AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕಿ ಹಣಕ್ಕಾಗಿ ಎರಡು ಕೋಮಿನ ಯುವಕರ ಮಾರಾಮಾರಿ: 6 ಜನರಿಗೆ ಗಾಯ

ಬಾಕಿ ಹಣ ನೀಡದ ವಿಚಾರವಾಗಿ ಬೆಂಗಳೂರಿನ ಯಲಹಂಕ ಪೊಲೀಸ್​ ಠಾಣಾ ವ್ಯಾಪ್ತಿ ಮತ್ತು ಗದಗ ಜಿಲ್ಲೆ ಶಿರಹಟ್ಟಿ ಪಟ್ಟಣದ ತಳಗೇರಿ ಬಡಾವಣೆಯಲ್ಲಿ ಪ್ರತ್ಯೇಕ ಗಲಾಟೆಗಳು ನಡೆದಿವೆ. ತಳಗೇರಿಯಲ್ಲಿ ಎರಡು ಕೋಮಿನ ಯುವಕರ ಮಧ್ಯೆ ಮಾರಾಮಾರಿ ನಡೆದು 6 ಜನ ಗಾಯಗೊಂಡಿದ್ದರೆ, ಬೆಂಗಳೂರಲ್ಲಿ ವ್ಯಕ್ತಿಯೋರ್ವನಿಗೆ ಚಾಕು ಇರಿಯಲಾಗಿದೆ.

ಬಾಕಿ ಹಣಕ್ಕಾಗಿ ಎರಡು ಕೋಮಿನ ಯುವಕರ ಮಾರಾಮಾರಿ: 6 ಜನರಿಗೆ ಗಾಯ
ಅಪರಾಧ
ಪ್ರಸನ್ನ ಹೆಗಡೆ
|

Updated on: Oct 02, 2025 | 6:18 PM

Share

ಬೆಂಗಳೂರು/ಗದಗ, ಅಕ್ಟೋಬರ್​ 02: ಸಿಗರೇಟ್​ ಹಣ ಬಾಕಿ ವಿಚಾರವಾಗಿ ಎರಡು ಕೋಮಿನ ಯುವಕರ ನಡುವೆ ಮಾರಾಮಾರಿ ನಡೆದ ಘಟನೆ ಗದಗ (Gadag) ಜಿಲ್ಲೆ ಶಿರಹಟ್ಟಿ ಪಟ್ಟಣದ ತಳಗೇರಿ ಬಡಾವಣೆಯಲ್ಲಿ ನಡೆದಿದೆ. ಘಟನೆಯಲ್ಲಿ ಒಟ್ಟು ಆರು ಜನರಿಗೆ ಗಾಯಗಳಾಗಿದ್ದು, ಗದಗ ಜಿಮ್ಸ್ ಆತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಹೊಡೆದಾಟದ ವೇಳೆ ಮುಸ್ಲಿಂ ವ್ಯಕ್ತಿಗೆ ಸೇರಿದ ಪೆಟ್ಟಿಗೆ ಅಂಗಡಿ ಧ್ವಂಸಗೊಂಡಿದೆ.

ಅಬ್ದುಲ್ ಘನಿ ಮಾಲಕತ್ವದ ಬೀಡಾ ಅಂಗಡಿಯಲ್ಲಿ ಸಿಗರೇಟ್, ಟೀಯ 2,500 ರೂಪಾಯಿ ಹಣವನ್ನ ದೇವಪ್ಪ ಪೂಜಾರ್​ ಎಂಬಾತ ಬಾಕಿ ಉಳಿಸಿಕೊಂಡಿದ್ದ. ಇಂದು ಆ ಅಂಗಡಿ ಬದಲು ಪಕ್ಕದ ಶಾಪ್​ ಗೆ ದೇವಪ್ಪ ತೆರಳಿದ್ದು, ಆ ವೇಳೆ ಬಾಕಿ ಹಣ ಕೊಡುವಂತೆ ಅಬ್ದುಲ್​ ಕೇಳಿದ್ದಾರೆ. ಇದೇ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆ ನಡೆದಿದ್ದು, ಏಟು ತಿಂದಿದ್ದ ದೇವಪ್ಪ ಸ್ನೇಹಿತರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಸಹಚರರು ಗಲಾಟೆ ಮಾಡಿದ್ದು, ಪೆಟ್ಟಿಗೆ ಅಂಗಡಿ ಧ್ವಂಸ ಮಾಡಿದ್ದಾರೆ. ಇದರಿಂದಾಗಿ ಮುಸ್ಲಿಂ ಯುವಕರೂ ರೊಚ್ಚಿಗೆದ್ದಿದ್ದು, ದೇವಪ್ಪ ಸ್ನೇಹಿತರಿಗೆ ಹಿಗ್ಗಾಮುಗ್ಗಾ ತಳಿಸಿದ್ದಾರೆ ಎನ್ನಲಾಗಿದೆ. ಮಾರಾಮಾರಿ ವೇಳೆ ಅಬ್ದುಲ್ ಘನಿ ಮಕಾಂದಾರ್, ದೇವಪ್ಪ ಪೂಜಾರ್, ಪರಶುರಾಮ್ ಡೊಂಕಬಳ್ಳಿ, ಮೈಲಾರಪ್ಪ ಕಪ್ಪಣ್ಣವರ್, ರವಿ ಕಪ್ಪಣ್ಣವರ್, ವಿರೂಪಾಕ್ಷ ಹಿರೇಮಠ ಎಂಬವರಿಗೆ ಗಾಯಗಳಾಗಿವೆ.

ಇದನ್ನೂ ಓದಿ: ನೀರಿನ ಟ್ಯಾಂಕ್​ನಲ್ಲಿ ಕೈಗೆ ಹಗ್ಗ ಕಟ್ಟಿದ್ದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ

ಘಟನೆ ಬಗ್ಗೆ ಎರಡೂ ಕಡೆಯವರಿಂದ ಪರಸ್ಪರ ಆರೋಪಗಳು ಕೇಳಿಬಂದಿವೆ. ಹಿಂದೂ ಯುವಕರು ಅನ್ನೋ ಕಾರಣಕ್ಕೆ ಹೊಡೆದಿದ್ದಾರೆ ಅಂತಾ ಒಂದು ಗುಂಪು ಆರೋಪಿಸಿದ್ದರೆ, ಹಿಂದೂ ಯುವಕರೇ ಹಲ್ಲೆ ಮಾಡಿದ್ದು ಎಂದು ಅಬ್ದುಲ್ ಪತ್ನಿ ಮುಮ್ತಾಜ್ ದೂರಿದ್ದಾರೆ. ಘಟನೆಯಿಂದಾಗಿ ಬಡಾವಣೆಯಲ್ಲಿ ಕೆಲ ಕಾಲ ಉಂಟಾಗಿದ್ದ ಉದ್ವಿಗ್ನ ಸ್ಥಿತಿ ಪೊಲೀಸರ ಮಧ್ಯ ಪ್ರವೇಶದಿಂದಾಗಿ ತಿಳಿಗೊಂಡಿದೆ. ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಹಣ್ಣಿನ ವ್ಯಾಪಾರಿಗೆ ಚಾಕು ಇರಿತ

ಬಾಕಿ ಹಣ ಕೊಡದ ಕಾರಣ ಹಣ್ಣಿನ ವ್ಯಾಪಾರಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ವ್ಯಕ್ತಿ ಮೊಹಮ್ಮದ್ ರೆಹಮ್ಮತ್, ಜುಬೈರ್ ಎಂಬಾತನಿಂದ ಹೋಲ್ ಸೆಲ್ ಹಣ್ಣು ಪಡೆದು ವ್ಯಾಪಾರ ಮಾಡುತ್ತಿದ್ದ. ಈವರೆಗೆ 1.25 ಲಕ್ಷ ಹಣವನ್ನು ನೀಡಿದ್ದರೂ ಬಾಕಿ ಹಣಕ್ಕಾಗಿ ಮನೆ ಬಳಿ ತೆರಳಿ ಜುಬೈರ್​ ಗಲಾಟೆ ಮಾಡಿದ್ದಾನೆ. ಈ ವೇಳೆ ಜುಬೈರ್ ಹಾಗೂ ಹಿದಾಯತ್ ಎಂಬವರು ಮೊಹಮ್ಮದ್ ರೆಹಮ್ಮತ್​ ಗೆ ಚಾಕು ಇರಿದಿದ್ದಾರೆ ಎನ್ನಲಾಗಿದೆ. ಹೊಟ್ಟೆಗೆ ಇರಿದ ಚಾಕು ಬೆನ್ನಿನಿಂದ ಹೊರಬಂದಿದ್ದು, ಗಾಯಾಳುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್