AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಮತ್ತೆ ಶುರುವಾದ ಪುಡಿ ರೌಡಿಗಳ ಅಟ್ಟಹಾಸ; ನಡೆದುಕೊಂಡು ಹೋಗುತ್ತಿದ್ದವನ ಮೇಲೆ ಏಕಾಏಕಿ ರಾಡ್‌ನಿಂದ ಹಲ್ಲೆ

ಆ ಜಿಲ್ಲೆಯಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ಶುರುವಾಗಿದೆ. ರಾತ್ರಿಯಾದ್ರೆ, ಸಾಕು ಯುವಕರು ಮನೆ ಬಿಟ್ಟು ಹೊರಬರಲು ಭಯ ಪಡುವ ಸ್ಥಿತಿ ಉಂಟಾಗಿದೆ. ಹೌದು ಯುವಕನೊರ್ವ ನಡೆದುಕೊಂಡು ಹೋಗುವಾಗ ಅಪರಿಚಿತ ವ್ಯಕ್ತಿ ಜಗಳ ತೆಗೆದು, ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವಕನನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಯುವಕ ಆಸ್ಪತ್ರೆ ಬೆಡ್​ನಲ್ಲಿ ನರಳುತ್ತಿದ್ದು, ಯುವಕನ ಸ್ಥಿತಿ ನೋಡಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಅಷ್ಟಕ್ಕೂ ಆಗಿದ್ದಾದ್ರೂ ಏನೂ ಅಂತೀರಾ? ಈ ಸ್ಟೋರಿ.

ಗದಗದಲ್ಲಿ ಮತ್ತೆ ಶುರುವಾದ ಪುಡಿ ರೌಡಿಗಳ ಅಟ್ಟಹಾಸ; ನಡೆದುಕೊಂಡು ಹೋಗುತ್ತಿದ್ದವನ ಮೇಲೆ ಏಕಾಏಕಿ ರಾಡ್‌ನಿಂದ ಹಲ್ಲೆ
ಗದಗದಲ್ಲಿ ಪುಡಿ ರೌಡಿಗಳ ಅಟ್ಟಹಾಸ, ಯುವಕನ ಮೇಲೆ ಹಲ್ಲೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 02, 2023 | 11:41 AM

ಗದಗ: ಆಸ್ಪತ್ರೆ ಬೆಡ್​ನಲ್ಲಿ ನರಳಾಡುತ್ತಿರುವ ಮಾರಣಾಂತಿಕ ಹಲ್ಲೆಗೊಳಗಾದ ಯುವಕ, ಯುವಕನ ಸ್ಥಿತಿ ನೋಡಿ ಅಜ್ಜಿಯ ಕಣ್ಣೀರು. ಹೌದು ಈ ದೃಶ್ಯಗಳು ಕಂಡಿದ್ದು, ಗದಗ(Gadag) ಜಿಲ್ಲೆಯಲ್ಲಿ. ರಾತ್ರಿಯಾದ್ರೆ, ಸಾಕು ಮಹಿಳೆಯರು ಮನೆಯಿಂದ ಹೊರಗಡೆ ಹೋಗಲು ಭಯ ಪಡೋದು ಕಾಮನ್. ಆದ್ರೆ, ಯುವಕರು ಕೂಡ ಮನೆಯಿಂದ ಹೊರಗಡೆ ಹೋಗಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಗದಗ ನಗರದ ಹಾತಲಗೇರಿ ರಸ್ತೆಯಲ್ಲಿ ನಿನ್ನೆ(ಮೇ.31) ರಾತ್ರಿ 9 ಗಂಟೆ ಸುಮಾರಿಗೆ ನಡೆದುಕೊಂಡು ಹೋಗುತ್ತಿದ್ದ ಯುವಕ ಸಂಜೀವಪ್ಪನನ್ನು ಬೈಕ್ ಮೇಲೆ ಬಂದ ದುಷ್ಕರ್ಮಿಯೊಬ್ಬ ಏಕಾಏಕಿ ರಾಡ್‌ನಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ರಾಡ್​ನಿಂದ ಬಲವಾಗಿ ತಲೆಗೆ ಹೊಡೆದಿದ್ರಿಂದ ಯುವಕ ಅಲ್ಲೇ ಕುಸಿದು ಬಿದ್ದು, ರಕ್ತದ ಮಡುವಿನಲ್ಲಿ ಒದ್ದಾಡಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಹಾಗೂ ಸಂಬಂಧಿಕರು ಆ್ಯಂಬುಲೆನ್ಸ್ ಮೂಲಕ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇನ್ನು ಹಲ್ಲೆಗೊಳಗಾದ ಸಂಜೀವಪ್ಪ ಗೊಲ್ಲರ್ ಪಾತ್ರೆಗಳ ವ್ಯಾಪಾರ ಮಾಡುತ್ತಾನೆ. ಅಂದು ವ್ಯಾಪಾರ ಮಾಡಿ ಬಂದ ಹಣದಿಂದ ಜೀವನ ನಡೆಸುತ್ತಿದ್ದಾನೆ. ಸಂಜೀವಪ್ಪ ಗೊಲ್ಲರ್ ಚಿಕ್ಕವನಿಂದಾಗಲೇ ತಂದೆ ಹಾಗೂ ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಸಂಜೀವಪ್ಪ ಗೊಲ್ಲರ್ ಆತನ ಸಹೋದರ ಇಬ್ಬರನ್ನು, ಅವರ ಚಿಕ್ಕಮ್ಮ ಸಾಕುತ್ತಿದ್ದಾಳೆ. ಮದುವೆ ವಯಸ್ಸಿಗೆ ಬಂದ್ ಸಂಜೀವಪ್ಪ ಹೀಗೆ ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವುದನ್ನು ನೋಡಿ ಅಜ್ಜಿ ಕಣ್ಣೀರು ಹಾಕುತ್ತಿದ್ದಾಳೆ. ಇನ್ನು ಅವರಿಗೆ ಯಾರ ದಿಕ್ಕು ಇಲ್ಲ, ನಾನೇ ಅಡುಗೆ ಮಾಡಿ ಕೊಡುತ್ತೇನೆ. ದುಡಿದು ತಿನ್ನುವ ಜನರ ಮೇಲೆ ಹೀಗೆ ಹಲ್ಲೆ ಮಾಡಿದ್ರೆ, ನಾವು ಹೇಗೆ ಬದುಕಬೇಕು. ಯಾವುದೇ ಜಗಳ ಇಲ್ಲ, ಏಕಾಏಕಿ ರಾಡ್​ನಿಂದ ಹೊಡೆದು ದುಷ್ಕರ್ಮಿ ನಾಪತ್ತೆಯಾಗಿದ್ದಾನೆ. ಆತನ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲವೆಂದು ಗಾಯಾಳು ಚಿಕ್ಕಮ್ಮ ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರು: ಪಕ್ಷ ತೊರೆದು ಬಿಜೆಪಿ ಸೇರಿದ್ದಕ್ಕೆ ಮನೆಗೆ ನುಗ್ಗಿ ಕಾರ್ಯಕರ್ತನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

ಗದಗದಲ್ಲಿ ವರ್ಷಗಳಿಂದ ಚಾಕೂ, ಚೂರಿ ಇರಿತದ ಪ್ರಕರಣಗಳು ಹಚ್ಚಾಗಿವೆ. ಶಾಂತವಾಗಿದ್ದ ಜಿಲ್ಲೆ ಕ್ರೈಂ ಸಿಟಿಯಾಗಿ ಪರಿವರ್ತನೆ ಆಗುತ್ತಿದೆ. ಬೆಟಗೇರಿ ಬಡಾವಣೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಿಂದ ಗದಗ ಬೆಟಗೇರಿ ಅವಳಿ ನಗರ ಬೆಚ್ಚಿಬಿದ್ದಿದೆ. ಯಾವುದೇ ಕಾರಣ ಇಲ್ಲದೆ ರಾಡ್ ನಿಂದ ಹಲ್ಲೆ ಮಾಡಿದಕ್ಕೆ, ರಾತ್ರಿ ವೇಳೆಯಲ್ಲಿ ಓಡಾಡಲು ಯುವಕರು ಭಯ ಪಡುತ್ತಿದ್ದಾರೆ. ಇನ್ನಾದರೂ ಪೊಲೀಸರು ರಾತ್ರಿ ವೇಳೆಯಲ್ಲಿ ರಾಡ್, ಮುಚ್ಚು, ಚಾಕು ಹಿಡಿದುಕೊಂಡು ಒಡಾಡುವ ಪುಡಿ ರೌಡಿಗಳ ಅಟ್ಟಗಾಸಕ್ಕೆ ಬ್ರೇಕ್ ಹಾಕಬೇಕಾಗಿದೆ. ಆಗ ಮಾತ್ರ ಅವಳಿ ನಗರದ ಜನರು ನೆಮ್ಮದಿ ಜೀವನ ನಡೆಸಲು ಸಾಧ್ಯ.

ವರದಿ: ಸಂಜೀವ ಪಾಂಡ್ರೆ ಟಿವಿ9 ಗದಗ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ