AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸಪ್ ಗ್ರೂಪ್​ನಲ್ಲಿ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ, ಅಕೌಂಟ್​ನಲ್ಲಿದ್ದ ಲಕ್ಷ ಲಕ್ಷ ಹಣ ಮಾಯ

ಗದಗ(Gadag) ನಗರದ ರಾಜೀವ್​ ಗಾಂಧಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಟ್ಸಪ್ ಗ್ರೂಪ್‌ಗೆ ಬಂದ ಮೆಸೇಜ್​ವೊಂದನ್ನು ಓಪನ್ ಮಾಡಿ ನೋಡಿದ್ದಕ್ಕೆ ಬ್ಯಾಂಕ್​ ಖಾತೆಯಲ್ಲಿದ್ದ ಮೂರುವರೆ ಲಕ್ಷ ಹಣ ಮಾಯವಾಗಿರುವ ಘಟನೆ ನಡೆದಿದೆ. ಸಧ್ಯ ರಾಜೀವ್ ಗಾಂಧಿ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

ವಾಟ್ಸಪ್ ಗ್ರೂಪ್​ನಲ್ಲಿ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ, ಅಕೌಂಟ್​ನಲ್ಲಿದ್ದ ಲಕ್ಷ ಲಕ್ಷ ಹಣ ಮಾಯ
ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Jun 07, 2024 | 9:31 PM

Share

ಗದಗ, ಜೂ.07: ವಾಟ್ಸಪ್ ಗ್ರೂಪ್‌ಗೆ ಬಂದ ಮೆಸೇಜ್​ವೊಂದನ್ನು ಓಪನ್ ಮಾಡಿ ನೋಡಿದ್ದಕ್ಕೆ ಬ್ಯಾಂಕ್​ ಖಾತೆಯಲ್ಲಿದ್ದ ಮೂರುವರೆ ಲಕ್ಷ ಹಣ ಮಾಯವಾಗಿರುವ ಘಟನೆ ಗದಗ(Gadag) ನಗರದ ರಾಜೀವ್​ ಗಾಂಧಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೋಣ ಶಾಸಕ ಜಿಎಸ್ ಪಾಟೀಲ್​​  ಲೇಔಟ್‌ನಲ್ಲಿ ವಾಸವಾಗಿರುವ ಅನಿಲ್ ಮಲ್ಲಪ್ಪ ಚಿನ್ನಾಪುರ ಎಂಬ ವ್ಯಾಪಾರಿಯೊಬ್ಬರಿಗೆ ಮೊದಲು ವಾಟ್ಸಪ್ ಗ್ರೂಪ್​ನಲ್ಲಿ ಯುನಿಯನ್ ಬ್ಯಾಂಕ್ ಹೆಸರಿನಲ್ಲಿ APK ಲಿಂಕ್ ಮೆಸೇಜ್​ ಬಂದಿದೆ. ಅದನ್ನು ಒಂದು ಬಾರಿ ಅನಿಲ್​ ನೋಡಿ‌ಬಿಟ್ಟಿದ್ದ‌ರು.

ಮರುದಿನವೇ ಯುನಿಯನ್ ಬ್ಯಾಂಕ್ ಹೆಡ್‌ ಎಂದು ಅನಿಲ್​ಗೆ ಓರ್ವ ಫೋನ್​ ಕರೆ ಮಾಡಿದ್ದಾನೆ. ಬಳಿಕ ನಿಮ್ಮ ಬ್ಯಾಂಕ್ ಖಾತೆ ಡಿವ್ ಆಗಿದೆ ಎಂದು ಕೆಲವು ನಿಮಿಷಗಳ ಮಾತುಕತೆ ನಡೆಸಿದ್ದಾರೆ. ನಂತರ ಅರ್ಧಗಂಟೆಯಲ್ಲಿ ಮೊದಲ ಹಂತದಲ್ಲಿ 50 ಸಾವಿರ, 2ನೇ ಹಂತದಲ್ಲಿ 2,25,000 ಹೀಗೆ ಒಟ್ಟು 3,74,998 ರೂಪಾಯಿಯನ್ನು ವಂಚಕರು ಅವರ ಬ್ಯಾಂಕ್​ ಖಾತೆಯಿಂದ ಎಗರಿಸಿದ್ದಾರೆ. ಇದರಿಂದ ಸೈಬರ್ ಕ್ರೈಂ ಠಾಣೆಗೆ ದೂರು‌‌ ನೀಡಲು ಮುಂದಾದಾಗ ತಾಂತ್ರಿಕ ತೊಂದರೆ ಅನುಭವಿಸಿ, ತಡವಾಗಿ ರಾಜೀವ್ ಗಾಂಧಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:Cyber Crime: ಸೈಬರ್​ ವಂಚನೆಯಲ್ಲಿ 2 ಕೋಟಿ ರೂ. ಕಳೆದುಕೊಂಡ ಕಾಫಿ ಬೆಳಗಾರ

ಈ ಕುರಿತು ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಅನಿಲ್ ಅವರ ಖಾತೆಯಿಂದ ಎಗರಿಸಿದ ಮೊತ್ತ,‌ ತಮಿಳುನಾಡು ಹಾಗೂ ಬಾಂಗ್ಲಾದೇಶದಲ್ಲಿರುವ ಖಾತೆಗಳಿಗೆ‌ ಜಮೆ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ನಾಗರಿಕರು ಪದೇ ಪದೇ ಸೈಬರ್ ವಂಚನೆಗಳಿಗೆ ಮೋಸ ಹೋಗಿ,‌ ಲಕ್ಷಗಟ್ಟಲೇ ಹಣ ಕಳೆದುಕೊಳ್ಳುತ್ತಿದ್ದು, ಸೈಬರ್ ಕ್ರೈಂ ಪೊಲೀಸ್‌ ಠಾಣೆ ಇದ್ದರೂ ಹಣ‌ ಕಳೆದುಕೊಂಡವರಿಗೆ ನೋ ಯೂಸ್ ಎಂಬಂತಾಗಿದೆ. ಸಧ್ಯ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 pm, Fri, 7 June 24

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​