AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PWD ಇಲಾಖೆಯಲ್ಲಿ 500 ಕೋಟಿ ರೂ. ಹಗರಣ: ತನಿಖೆಗೆ ಆದೇಶಿಸಿದ ಸರ್ಕಾರ, ಸಿಸಿ ಪಾಟೀಲ್​ಗೆ​ ಸಂಕಷ್ಟ

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣವನ್ನು ಈಗಿನ ಕಾಂಗ್ರೆಸ್ ಸರ್ಕಾರ ತನಿಖೆಗೆ ಆದೇಶಿಸಿದೆ. ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ 500 ಕೋಟಿ ರೂಪಾಯಿ ಹಗಣವನ್ನು ತನಿಖೆ ಆದೇಶಿಸಿದ್ದು, ಇದರಿಂದ ಆ ಇಲಾಖೆಯ ಸಚಿವರಾವಗಿದ್ದ ಸಿಸಿ ಪಾಟೀಲ್​ಗೆ ಶಾಕ್ ಕೊಟ್ಟಿದೆ.

PWD ಇಲಾಖೆಯಲ್ಲಿ 500 ಕೋಟಿ ರೂ. ಹಗರಣ: ತನಿಖೆಗೆ ಆದೇಶಿಸಿದ ಸರ್ಕಾರ, ಸಿಸಿ ಪಾಟೀಲ್​ಗೆ​ ಸಂಕಷ್ಟ
ಸಿಸಿ ಪಾಟೀಲ್, ಮಾಜಿ PWD ಸಚಿವ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Oct 09, 2023 | 12:59 PM

Share

ಗದಗ, (ಅಕ್ಟೋಬರ್ 09): ಈ ಹಿಂದಿನ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ 500 ಕೋಟಿ ರೂಪಾಯಿ ಹಗರಣವನ್ನು (pwd department Scam ) ಇದೀಗ ಕಾಂಗ್ರೆಸ್​ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಮಾಜಿ ಸಚಿವ ಬಿ ಆರ್ ಯಾವಗಲ್ ದೂರಿನ ಮೇಲೆ ರಾಜ್ಯ ಸರ್ಕಾರವು,  ಪಿಡಬ್ಲ್ಯೂ ಗುಣ ಭರವಸೆ ವಲಯ ಬೆಂಗಳೂರ ಮುಖ್ಯ ಇಂಜಿನಿಯರ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಇದರಿಂದ ಅಂದಿನ ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದ ಸಿಸಿ ಪಾಟೀಲ್​ಗೆ ಸಂಕಷ್ಟ ಎದುರಾಗಿದೆ.

ಇನ್ನು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಯಾವಗಲ್ , ಕಳಪೆ ಕಾಮಗಾರಿ, ಅರ್ಹತೆ ಇಲ್ಲದ ಗುತ್ತಿಗೆದಾರರಿಗೆ ಕೋಟ್ಯಾಂತರ ರೂಪಾಯಿ ಮೊತ್ತದ ಟೆಂಡರ್ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಅ್ಲಲದೇ ಗುತ್ತಿಗೆದಾರರು. ನಕಲಿ ವರ್ಕ್ ಡನ್ ಸರ್ಟಿಫಿಕೇಟ್ ನೀಡಿ ಟೆಂಡರ್ ಪಡೆದುಕೊಂಡಿದ್ದಾರೆ. ಕಡಿಮೆ ಮೊತ್ತಕ್ಕೆ ಟೆಂಡರ್ ಹಾಕಿದವರನ್ನು ಬಿಟ್ಟು ಹೆಚ್ಚಿನ ದರಕ್ಕೆ ಹಾಕಿದವರಿಗೆ ಟೆಂಡರ್ ನಿಡಲಾಗಿದೆ. ಅಂದಿನ ಸಚಿವ ಸಿ ಸಿ ಪಾಟೀಲ್ ತಮಗೆ ಬೇಕಾದವರಿಗೆ ಕೆಲಸ ಕೊಡಿಸಿದ್ದಾರೆ ಎಂದು ಗಂಭೀರ ಆರೋಪಗಳನ್ನು ಮಾಡಿದರು.

ಮಾಜಿ ಲೋಕೋಪಯೋಗಿ ಇಲಾಖೆ ಸಚಿವ ಸಿ ಸಿ ಪಾಟೀಲ್ ಈ 500 ಕೋಟಿ ರೂ. ಹಗರಣದ ರೂವಾರಿಯಾಗಿದ್ದಾರೆ. ಇದೇ ಅಕ್ಟೋಬರ್ 11, 12 ರಂದು ತನಿಖಾ ತಂಡ ನರಗುಂದ ಕ್ಷೇತ್ರಕ್ಕೆ ಆಗಮಿಸಲಿದೆ ಎಂದು ತಿಳಿಸಿದರು.

Published On - 12:48 pm, Mon, 9 October 23

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು