AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ನಿರಂತರ ಮಳೆಗೆ ಕುಸಿಯುತ್ತಿದೆ ಭೂಮಿ; ಹೆಚ್ಚಿದ ಜನರ ಆತಂಕ

ಗದಗ ಜಿಲ್ಲೆಯಲ್ಲಿ ಎರಡು ವರ್ಷಗಳ ಹಿಂದೆ ನಿಂತಲ್ಲಿ, ಕುಂತಲ್ಲಿ ಭೂಮಿ ಕುಸಿಯುತ್ತಿತ್ತು. ಅಷ್ಟೇ ಅಲ್ಲ ಮನೆಗಳಲ್ಲೂ ನಿಂತ ನೆಲವೇ ಕುಸಿದು ಭಾರಿ ಆತಂಕ ಸೃಷ್ಠಿಸಿತ್ತು. ಈ ವೇಳೆ ಇಬ್ಬರು ಅದೃಷ್ಠವಶಾತ್ ಬಚಾವ್ ಆಗಿದ್ದರು. ಈಗ ಜಿಲ್ಲೆಯಲ್ಲಿ ನಿರಂತರ ಜಡಿ‌ ಮಳೆಗೆ ಮತ್ತೆ ನಿಂತ ಭೂಮಿ ಕುಸಿದಿದೆ. ಮಣ್ಣಿನ ಮನೆಗಳೇ ಹೆಚ್ಚಿರುವ ಈ ಪ್ರದೇಶದಲ್ಲಿ ಭೂಕುಸಿತ ಆಗಿದ್ದು, ಜನರು ಕಂಗಾಲಾಗಿದ್ದಾರೆ.

ಗದಗ: ನಿರಂತರ ಮಳೆಗೆ ಕುಸಿಯುತ್ತಿದೆ ಭೂಮಿ; ಹೆಚ್ಚಿದ ಜನರ ಆತಂಕ
ಗದಗದಲ್ಲಿ ನಿರಂತರ ಮಳೆಗೆ ಕುಸಿಯುತ್ತಿದೆ ಭೂಮಿ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 26, 2024 | 6:06 PM

Share

ಗದಗ, ಜು.26: ಎರಡು ವರ್ಷಗಳ ಹಿಂದೆ ಇದೇ ಜಿಲ್ಲೆಯ ನರಗುಂದ(Naragunda) ಪಟ್ಟಣದ ಕೆಲ ಭಾಗದಲ್ಲಿ ನಿಂತಲ್ಲಿ, ಕುಂತಲ್ಲೂ ಭೂಮಿ ಕುಸಿದಿತ್ತು. ಇಬ್ಬರು ವೃದ್ಧರು 10 ಅಡಿ ಆಳ ಕುಸಿದ ಭೂಮಿಯಲ್ಲಿ ಬಿದ್ದು ಬದುಕಿ ಬಂದಿದ್ದರು. ಈ ಆತಂಕ ಈಗ ಮತ್ತೆ ಶುರುವಾಗಿದೆ. ಗದಗ ನಗರದ ನರಿಭಾವಿ ಓಣಿಯಲ್ಲಿ ಇಂದು(ಶುಕ್ರವಾರ) ಬೆಳ್ಳಂಬೆಳ್ಳಗ್ಗೆ ಏಕಾಏಕಿ ಭೂ ಕುಸಿತವಾಗಿದೆ. ಬೆಳಗ್ಗೆ ಎದ್ದು ನೋಡಿದ್ರೆ ಸುಮಾರು 5 ಅಡಿ ಆಳ ಭೂಮಿ ಕುಸಿದಿದೆ. ಏಕಾಏಕಿ ಭೂ ಕುಸಿತದಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

ಆತಂಕದಲ್ಲಿ ಗದಗ-ಬೆಟಗೇರಿ ಅವಳಿ ನಗರದ ಜನ

ಈ ಭಾಗದಲ್ಲಿ ರೈತರು ದವಸಧಾನ್ಯ ಸಂಗ್ರಹ ಮಾಡುವ ಹಗೇವು ಹೆಚ್ಚಾಗಿವೆ. ಹೀಗಾಗಿ ನಿರಂತರ ಜಿಟಿ ಮಳೆಗೆ ಹಳೇ ಕಾಲದ ಹಗೇವು ಕುಸಿದಿರಬೇಕು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಈ ಭೂಕುಸಿತದ ಪ್ರಕರಣ ಇಡೀ ಗದಗ-ಬೆಟಗೇರಿ ಅವಳಿ ನಗರದ ಜನರನ್ನು ಬೆಚ್ಚಿಬೀಳಿಸಿದೆ. ಈಗ ಮಕ್ಕಳು, ವೃದ್ಧರನ್ನು ಮನೆಯಿಂದ ಹೊರಬಿಡಲು ಕೂಡ ಹೆದರುತ್ತಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಭೂಕುಸಿತವಾಗಿದ್ದು, ಯಾರಾದರೂ ಹೋಗುವಾಗಿ ಘಟನೆ ಸಂಭವಿಸಿದ್ದರೆ, ದೊಡ್ಡ ಅನಾಹುತವೇ ಆಗುತ್ತಿತ್ತು. ಅದರಲ್ಲೂ ಭೂಕುಸಿತವಾದ ಪಕ್ಕದಲ್ಲೇ ಶಾಲೆಯೊಂದಿದೆ.

ಇದನ್ನೂ ಓದಿ:ಏಕಾಏಕಿ ಗದಗ ಸಂಗೀತ ಪರೀಕ್ಷಾ ಕೇಂದ್ರ ಹುಬ್ಬಳ್ಳಿಗೆ ಶಿಫ್ಟ್: ಹೋರಾಟಕ್ಕಿಳಿದ ಗವಾಯಿ ಮಠದ ಶ್ರೀಗಳು

ನೂರಾರು ಮಕ್ಕಳು ಇದೇ ಪ್ರದೇಶದಲ್ಲಿ ಓಡಾಡುತ್ತಾರೆ. ಆದ್ರೆ, ಬೆಳಗಿನ ಜಾವ ಭೂಕುಸಿತ ಆಗಿದ್ದರಿಂದ ಅನಾಹುತ ತಪ್ಪಿದಂತಾಗಿದೆ. ಇನ್ನು ಹಳೆ ಮನೆಗಳೇ ಹೆಚ್ಚಿರುವ ಪ್ರದೇಶದಲ್ಲಿ ಭೂಕುಸಿತ ಆಗಿರುವುದರಿಂದ ನರಿಬಾವಿ ಓಣಿ ಜನರು ಬೆಚ್ಚಿಬಿದ್ದಿದ್ದಾರೆ. ಭೂಕುಸಿತ ವಿಷಯ ತಿಳಿಯುತ್ತಿದ್ದಂತೆ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. 15 ದಿನಗಳ ಹಿಂದೆ ಇದೇ ಪ್ರದೇಶದಲ್ಲೇ ಇದೇ ರೀತಿ ಭೂಕುಸಿತವಾಗಿತ್ತು. ಹಳೇ ಕಾಲದ ಧಾನ್ಯಗಳು ಸಂಗ್ರಹ ಮಾಡುವ ಹಗೇವುಗಳು ಇವೆ ಎನ್ನಲಾಗಿದೆ. ಈ ಬಗ್ಗೆ ಸರ್ವೇ ಮಾಡಿ ಮುಂದೆ ಈ ರೀತಿ ಆಗದಂತೆ ಕ್ರಮ ವಹಿಸಲಾಗುವುದು. ಈಗ ಭೂಕುಸಿತ ಆಗಿರುವ ಪ್ರದೇಶಕ್ಕೆ ಮಣ್ಣು, ಕಲ್ಲು ಹಾಕಿ ಮುಚ್ಚಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ