AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ ಭಾಗದಲ್ಲಿ ಸೋದರತ್ತೆಯರು ತಮ್ಮ ಸೊಸೆಗೆ ಸೀರೆ ಉಡಿಸಬೇಕು ಅನ್ನೋ ಸುದ್ದಿ ಹರಿದಾಡುತ್ತಿದೆ! ಏನಿದರ ಒಳಗುಟ್ಟು?

ಕಳೆದ ವರ್ಷ ಕೂಡ ಒಬ್ಬನೇ ಗಂಡು ಮಗನಿದ್ದರೆ ಬೆಳ್ಳಿ ಕಡಗ ಕೊಡಬೇಕೆಂಬ ವದಂತಿ ಹಬ್ಬಿತ್ತು. ಆಗ ಕೂಡ ಬಂಗಾರ, ಬೆಳ್ಳಿ ಅಂಗಡಿಗಳಿಗೆ ಭರ್ಜರಿ ವ್ಯಾಪಾರ ನಡೆದಿತ್ತು. ಜನ ಮರುಳೋ ಜಾತ್ರೆ ಮರುಳೋ ಗೊತ್ತಿಲ್ಲ. ನಾವೆಲ್ಲಾ ಎಷ್ಟೇ ಆಧುನಿಕವಾಗಿ ಮುಂದುವರೆದಿದ್ದರೂ ನಮ್ಮ ಜನರು ಮಾತ್ರ ವದಂತಿಗಳಿಗೆ ಬೇಗ ಮಾರು ಹೋಗುತ್ತಾರೆ ಅನ್ನೋದಕ್ಕೆ ಇದು ತಾಜಾ ಉದಾಹರಣೆ.

ಉತ್ತರ ಕರ್ನಾಟಕ ಭಾಗದಲ್ಲಿ ಸೋದರತ್ತೆಯರು ತಮ್ಮ ಸೊಸೆಗೆ ಸೀರೆ ಉಡಿಸಬೇಕು ಅನ್ನೋ ಸುದ್ದಿ ಹರಿದಾಡುತ್ತಿದೆ! ಏನಿದರ ಒಳಗುಟ್ಟು?
ಸೋದರತ್ತೆಯರು ತಮ್ಮ ಸೊಸೆಗೆ ಸೀರೆ ಉಡಿಸಬೇಕಂತೆ! ಏನಿದರ ಒಳಗುಟ್ಟು?
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಸಾಧು ಶ್ರೀನಾಥ್​

Updated on: Nov 28, 2023 | 2:20 PM

ವೈಜ್ಞಾನಿಕವಾಗಿ ಜಗತ್ತು ಎಷ್ಟೇ ಮುಂದುವರೆದ್ರೂ ಮೌಢ್ಯ (superstition) ಮಾತ್ರ ಇನ್ನೂ ತೊಲಗಿಲ್ಲ. ಗ್ರಾಮೀಣ, ಪಟ್ಟಣಗಳಲ್ಲಿ ಇನ್ನೂ ಜನರು ಮೂಢನಂಬಿಕೆಗಳಿಗೆ ದಾಸರಾಗಿದ್ದಾರೆ. ಯಾಕೆ ಈ ಪೀಠಿಕೆ ಅಂತೀರಾ ಈ ವರದಿ ನೋಡಿ. ಗದಗ ಜಿಲ್ಲೆಯ ಕೆಲ ಭಾಗದಲ್ಲಿ ಕಳೆದ 10-15 ದಿನಗಳಿಂದ ಸೀರೆಗಳ‌ (saree) ಮಾರಾಟ ಬಲು ಜೋರಾಗಿದೆ. ಇದಕ್ಕೆ ಕಾರಣ ಸೊಸೆಗೆ ಸೋದರತ್ತೆಯರು (sister) ಸೀರೆ ಉಡಿಸಬೇಕು ಅನ್ನೋ ಸುದ್ದಿಯೇ ಇದಕ್ಕೆ ಮೂಲ. ಮಹಿಳೆಯರಿಗೆ ಅದು ತವರುಮನೆ ಕಾಳಜಿ, ಪ್ರೀತಿ ಅಂತಾರೆ ಜನ. ಹೌದು ಮಹಿಳೆಯರು ತನ್ನ ಅಣ್ಣ ಅಥವಾ ತಮ್ಮನಿಗೆ (brother) ಒಬ್ಬಳೇ ಹೆಣ್ಣು‌ ಮಗಳು ಇದ್ರೆ ಸೋದರತ್ತೆ ಸೀರೆ ಉಡಿಸಬೇಕು. ಇಲ್ಲಾಂದ್ರೆ ಕೇಡಾಗುತ್ತೆ ಅನ್ನೋ ಸುದ್ದಿ ಗದಗ (gadag) ಜಿಲ್ಲೆಯ ಶಿರಹಟ್ಟಿ ತಾಲೂಕಿನಲ್ಲಿ ಹಬ್ಬಿದೆ.

ಹೀಗಾಗಿ ನಮ್ಮ ಅಣ್ಣ ಅಥವಾ ತಮ್ಮನ ಮಗಳಿಗೆ ಒಳ್ಳೆಯ ಸೀರೆ ಕೊಡಿ ಅಂತ ಮಹಿಳೆಯರು ಕೇಳ್ತಾಯಿದ್ದಾರೆ. ಇದರಿಂದ ಬಟ್ಟೆ ಅಂಗಡಿಗಳ ಮಾಲೀಕರು ಭರ್ಜರಿ ವ್ಯಾಪಾರ ಮಾಡ್ತಾಯಿದ್ದಾರೆ. ಭೀಕರ ಬರ ಹಿನ್ನೆಲೆಯಲ್ಲಿ ಈ ಬಾರಿ ಹಬ್ಬಗಳಲ್ಲಿ ಜನರು ಬಟ್ಟೆ ಖರೀದಿಗೆ ಮುಂದಾಗಿರಲಿಲ್ಲ. ಆದ್ರೆ, ಈಗ ವದಂತಿ ಗ್ರಾಮೀಣ ಭಾಗದ ಜನ್ರನ್ನು ದಂಗು ಬಡಿಸಿದೆ. ಮಹಿಳೆಯರು ಪಟ್ಟಣದ ಬಟ್ಟೆ ಅಂಗಡಿಗಳಲ್ಲಿ ಸೀರೆ ಖರೀದಿಗೆ ಮುಂದಾಗಿದ್ದಾರೆ.

ಕಳೆದ 15 ದಿನಗಳಿಂದ ತಾಲೂಕಿನ ಮಾಚೇನಹಳ್ಳಿ, ಬೆಳ್ಳಟ್ಟಿ, ಹೊಸಳ್ಳಿ, ನಾಗರಮಡುವು ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಈ ರೀತಿಯ ವದಂತಿ ಹಬ್ಬಿದೆ. ಸೀರೆ ಕೊಡಿಸದಿದ್ದರೆ ಕೇಡಾಗುತ್ತೆ ಎಂಬ ನಂಬಿಕೆಯಿಂದ ತವರು ಮನೆಗೆ ಹೆಣ್ಣುಮಕ್ಕಳು ಬಂದು ಅಣ್ಣ, ತಮ್ಮನ ಮಗಳಿಗೆ ಸೀರೆ ಉಡಿಸಿ, ಆರತಿ‌ ಮಾಡಿ ತೆರಳುತ್ತಿರುವುದು ಸಾಮಾನ್ಯವಾಗಿದೆ.

ಇದನ್ನೂ ಓದಿ: ಚಳಿಗಾಲದ ಅಧಿವೇಶನ ಇಲ್ಲಿಯೇ ಯಾಕಾದರೂ ನಡೆಯುತ್ತದೋ ಎಂದು ಇಲ್ಲಿನ ರೈತರಿಗೆ ಧುತ್ತನೆ ಎದುರಾಗಿದೆ ಟೆನ್ಷನ್! ಏನದು ವಿಷಯ?

ಅಣ್ಣನ, ತಮ್ಮನ ಹೆಣ್ಣು ಮಗಳಿಗೆ ಸೀರೆ ಕೊಡಿಸಬೇಕೆಂಬ ವದಂತಿ ಸತ್ಯವೋ, ಅಸತ್ಯವೋ ಎನ್ನುವ ಮಾಹಿತಿ ಯಾರಿಗೂ ಗೊತ್ತಿಲ್ಲ. ಈ ಬಗ್ಗೆ ಪಂಚಾಂಗ ಹೇಳುವವರು ಖಚಿತವಾಗಿ ಹೇಳುತ್ತಿಲ್ಲ. ಈ ಹಿಂದೆ ಕೂಡ ತಾಯಿಗೆ ಮಗಳು ಸೀರೆ ಕೊಡಿಸುವುದು, ಒಬ್ಬನೇ ಮಗನಿದ್ದರೆ ಬೆಳ್ಳಿ ಕಡಗ ಕೊಡಿಸುವುದು ಸುದ್ದಿಯಾಗಿತ್ತು. ಹೀಗಾಗಿ ನಾವು ಕೂಡ ನಮ್ಮ ಅಣ್ಣ ಮತ್ತು ತಮ್ಮನ ಮಗಳಿಗೆ ಈ ಬಾರಿ ಹೊಸ ಸೀರೆ, ಬೆಳ್ಳಿ ಉಂಗುರ ಖರೀದಿ ಮಾಡಿಸಿ ಕೊಡಲು ಮುಂದಾಗಿದ್ದೇವೆ. ತಪ್ಪೇನಲ್ಲ. ಇದರಿಂದ ನಮ್ಮ ತವರು ಮನೆಯ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ ಅಂತ ಗಂಗಮ್ಮ ಹೇಳುತ್ತಾರೆ.

ಸೊಸೆಗೆ ಹೊಸ ಸೀರೆ ಉಡಿಸಿ ಹಣೆಗೆ ಕುಂಕುಮ ಇಟ್ಟು ಆರತಿ ಬೆಳಗಿ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹರಸುತ್ತಿದ್ದಾರೆ ತಾಯಂದಿರು. ಒಟ್ಟಾರೆ ವದಂತಿಗಳು ಜನರಲ್ಲಿ ಪುನ: ಮೌಢ್ಯತೆ ಹೆಚ್ಚಿಸುತ್ತಿರುವುದು ವಿಜ್ಞಾನಕ್ಕೆ ಸವಾಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ
ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ