AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷದವರು ಹಾಸಿಗೆ, ದಿಂಬು ಕೊಡುವಲ್ಲಿಯೂ ಭ್ರಷ್ಟಾಚಾರ ಮಾಡಿದ್ದಾರೆ: ಸಿಎಂ ಬೊಮ್ಮಾಯಿ ತೀವ್ರ ವಾಗ್ದಾಳಿ

Basavaraj Bommai: ಈ ಹಿಂದೆ ನಾವು ಆ ಭಾಗ್ಯ ಕೊಟ್ವೆವು, ಈ ಭಾಗ್ಯ ಕೊಟ್ವಿ ಅಂತೆಲ್ಲಾ ದೊಡ್ಡದಾಗಿ ಭಾಷಣ ಮಾಡ್ತಿದ್ದರು. ಆದ್ರೆ ಎಲ್ಲವೂ ಕೂಡ ಕೇವಲ ಭಾಷಣದ ಭಾಗ್ಯವಾಗಿ ಕೊಟ್ಟರು ಅಷ್ಟೆ. ಇದು ಈ ರಾಜ್ಯದ ದೌರ್ಭಾಗ್ಯವಾಗಿ ಹೋಯ್ತು ಎಂದು ಸಿಎಂ ಬೊಮ್ಮಾಯಿ ಲೇವಡಿ ಮಾಡಿದರು.

ಕಾಂಗ್ರೆಸ್ ಪಕ್ಷದವರು ಹಾಸಿಗೆ, ದಿಂಬು ಕೊಡುವಲ್ಲಿಯೂ ಭ್ರಷ್ಟಾಚಾರ ಮಾಡಿದ್ದಾರೆ: ಸಿಎಂ ಬೊಮ್ಮಾಯಿ ತೀವ್ರ ವಾಗ್ದಾಳಿ
ಕಾಂಗ್ರೆಸ್ ಪಕ್ಷದವರು ಹಾಸಿಗೆ, ದಿಂಬು ಕೊಡುವಲ್ಲಿಯೂ ಭ್ರಷ್ಟಾಚಾರ ಮಾಡಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ
TV9 Web
| Edited By: |

Updated on:Apr 15, 2022 | 3:08 PM

Share

ಗದಗ: ದೇಶದಲ್ಲಿ ಭ್ರಷ್ಟಾಚಾರ ಪರಂಪರೆ (Corruption) ಆರಂಭಿಸಿದ್ದೇ ಕಾಂಗ್ರೆಸ್ ಪಕ್ಷದವರು. ಕಾಂಗ್ರೆಸ್ ನವರು (Karnataka Congress) ಹತಾಶಾರಾಗಿ ನಮ್ಮ ನಾಯಕರ ಮೇಲೆ ಸುಖಾ ಸುಮ್ಮನೆ ಆರೋಪ ಮಾಡ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ವರ್ಷದ ಅವಧಿಯಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಎಲ್ಲಾ ರಂಗದಲ್ಲಿಯೂ ಕಾಂಗ್ರೆಸ್ ಭ್ರಷ್ಟಾಚಾರ ಹಬ್ಬಿಸಿದ್ದರು. ಇದಕ್ಕಾಗಿಯೇ ಜನ ಅವರನ್ನು ಮನೆಗೆ ಕಳಿಸಿದ್ದಾರೆ. ಎಸ್​ಸಿ, ಎಸ್​ಟಿ ಹಾಸ್ಟೆಲ್ ಮಕ್ಕಳಿಗೆ ಹಾಸಿಗೆ, ದಿಂಬಗಳು ಕೊಡುವಲ್ಲಿಯೂ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗದಗ ನಗರ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಅಭಿನಂದನಾ ಸಮಾರಂಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಪಾಲ್ಗೊಂಡು, ಮಾತನಾಡಿದರು.

ಸಿಎಂ ಬೊಮ್ಮಾಯಿಗೆ ಸನ್ಮಾನ: ಗದಗ ಜಿಲ್ಲೆಗೆ 1,300 ಕೋಟಿ ರೂಪಾಯಿ ಅನುದಾನ ಬಿಡುಗಡೆ ಹಿನ್ನೆಲೆ ಗದಗ ಜಿಲ್ಲಾ ಬಿಜೆಪಿ ಘಟಕದಿಂದ ನಗರದ ವಿವೇಕಾನಂದ ಸಭಾಭವನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ನಡೆಯಲಿದೆ.

2023 ರ ಚುನಾವಣೆಯಲ್ಲಿ ನಾವು ನಮ್ಮ ಕೆಲಸಗಳನ್ನು ಮುಂದಿಟ್ಟುಕೊಂಡು ಜನರ ಮುಂದೆ ಹೋಗಬೇಕು. ಮನೆ ಮನೆಗೆ ಪ್ರಚಾರ ಮಾಡಿ ಮತ್ತೊಮ್ಮೆ ಬಿಜೆಪಿ ಸರಕಾರ ಅಧಿಕಾರಕ್ಕಾಗಿ ತಾವೆಲ್ಲ ಶ್ರಮಿಸಿ ಎಂದು ಪಕ್ಷದ ಕಾರ್ಯಕರ್ತರಿಗೆ ಸಿಎಂ ಬೊಮ್ಮಾಯಿ ಕರೆ ಕೊಟ್ಟರು. ವಿರೋಧ ಪಕ್ಷದಲ್ಲಿ ತೊಳಲಾಟ ಶುರುವಾಗಿದೆ. ಅದನ್ನೆಲ್ಲ ಬಿಟ್ಟು.. ನಮ್ಮ ನಾಯಕ ಈಶ್ವರಪ್ಪ ಮೇಲೆ ಗೂಬೆ ಕೂರಿಸೋ ಪ್ರಯತ್ನ ನಡೆದಿದೆ. ನಿಷ್ಠೂರವಾಗಿ, ನಿಷ್ಪಕ್ಷಪಾತವಾದ ತನಿಖೆ ನಡೆಯುತ್ತಿದೆ. ಸ್ವಚ್ಛ ಮುತ್ತುಗಳಂತೆ ವರ್ತಿಸ್ತಿರೋ ಕಾಂಗ್ರೆಸ್ ನವರು ಸಾವಿನ ಮನೆಯಲ್ಲಿ ರಾಜಕೀಯ ಲಾಭದ ಎಣಿಕೆ ಮಾಡುವ ಬುದ್ಧಿ ಬಿಡಬೇಕು. ವಿರೋಧ ಪಕ್ಷವಾಗಿ ನೀವು ವಿಫಲವಾಗಿದ್ದೀರಿ. ಕೇಂದ್ರದ ಹಾಗೇ.. ನಾಳೆ ನಿಮಗೆ ರಾಜ್ಯದಲ್ಲೂ ವಿರೋಧ ಪಕ್ಷದ ಸ್ಥಾನ ಸಹ ಕಳೆದುಕೊಳ್ತೀರಿ. ಈಗ ರಾಜ್ಯದಲ್ಲಿಯೂ ಇದೇ ಪರಿಸ್ಥಿತಿ ಅನುಭವಿಸಬೇಕಾಗ್ತಿದೆ. 2023 ರ ನಮ್ಮ ಗುರಿ – ನಮ್ಮ ಭವ್ಯ ಭವಿಷ್ಯ ಎಂದು ಸಿಎಂ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಹೇಳಿದರು.

ಕಾಂಗ್ರೆಸ್ಸಿನ ಆ ಭಾಗ್ಯ – ಈ ಭಾಗ್ಯಗಳು ರಾಜ್ಯದ ದೌರ್ಭಾಗ್ಯವಾಗಿ ಹೋಯ್ತು: ಸಿಎಂ ಬೊಮ್ಮಾಯಿ ಲೇವಡಿ ವಿರೋಧ ಪಕ್ಷದ ವಿರೋಧವನ್ನ ಮೆಟ್ಟಿ ನಿಲ್ಲಬೇಕು. ಸರ್ವ ಸ್ಪರ್ಶಿ, ಸರ್ವ ವ್ಯಾಪ್ತಿ ಬಜೆಟ್ ಕೊಟ್ಟಿದ್ದೇವೆ. ಈಗ ದುಡಿಮೆಯೇ ದೊಡ್ಡಪ್ಪ ಅನ್ನೋ ಕಾಲ ಬಂದಿದೆ. ಈ ಹಿಂದೆ ನಾವು ಆ ಭಾಗ್ಯ ಕೊಟ್ವೆವು, ಈ ಭಾಗ್ಯ ಕೊಟ್ವಿ ಅಂತೆಲ್ಲಾ ದೊಡ್ಡದಾಗಿ ಭಾಷಣ ಮಾಡ್ತಿದ್ದರು. ಆದ್ರೆ ಎಲ್ಲವೂ ಕೂಡ ಕೇವಲ ಭಾಷಣದ ಭಾಗ್ಯವಾಗಿ ಕೊಟ್ಟರು ಅಷ್ಟೆ. ಇದು ಈ ರಾಜ್ಯದ ದೌರ್ಭಾಗ್ಯವಾಗಿ ಹೋಯ್ತು ಎಂದು ಸಿಎಂ ಬೊಮ್ಮಾಯಿ ಲೇವಡಿ ಮಾಡಿದರು. ಇದೂ ಓದಿ: ಆಪ್ ಆದ್ಮಿ ರಾಜಕೀಯ ಅನಾಥಾಶ್ರಮ ಅಲ್ಲ: ಯುವಕರೇ ರಾಜಕೀಯಕ್ಕೆ ಬನ್ನಿ ಎಂದ ಭಾಸ್ಕರ್ ರಾವ್

ಇದೂ ಓದಿ: ಸಚಿವ ಮುರುಗೇಶ್ ನಿರಾಣಿ ಭೇಟಿ ಬಳಿಕ ಮೃದುವಾದ ಸಂತೋಷ್ ಕುಟುಂಬಸ್ಥರು, ಸಂತೋಷ್ ಸಾವು ವಿಧಿಲಿಖಿತ ಎಂದ ಸೋದರ ಪ್ರಶಾಂತ್

Published On - 3:03 pm, Fri, 15 April 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ