Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಟಿವಿ9 ವರದಿ ಬಳಿಕ ಮಕ್ಕಳಿಗೆ ಕಳಪೆ ಆಹಾರ ನೀಡುತ್ತಿದ್ದ ಅಂಗವಾಡಿ ಚಿತ್ರಣವೇ ಚೇಂಜ್

ಗದಗ ನಗರದ ಗಂಗಾಪೂರ ಪೇಟೆಯ ಅಂಗನವಾಡಿ‌ ಕೇಂದ್ರ 178ರಲ್ಲಿಇದನ್ನು ಸರಿಯಾಗಿ ನಿರ್ವಹಣೆ ಮಾಡದೆ, ಕೊಳೆತ ಮೊಟ್ಟೆ, ಬೂಸ್ಟ್ ಹಿಡಿದ ಶೇಂಗಾ ಚಿಕ್ಕಿಗಳನ್ನು ಮಕ್ಕಳಿಗೆ ನೀಡಲಾಗುತ್ತಿದೆ ಎಂದು ಟಿವಿ9 ವರದಿ ಪ್ರಕಟಿಸಿತ್ತು. ಇದರ ಫಲಶ್ರುತಿಯಾಗಿ ಅಂಗನವಾಡಿ ಕೇಂದ್ರದ ಚಿತ್ರವಣವೇ ಬದಲಾಗಿದೆ. ಅಲ್ಲದೆ, ನ್ಯಾಯಾಧೀಶರು ಕೂಡ ಭೇಟಿ ನೀಡಿದ್ದಾರೆ.

ಗದಗ: ಟಿವಿ9 ವರದಿ ಬಳಿಕ ಮಕ್ಕಳಿಗೆ ಕಳಪೆ ಆಹಾರ ನೀಡುತ್ತಿದ್ದ ಅಂಗವಾಡಿ ಚಿತ್ರಣವೇ ಚೇಂಜ್
ಮಕ್ಕಳಿಗೆ ಕಳಪೆ ಆಹಾರ ನೀಡುತ್ತಿದ್ದ ಅಂಗವಾಡಿಯಲ್ಲಿ ಎಲ್ಲವೂ ಸ್ವಚ್ಛ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: Rakesh Nayak Manchi

Updated on: Feb 17, 2024 | 1:20 PM

ಗದಗ, ಫೆ.17: ನಗರದ (Gadag) ಗಂಗಾಪೂರ ಪೇಟೆಯ ಅಂಗನವಾಡಿ‌ (Anganawadi) ಕೇಂದ್ರ 178ರಲ್ಲಿಇದನ್ನು ಸರಿಯಾಗಿ ನಿರ್ವಹಣೆ ಮಾಡದೆ, ಕೊಳೆತ ಮೊಟ್ಟೆ, ಬೂಸ್ಟ್ ಹಿಡಿದ ಶೇಂಗಾ ಚಿಕ್ಕಿಗಳನ್ನು ಮಕ್ಕಳಿಗೆ ನೀಡಲಾಗುತ್ತಿದೆ ಎಂದು ಟಿವಿ9 ವರದಿ ಪ್ರಕಟಿಸಿತ್ತು. ಇದರ ಫಲಶ್ರುತಿಯಾಗಿ ಅಂಗನವಾಡಿ ಕೇಂದ್ರದ ಚಿತ್ರವಣವೇ ಬದಲಾಗಿದೆ. ಅಲ್ಲದೆ, ನ್ಯಾಯಾಧೀಶರು ಕೂಡ ಭೇಟಿ ನೀಡಿದ್ದಾರೆ.

ಅಂಗನವಾಡಿ ಕೇಂದ್ರ ನಿನ್ನೆ ಗಬ್ಬು ವಾಸನೆ, ಅವ್ಯವಸ್ಥೆಯಿಂದ ಕೂಡಿತ್ತು. ಈ ಬಗ್ಗೆ ಟಿವಿ9 ವರದಿ ಪ್ರಕಟಿಸಿದ ನಂತರ ಎಚ್ಚೆತ್ತ ಅಧಿಕಾರಿಗಳು ಇಂದು ಅಂಗನವಾಡಿ ಕೇಂದ್ರವನ್ನು ಸ್ವಚ್ಛಗೊಳಿಸಿದ್ದಾರೆ. ಲೈಟಿಂಗ್ ವ್ಯವಸ್ಥೆಯನ್ನೂ ಮಾಡಿದ್ದಾರೆ. ನಿನ್ನೆ ಕಳಪೆಯಾಗಿದ್ದ ಆಹಾರ ಧಾನ್ಯಗಳನ್ನು ಸ್ವಚ್ಛಗೊಳಿಸಲಾಗಿದೆ. ಅಷ್ಟು ಮಾತ್ರವಲ್ಲದೆ, ಹೊಸ ಶಿಕ್ಷಕಿ ಮಂಜುಳಾ ಬೆಟಗೇರಿ ಎಂಬವರನ್ನು ನೇಮಕ ಮಾಡಲಾಗಿದೆ.

ಮಕ್ಕಳಿಗೆ ಆಟ, ಪಾಠ, ಶುಚಿಯಾದ ಅಡುಗೆ ವ್ಯವಸ್ಥೆ ಮಾಡಿಕೊಡಲಾಗುತ್ತಿದ್ದು, ಇಂತಹ ಬದಲಾವಣೆಗೆ ಕಾರಣವಾಗಿರುವ ಟಿವಿ9ಗೆ ಮಕ್ಕಳ ಪೋಷಕರು ಧನ್ಯವಾದಗಳನ್ನು ತಿಳಿಸಿದ್ದಾರೆ. ಅಲ್ಲದೆ, ಅಂಗನವಾಡಿ ಕೇಂದ್ರಕ್ಕೆ ನ್ಯಾಯಾಧೀಶರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿ ಸೂಚನೆ ನೀಡಿದರು.

ಇದನ್ನೂ ಓದಿ: ಬಳ್ಳಾರಿ: ಸಿರುಗುಪ್ಪ ಹಾಸ್ಟೆಲ್ ಅಡುಗೆ ಸರಿಯಿಲ್ಲ ಎಂದು ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ವಾರ್ಡನ್​​ ಹಲ್ಲೆ

ಅಂಗನವಾಡಿ ಮಕ್ಕಳ ಜೀವದ ಜೊತೆ‌ ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ ಕಲ್ಯಾಣ ಇಲಾಖೆ ಚೆಲ್ಲಾಟವಾಡುತ್ತಿದೆ. ಕಳಪೆ ಆಹಾರ ಪೂರೈಕೆ ಮಾಡಿರುವ ಪ್ರಕರಣ ಗಂಗಾಪೂರ ಪೇಟೆಯ ಅಂಗನವಾಡಿ‌ ಕೇಂದ್ರ 178ರಲ್ಲಿ ಬೆಳಕಿಗೆ ಬಂದಿತ್ತು. ಕೊಳೆತ ಮೊಟ್ಟೆ, ಬೂಸ್ಟ್ ಹಿಡಿದ ಶೇಂಗಾ ಚಿಕ್ಕಿ ಹಾಗೂ ತರಕಾರಿ ಸೇರಿದಂತೆ ಆಹಾರ ಧಾನ್ಯಗಳಲ್ಲಿ ನುಸಿಗಳು ಕಂಡು ಬರುತ್ತಿದ್ದವು. ಅದನ್ನೇ ಮಕ್ಕಳಿಗೆ ನೀಡುತ್ತಿರುವ ಹಿನ್ನಲೆ ರೊಚ್ವಿಗೆದ್ದ ಪಾಲಕರು, ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಉಪನಿರ್ದೇಶಕ ಶೆಟ್ಟೆಪ್ಪನವರ​ನ್ನು ಪಾಲಕರು ಹಿಗ್ಗಾಮುಗ್ಗಾ ತರಾಟೆಗೆ ತಹೆದುಕೊಂಡಿದ್ದರು. ಅಲ್ಲದೆ, ಇಲಿಗಳು ಕಚ್ಚಿರುವ ತರಕಾರಿಗಳನ್ನು ಅಧಿಕಾರಿಗಳ ಎದುರೇ ಸುರಿದು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ವಿರುದ್ಧ ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್