ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್, ಆರೋಪಿ ಸಮೇತ ಎಸ್ಕೇಪ್

ಗದಗ ನಗರದ ಬೆಟಗೇರಿ(Betageri) ರೈಲ್ವೆ ಅಂಡರ್ ಬ್ರಿಜ್ಜ್ ಬಳಿ ಆರೋಪಿಯನ್ನ ಕರೆದೊಯ್ಯುವ ವೇಳೆ ಪೊಲೀಸರ(Police) ಮೇಲೆಯೇ ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಮಾಡಿ ಆರೋಪಿ ಸಮೇತ ಎಸ್ಕೇಪ್ ಆಗಿರುವ ಘಟನೆ ನಡೆದಿದೆ. ಗಾಯಾಳು ಪೊಲೀಸರನ್ನು ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲು ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್, ಆರೋಪಿ ಸಮೇತ ಎಸ್ಕೇಪ್
ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್
Edited By: ಕಿರಣ್ ಹನುಮಂತ್​ ಮಾದಾರ್

Updated on: Jun 28, 2024 | 11:11 PM

ಗದಗ, ಜೂ.28: ಆರೋಪಿಯನ್ನ ಕರೆದೊಯ್ಯುವ ವೇಳೆ ಪೊಲೀಸರ(Police) ಮೇಲೆಯೇ ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಮಾಡಿ ಆರೋಪಿ ಸಮೇತ ಎಸ್ಕೇಪ್ ಆಗಿರುವ ಘಟನೆ ನಗರದ ಬೆಟಗೇರಿ(Betageri) ರೈಲ್ವೆ ಅಂಡರ್ ಬ್ರಿಜ್ಜ್ ಬಳಿ ನಡೆದಿದೆ. ಕಳ್ಳತನಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸರು ಕರೆದೊಯ್ಯುವ ವೇಳೆ ಗದಗದ ರೈಲ್ವೆ ಬ್ರಿಡ್ಜ್ ಬಳಿ ಪೊಲೀಸ್ ವಾಹನವನ್ನೇ ಅಡ್ಡಗಟ್ಟಿದ ದುಷ್ಕರ್ಮಿಗಳು, ಹಲ್ಲೆ ಮಾಡಿದ್ದಾರೆ.

ಗಾಯಾಳು ಪೊಲೀಸರನ್ನು ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲು ಚಿಕಿತ್ಸೆ

ಇನ್ನು ಆರೋಪಿ ಕರೆದೊಯ್ಯಲು ಇನೋವಾ ಕಾರ್ ನಂಬರ್ KA 22 Z 1636 ನಲ್ಲಿ ಬಂದಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿಯನ್ನ ಎಸ್ಕೇಪ್ ಮಾಡಿದ್ದಾರೆ. ನಾಲ್ವರು ಪೊಲೀಸರ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಅನುಮಾನ ಮೂಡಿದ್ದು, ಗಾಯಾಳು ಪೊಲೀಸರನ್ನು ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲು ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೇ ಗಂಗಾವತಿ ಪೊಲೀಸರು ಬಂದಿದ್ದರು ಎನ್ನಲಾಗಿದೆ.

ಇದನ್ನೂ ಓದಿ:ಬೆಂಗಳೂರು: ನಡುರಸ್ತೆಯಲ್ಲಿ ಸಿನಿಮೀಯ ರೀತಿಯಲ್ಲಿ ಲಾಂಗ್ ಬೀಸಿ ಹಲ್ಲೆ, ಆರೋಪಿಗಳ ಬಂಧನ

ಟ್ರ್ಯಾಕ್ಟರ್ ಡಿಕ್ಕಿ-ದ್ವಿಚಕ್ರ ವಾಹನದಲ್ಲಿದ್ದ ಆಹಾರ ನಿರೀಕ್ಷಕ ಸಾವು

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ ಬಳಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಗುಂಡ್ಲುಪೇಟೆ ಆಹಾರ ನಿರೀಕ್ಷಕ ನಾಗೇಂದ್ರ(54) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆಹಾರ ಇಲಾಖೆ ಶಿರಸ್ತೆದಾರ ರಮೇಶ್​ಗೆ ಗಂಭೀರ ಗಾಯವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಂಗಳ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಡಿಸಿ, ಎಸ್​ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:08 pm, Fri, 28 June 24

ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us