AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕದಲ್ಲಿ ಕಾರ ಹುಣ್ಣಿಮೆ ಸಡಗರ: ಎತ್ತುಗಳ ಸಿಂಗರಿಸಿ ಸಂಭ್ರಮಿಸಿದ ರೈತರು, ಗಮನ ಸೆಳೆದ ಸಿಎಂ ಸಿದ್ದರಾಮಯ್ಯ ಬರಹ

ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ಕರಿ ಹರಿಯುವ ಎತ್ತುಗಳ ಮೇಲೆ ‘ಮುಂದಿನ ಸಿಎಂ ಸಿದ್ದರಾಮಯ್ಯ’ ಬರಹ ಎದ್ದು ಕಾಣುತ್ತಿತ್ತು.

ಉತ್ತರ ಕರ್ನಾಟಕದಲ್ಲಿ ಕಾರ ಹುಣ್ಣಿಮೆ ಸಡಗರ: ಎತ್ತುಗಳ ಸಿಂಗರಿಸಿ ಸಂಭ್ರಮಿಸಿದ ರೈತರು, ಗಮನ ಸೆಳೆದ ಸಿಎಂ ಸಿದ್ದರಾಮಯ್ಯ ಬರಹ
ಗದಗ ಜಿಲ್ಲೆಯಲ್ಲಿ ಕಾರ ಹುಣ್ಣಿಮೆ ಸಂಭ್ರಮ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jun 15, 2022 | 9:29 AM

Share

ಗದಗ: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬುಧವಾರ ಕಾರ ಹುಣ್ಣಿಮೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ವರ್ಷವಿಡೀ ಶ್ರಮವಹಿಸಿ, ರೈತನಿಗೆ ಬೆನ್ನುಕೊಟ್ಟು ದುಡಿಯುವ ಎತ್ತುಗಳನ್ನು ಕರಿ ಹರಿಯುವ ಮೂಲಕ ರೈತರು ಕೃತಜ್ಞತೆ ಸಲ್ಲಿಸಿದರು. ಮುಂಗಾರು ಹಂಗಾಮಿನ ಮೊದಲ ಹಬ್ಬವಾದ ಕಾರ ಹುಣ್ಣಿಮೆಯ ನಂತರ ರೈತರು ಕೃಷಿ ಸಿದ್ಧತೆ ಅರಂಭಿಸುತ್ತಾರೆ. ಕೃಷಿ ಜಗತ್ತಿನ ಆಧಾರ ಸ್ತಂಭವಾಗಿರುವ ಎತ್ತುಗಳಿಗೆ ಸ್ನಾನ ಮಾಡಿಸಿ, ಬಣ್ಣ-ಬಣ್ಣದ ಪೇಂಟು, ಬಲೂನುಗಳಲ್ಲಿ ಅಲಂಕರಿಸಿದರು. ಕಲಬುರಗಿ, ವಿಜಯಪುರ, ಯಾದರಿಗಿ, ರಾಯಚೂರು, ವಿಜಯಪುರ, ಬೆಳಗಾವಿ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳ ಗ್ರಾಮಗಳಲ್ಲಿ ಸಡಗರ-ಸಂಭ್ರಮ ಮನೆ ಮಾಡಿದೆ. ಬಹುತೇಕ ಗ್ರಾಮಗಳ ಅಗಸಿಯಲ್ಲಿ ಗ್ರಾಮಸ್ಥರು ಮಾವಿನ ತೋರಣ ಕಟ್ಟಿ, ಸಿಂಗಾರಗೊಂಡಿದ್ದ ಎತ್ತುಗಳನ್ನು ಓಡಿಸಲಾಯಿತು. ಕರಿ ಹರಿಯುವ ದೃಶ್ಯ ಎಲ್ಲರ ಗಮನ ಸೆಳೆಯಿತು.

ತಿಮ್ಮಾಪುರ: ಗಮನ ಸೆಳೆದ ಬರಹ

ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ಕರಿ ಹರಿಯುವ ಎತ್ತುಗಳ ಮೇಲೆ ‘ಮುಂದಿನ ಸಿಎಂ ಸಿದ್ದರಾಮಯ್ಯ’ ಬರಹ ಎದ್ದು ಕಾಣುತ್ತಿತ್ತು. ಒಂದು ಹೋರಿ ಮೇಲೆ, ‘ಮುಂದಿನ 2023ರ ಸಿಎಂ ಸಿದ್ದರಾಮಯ್ಯ’ ಎಂದು ರೈತರು ಬರೆದಿದ್ದರು. ಇನ್ನೊಂದು ಹೋರಿಯ ಮೇಲೆ ‘ರೋಣ ವಿಧಾನಸಭಾ ಕ್ಷೇತ್ರದ ಮುಂದಿನ ಎಂಎಲ್​ಎ ಜಿ.ಎಸ್.ಪಾಟೀಲ’ ಎನ್ನುವ ಬರಹ ಇತ್ತು.

ಇವು ಬಸಪ್ಪ-ಮಾಯಮ್ಮ ಅವರಿಗೆ ಸೇರಿದ ಹೋರಿಗಳು. ಕರಿ ಹರಿಯಲು ನಡೆದ ಸ್ಪರ್ಧೆಯಲ್ಲಿ ಒಟ್ಟು ಐದು ಹೋರಿಗಳು ಭಾಗವಹಿಸಿದ್ದವು. ಅದರಲ್ಲಿ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಬರೆದಿದ್ದ ಹೋರಿಯು ಪ್ರಥಮ ಸ್ಥಾನ ಪಡೆದು ಕರಿ ಹರಿಯಿತು. ‘ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರಿಗೆ ಒಳ್ಳೆಯ ಭವಿಷ್ಯವಿದೆ’ ಎಂಬ ಮಾತುಗಳು ಗ್ರಾಮಸ್ಥರಿಂದ ಕೇಳಿ ಬಂತು. ಕರಿ ಹರಿದ ಹೋರಿಗಳಿಗೆ ಪೂಜೆ ಮಾಡಿದ ರೈತರು ಊರ ತುಂಬಾ ಮೆರವಣಿಗೆ ಮಾಡಿ ಸಂಭ್ರಮಿಸಿದರು.

ಇದನ್ನೂ ಓದಿ: ಎತ್ತುಗಳಿಗೆ ಕೃತಜ್ಞತೆ ಹೇಳುವ ಕಾರ ಹುಣ್ಣಿಮೆ; ಏನಿದರ ವಿಶೇಷತೆ?

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?