ ಎಂಬಂತಾಗಿದೆ. ಸಧ್ಯ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 pm, Fri, 7 June 24

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ