AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಸರ್ಕಾರದ ಇಂದಿನ ರಾಜಕೀಯ ಬಿಕ್ಕಟ್ಟಿಗೆ ಶಿವಸೇನೆಯ ಒಳಜಗಳವೇ ಕಾರಣ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಾಖ್ಯಾನ

Pralhad Joshi: ಮಹಾರಾಷ್ಟ್ರ ಸರ್ಕಾರದ ಇಂದಿನ ರಾಜಕೀಯ ಬಿಕ್ಕಟ್ಟಿಗೆ ಶಿವಸೇನೆಯ ಒಳಜಗಳವೇ ಕಾರಣ. ಇದಕ್ಕೆ ಶಿವಸೇನೆಯ ಶಾಸಕರು ಬರೆದಿರುವ ಪತ್ರವೇ ಸಾಕ್ಷಿ ಎಂದು ಗದಗ ಜಿಲ್ಲೆ ನರಗುಂದದಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಇಂದಿನ ರಾಜಕೀಯ ಬಿಕ್ಕಟ್ಟಿಗೆ ಶಿವಸೇನೆಯ ಒಳಜಗಳವೇ ಕಾರಣ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಾಖ್ಯಾನ
ಮಹಾರಾಷ್ಟ್ರ ಸರ್ಕಾರದ ಇಂದಿನ ರಾಜಕೀಯ ಬಿಕ್ಕಟ್ಟಿಗೆ ಶಿವಸೇನೆಯ ಒಳಜಗಳವೇ ಕಾರಣ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಾಖ್ಯಾನ
TV9 Web
| Updated By: ಸಾಧು ಶ್ರೀನಾಥ್​|

Updated on: Jun 25, 2022 | 6:03 PM

Share

ಗದಗ: ಮಹಾರಾಷ್ಟ್ರ ಸರ್ಕಾರದ ಇಂದಿನ ರಾಜಕೀಯ ಬಿಕ್ಕಟ್ಟಿಗೆ (Maharashtra Politics) ಶಿವಸೇನೆಯ (shiv sena) ಒಳಜಗಳವೇ ಕಾರಣ ಎಂದು ಗದಗ ಜಿಲ್ಲೆ ನರಗುಂದದಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಇದಕ್ಕೆ ಶಿವಸೇನೆಯ ಶಾಸಕರು ಬರೆದಿರುವ ಪತ್ರವೇ ಸಾಕ್ಷಿ. ಇದು ಅಸ್ವಾಭಾವಿಕ ಮೈತ್ರಿ ಎಂದು ಶಿವಸೇನೆ ಶಾಸಕರೇ ಹೇಳಿದ್ದಾರೆ. ಕಾಂಗ್ರೆಸ್​ ಮತ್ತು ಎನ್​​ಸಿಪಿ ವಿರುದ್ಧ ಬಾಳಾ ಠಾಕ್ರೆ ಅವರೇ ಹೋರಾಟ ಮಾಡಿದ್ದರು. NCP ಕೈಯಲ್ಲಿ ಸಿಎಂ ರಿಮೋಟ್ ಕಂಟ್ರೋಲ್​ ಇದೆ ಅನ್ನೋ ಆರೋಪವಿತ್ತು. ಇವರ ತಪ್ಪಿನಿಂದ ಇಡೀ ಪಕ್ಷವೇ ಅಸಮಾಧಾನಗೊಂಡಿದೆ. ಇನ್ನೆರಡು ದಿನ ತಡೆದರೆ ಉಳಿದಿರುವವರೂ ಹೊರಹೋಗುವ ಸಾಧ್ಯತೆಯಿದೆ. ಉದ್ಧವ್​, ಆದಿತ್ಯ ಠಾಕ್ರೆ (Uddhav Thackeray) ಬಿಟ್ಟರೆ ಎಲ್ಲರೂ ಪಕ್ಷ ಬಿಡುವ ಸಾಧ್ಯತೆ ಇದೆ. ಹೊರಗಿನವರು ಷಡ್ಯಂತ್ರ ಮಾಡಿ ಪಕ್ಷ ತೆಗೆದುಕೊಂಡು ಹೋಗಲಾಗಲ್ಲ ಎಂದು ಸಚಿವ ಪ್ರಲ್ಹಾದ್ ಜೋಶಿ ಮಹಾರಾಷ್ಟ್ರದ ತಾಜಾ ರಾಜಕೀಯ ಬೆಳವಣಿಗೆಗಳನ್ನು ವಿಶ್ಲೇಷಿಸಿದ್ದಾರೆ. ಜೊತೆಗೆ ಹಿಂದೂ ವೋಟ್ ಗಿಂತನೂ ಸಮಾನ ಮನಸ್ಕರರು ಒಂದೆಡೆ ಇದ್ದೇವೆ. ಶಿವಸೇನೆ ಒಂದು ನಮ್ಮಿಂದ ಹೊರಗೆ ಹೋಗಿತ್ತು. 2014 ರ ಚುನಾವಣೆಯಲ್ಲೂ ನಾವು ಒಳ್ಳೆ ಸಾಧನೆ ಮಾಡಿದ್ದೇವೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಾಂಗ್ರೆಸ್​​ ಪಕ್ಷದ್ದು 40 ಸೀಟ್ ಇದೆ. ಕಾಂಗ್ರೆಸ್ಸನ್ನು ಮುಗಿಸುವ ಅಗತ್ಯವಿಲ್ಲ, ಅದಾಗಿಯೇ ಮುಗಿದು ಹೋಗುತ್ತೆ. ಕಾಂಗ್ರೆಸ್​​​ ವಿಪಕ್ಷವಾಗಿ ತನ್ನ ಅಸ್ತಿತ್ವವನ್ನಾದರೂ ಉಳಿಸಿಕೊಳ್ಳಲಿ. ಮಹಾರಾಷ್ಟ್ರದಲ್ಲಿ ಶಾಸಕರನ್ನು ಖರೀದಿಸುವ ಪ್ರಶ್ನೆಯೇ ಬರುವುದಿಲ್ಲ. ಎನ್​ಸಿಪಿ, ಕಾಂಗ್ರೆಸ್​​​ನಿಂದಲೇ ಸಮಸ್ಯೆಯಾಗಿದೆ ಎಂದು ಪ್ರಲ್ಹಾದ್ ಜೋಶಿ ಸೂಚ್ಯವಾಗಿ ಹೇಳಿದರು. ಕಾಂಗ್ರೆಸ್ ಪಾರ್ಟಿ ಮಹಾರಾಷ್ಟ್ರ ದಲ್ಲಿ ಏನಿದೆ? ಕಾಂಗ್ರೆಸ್ ಪಾರ್ಟಿ ಏನೋ 40 ಸೀಟ್ ಇದೆ. ಅಲ್ಲಿ ಇಲ್ಲಿ ಮೇಯಿಕೊಂಡು ಇದ್ದರು. ಕಾಂಗ್ರೆಸ್ ಪಕ್ಷದವರನ್ನು ಟಾರ್ಗೆಟ್ ಮಡುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಅದಾಗಿಯೇ ಮುಗಿದು ಹೋಗುತ್ತಿದೆ. ಕಾಂಗ್ರೆಸ್ ಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇವೆ.. ಅವರು ವಿರೋಧ ಪಕ್ಷವಾಗಿ ಅಸ್ಥಿತ್ವ ಉಳಿಸಿಕೊಳ್ಳಲಿ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಭಾರತ ಸ್ವಾತಂ‌ತ್ಯ್ರದ ಅಮೃತ ಮಹೋತ್ಸವದ ಅಂಗವಾಗಿ ದೇಶಕ್ಕಾಗಿ ಜೀವ ಹಾಗು ಜೀವನವನ್ನು ಸಮರ್ಪಿಸಿದ ಹೋರಟಗಾರರ ಸ್ಮರಣೆಗಾಗಿ ಹಮ್ಮಿಕೊಂಡಿದ್ದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದಲ್ಲಿ ಸಚಿವ ಜೋಶಿ ಭಾಗವಹಿಸಿದ್ದರು.

ಇದನ್ನೂ ಓದಿ:

ನೀವು ಏನು ಬೇಕಾದರೂ ಮಾಡಿಕೊಳ್ಳಿ ಆದರೆ ಬಾಳಾಸಾಹೇಬ್ ಹೆಸರು ಬಳಸಬೇಡಿ: ಉದ್ಧವ್ ಠಾಕ್ರೆ

ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ