AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನತಾ ದರ್ಶನ: ಪದ್ಮಭೂಷಣ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ ವ್ಯಕ್ತಿ, ಸಚಿವ ಹೆಚ್​ಕೆ ಪಾಟೀಲ್ ತಬ್ಬಿಬ್ಬು

ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಅಬ್ದುಲ್ ಖಾದರ್ ಸಾಬ್ ಎಂಬುವವರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಗ್ರಾಮದ ಅಭಿವೃದ್ಧಿಗಾಗಿ 12 ವರ್ಷದಿಂದ ಹೋರಾಟ ಮಾಡಿದ್ದೇನೆ. ರಸ್ತೆ ಮೂಲ ಸೌಕರ್ಯ ಕಲ್ಪಿಸಲು ಹೋರಾಟ ಮಾಡಿದ್ದೇನೆ‌. ಕೇಂದ್ರ ಸರ್ಕಾರಕ್ಕೆ ನನ್ನ ಹೆಸರು ಶಿಫಾರಸು ಮಾಡಿ ಎಂದು ಅಬ್ದುಲ್ ಖಾದರ್ ಸಾಬ್ ಅವರು ಅರ್ಜಿ ಸಲ್ಲಿಸಿ ಸಚಿವರಿಗೆ ಮನವಿ ಮಾಡಿದ್ದಾರೆ.

ಜನತಾ ದರ್ಶನ: ಪದ್ಮಭೂಷಣ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ ವ್ಯಕ್ತಿ, ಸಚಿವ ಹೆಚ್​ಕೆ ಪಾಟೀಲ್ ತಬ್ಬಿಬ್ಬು
ಗದಗ ಜನತಾ ದರ್ಶನ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ಆಯೇಷಾ ಬಾನು|

Updated on: Sep 30, 2023 | 3:07 PM

Share

ಗದಗ, ಸೆ.2023: ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ (Janata Darshan) ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಜನತಾ ದರ್ಶನ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ಹೆಚ್​ಕೆ ಪಾಟೀಲ್ (HK Patil) ಹಾಗೂ ಶತಾಯುಷಿ ಕಮಲಾಬಾಯಿ ಜೋಶಿ (Kamalabai Joshi) ಅವರು ಸಸಿಗೆ ನೀರು ಉಣಿಸುವ ಮೂಲಕ ಚಾಲನೆ ನೀಡಿದರು. ಹಾಗೂ ಶತಾಯುಷಿ ಕಮಲಾಬಾಯಿ ಅವರ ಎರಡು ಅಹವಾಲುಗಳನ್ನು ಸಚಿವ ಹೆಚ್​ಕೆ ಪಾಟೀಲ್ ವೇದಿಕೆ ಮೇಲೆಯೇ ಈಡೇರಿಸಿದರು. ಆಧಾರ್ ಕಾರ್ಡ್ ಹಾಗೂ ಮಶಾಸನ ಪತ್ರ ನೀಡುವ ಮೂಲಕ ಅಜ್ಜಿಯ ಮೊದಲ ಬೇಡಿಕೆ ಈಡೇರಿಸಿದರು. ಇನ್ನು ಮತ್ತೊಂದೆಡೆ ವ್ಯಕ್ತಿಯೊಬ್ಬರು ಜನತಾ ದರ್ಶನದಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ ಪ್ರಸಂಗ ನಡೆಯಿತು.

ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಅಬ್ದುಲ್ ಖಾದರ್ ಸಾಬ್ ಎಂಬುವವರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಗ್ರಾಮದ ಅಭಿವೃದ್ಧಿಗಾಗಿ 12 ವರ್ಷದಿಂದ ಹೋರಾಟ ಮಾಡಿದ್ದೇನೆ. ರಸ್ತೆ ಮೂಲ ಸೌಕರ್ಯ ಕಲ್ಪಿಸಲು ಹೋರಾಟ ಮಾಡಿದ್ದೇನೆ‌. ಕೇಂದ್ರ ಸರ್ಕಾರಕ್ಕೆ ನನ್ನ ಹೆಸರು ಶಿಫಾರಸು ಮಾಡಿ ಎಂದು ಅಬ್ದುಲ್ ಖಾದರ್ ಸಾಬ್ ಅವರು ಅರ್ಜಿ ಸಲ್ಲಿಸಿ ಸಚಿವರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಪ್ರಶಸ್ತಿ ಅರ್ಜಿ ಸ್ವೀಕರಿಸಿದ ಸಚಿವ ಹೆಚ್​ಕೆ ಪಾಟೀಲ್ ಅವರು ಕೆಲಕಾಲ ವಿಚಲಿತರಾದರು. ಅಬ್ದುಲ್ ಖಾದರ್ ಸಾಬ್ ಮಾತು ಕೇಳಿ ಸಭೆಯಲ್ಲಿದ್ದ ಜನರೆಲ್ಲ ನಕ್ಕರು. ಬಳಿಕ ಸಮಾಜ ಸೇವೆ ಮಾಡುವವರು ಪ್ರಶಸ್ತಿ ಕೇಳಬಾರದು. ನಾನು ಜಿಲ್ಲಾಮಟ್ಟದ ಪ್ರಶಸ್ತಿಗೆ ಪರಿಗಣಿಸಲು ಪ್ರಯತ್ನಿಸೋದಾಗಿ ಸಚಿವ ಹೆಚ್​ಕೆ ಪಾಟೀಲ್ ಅವರು ಖಾದರ್ ಸಾಬ್​ಗೆ ಹೇಳಿದರು. ಸಚಿವರ ಮಾತು ಕೇಳಿ ಖಾದರ್ ವೇದಿಕೆಯಿಂದ ಕೆಳಗಿಳಿದರು.

ಇದನ್ನೂ ಓದಿ: ಜನತಾ ದರ್ಶನ: ದೂರು ಕೊಟ್ಟವರಿಂದಲೇ ಲಂಚ ಕೇಳುತ್ತಾರೆ: ಶಾಸಕ ವಿಠಲ ಕಟಕದೊಂಡ ಅಸಮಾಧಾನ

ಯಾವುದೇ ಕಾರಣಕ್ಕೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡಬೇಡಿ

ಇನ್ನು ಮತ್ತೊಂದೆಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಹೆಚ್​ಕೆ ಪಾಟೀಲ್ ಜಿಲ್ಲಾಡಳಿತಕ್ಕೆ ಝಾಡಿಸಿದ್ದಾರೆ. ಜಿಡ್ಡು ಹಿಡಿದ ಆಡಳಿತ ಬಿಡಿಸುವುದೇ ಜನತಾ ದರ್ಶನ. ನಮ್ಮ ಸಿಎಂ ಸಿದ್ದರಾಮಯ್ಯ ಅವರ ಅಭಿಲಾಷೆ. ಆಧಾರ್ ಕಾರ್ಡ್ ಜಿಲ್ಲಾಧಿಕಾರಿ ಮಟ್ಟದಲ್ಲೇ ಆಗಬೇಕು. ಈಗ ಶತಾಯುಷಿ ಅಜ್ಜಿ ನನಗೆ ಅಹವಾಲು ಸಲ್ಲಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಧಾರ್ ಕಾರ್ಡ್ ಗಾಗಿ 101 ವರ್ಷ ಕಾಯಬೇಕಾಗಿದೆ. ಜಿಲ್ಲಾಡಳಿತದ ಮಟ್ಟದಲ್ಲಿ ಆಗಬೇಕಾದ ಕೆಲಸ ಅಧಿಕಾರಿಗಳು ಮಾಡಬೇಕು ಎಂದು ಡಿಸಿ ವೈಶಾಲಿ ಅವರಿಗೆ ಸಚಿವ ಪಾಟೀಲ್ ಖಡಕ್ ಸೂಚನೆ ಕೊಟ್ಟರು. ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಯಾವುದೇ ಕಾರಣಕ್ಕೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡದಂತೆ ಸೂಚನೆ ನೀಡಿದರು.

ಗದಗ ಜಿಲ್ಲೆಗೆ ಸಂಬಂಧಿಸಿದಂತೆ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ