AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷದವರು ಹಾಸಿಗೆ, ದಿಂಬು ಕೊಡುವಲ್ಲಿಯೂ ಭ್ರಷ್ಟಾಚಾರ ಮಾಡಿದ್ದಾರೆ: ಸಿಎಂ ಬೊಮ್ಮಾಯಿ ತೀವ್ರ ವಾಗ್ದಾಳಿ

Basavaraj Bommai: ಈ ಹಿಂದೆ ನಾವು ಆ ಭಾಗ್ಯ ಕೊಟ್ವೆವು, ಈ ಭಾಗ್ಯ ಕೊಟ್ವಿ ಅಂತೆಲ್ಲಾ ದೊಡ್ಡದಾಗಿ ಭಾಷಣ ಮಾಡ್ತಿದ್ದರು. ಆದ್ರೆ ಎಲ್ಲವೂ ಕೂಡ ಕೇವಲ ಭಾಷಣದ ಭಾಗ್ಯವಾಗಿ ಕೊಟ್ಟರು ಅಷ್ಟೆ. ಇದು ಈ ರಾಜ್ಯದ ದೌರ್ಭಾಗ್ಯವಾಗಿ ಹೋಯ್ತು ಎಂದು ಸಿಎಂ ಬೊಮ್ಮಾಯಿ ಲೇವಡಿ ಮಾಡಿದರು.

ಕಾಂಗ್ರೆಸ್ ಪಕ್ಷದವರು ಹಾಸಿಗೆ, ದಿಂಬು ಕೊಡುವಲ್ಲಿಯೂ ಭ್ರಷ್ಟಾಚಾರ ಮಾಡಿದ್ದಾರೆ: ಸಿಎಂ ಬೊಮ್ಮಾಯಿ ತೀವ್ರ ವಾಗ್ದಾಳಿ
ಕಾಂಗ್ರೆಸ್ ಪಕ್ಷದವರು ಹಾಸಿಗೆ, ದಿಂಬು ಕೊಡುವಲ್ಲಿಯೂ ಭ್ರಷ್ಟಾಚಾರ ಮಾಡಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ
TV9 Web
| Updated By: ಸಾಧು ಶ್ರೀನಾಥ್​|

Updated on:Apr 15, 2022 | 3:08 PM

Share

ಗದಗ: ದೇಶದಲ್ಲಿ ಭ್ರಷ್ಟಾಚಾರ ಪರಂಪರೆ (Corruption) ಆರಂಭಿಸಿದ್ದೇ ಕಾಂಗ್ರೆಸ್ ಪಕ್ಷದವರು. ಕಾಂಗ್ರೆಸ್ ನವರು (Karnataka Congress) ಹತಾಶಾರಾಗಿ ನಮ್ಮ ನಾಯಕರ ಮೇಲೆ ಸುಖಾ ಸುಮ್ಮನೆ ಆರೋಪ ಮಾಡ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ವರ್ಷದ ಅವಧಿಯಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಎಲ್ಲಾ ರಂಗದಲ್ಲಿಯೂ ಕಾಂಗ್ರೆಸ್ ಭ್ರಷ್ಟಾಚಾರ ಹಬ್ಬಿಸಿದ್ದರು. ಇದಕ್ಕಾಗಿಯೇ ಜನ ಅವರನ್ನು ಮನೆಗೆ ಕಳಿಸಿದ್ದಾರೆ. ಎಸ್​ಸಿ, ಎಸ್​ಟಿ ಹಾಸ್ಟೆಲ್ ಮಕ್ಕಳಿಗೆ ಹಾಸಿಗೆ, ದಿಂಬಗಳು ಕೊಡುವಲ್ಲಿಯೂ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗದಗ ನಗರ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಅಭಿನಂದನಾ ಸಮಾರಂಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಪಾಲ್ಗೊಂಡು, ಮಾತನಾಡಿದರು.

ಸಿಎಂ ಬೊಮ್ಮಾಯಿಗೆ ಸನ್ಮಾನ: ಗದಗ ಜಿಲ್ಲೆಗೆ 1,300 ಕೋಟಿ ರೂಪಾಯಿ ಅನುದಾನ ಬಿಡುಗಡೆ ಹಿನ್ನೆಲೆ ಗದಗ ಜಿಲ್ಲಾ ಬಿಜೆಪಿ ಘಟಕದಿಂದ ನಗರದ ವಿವೇಕಾನಂದ ಸಭಾಭವನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ನಡೆಯಲಿದೆ.

2023 ರ ಚುನಾವಣೆಯಲ್ಲಿ ನಾವು ನಮ್ಮ ಕೆಲಸಗಳನ್ನು ಮುಂದಿಟ್ಟುಕೊಂಡು ಜನರ ಮುಂದೆ ಹೋಗಬೇಕು. ಮನೆ ಮನೆಗೆ ಪ್ರಚಾರ ಮಾಡಿ ಮತ್ತೊಮ್ಮೆ ಬಿಜೆಪಿ ಸರಕಾರ ಅಧಿಕಾರಕ್ಕಾಗಿ ತಾವೆಲ್ಲ ಶ್ರಮಿಸಿ ಎಂದು ಪಕ್ಷದ ಕಾರ್ಯಕರ್ತರಿಗೆ ಸಿಎಂ ಬೊಮ್ಮಾಯಿ ಕರೆ ಕೊಟ್ಟರು. ವಿರೋಧ ಪಕ್ಷದಲ್ಲಿ ತೊಳಲಾಟ ಶುರುವಾಗಿದೆ. ಅದನ್ನೆಲ್ಲ ಬಿಟ್ಟು.. ನಮ್ಮ ನಾಯಕ ಈಶ್ವರಪ್ಪ ಮೇಲೆ ಗೂಬೆ ಕೂರಿಸೋ ಪ್ರಯತ್ನ ನಡೆದಿದೆ. ನಿಷ್ಠೂರವಾಗಿ, ನಿಷ್ಪಕ್ಷಪಾತವಾದ ತನಿಖೆ ನಡೆಯುತ್ತಿದೆ. ಸ್ವಚ್ಛ ಮುತ್ತುಗಳಂತೆ ವರ್ತಿಸ್ತಿರೋ ಕಾಂಗ್ರೆಸ್ ನವರು ಸಾವಿನ ಮನೆಯಲ್ಲಿ ರಾಜಕೀಯ ಲಾಭದ ಎಣಿಕೆ ಮಾಡುವ ಬುದ್ಧಿ ಬಿಡಬೇಕು. ವಿರೋಧ ಪಕ್ಷವಾಗಿ ನೀವು ವಿಫಲವಾಗಿದ್ದೀರಿ. ಕೇಂದ್ರದ ಹಾಗೇ.. ನಾಳೆ ನಿಮಗೆ ರಾಜ್ಯದಲ್ಲೂ ವಿರೋಧ ಪಕ್ಷದ ಸ್ಥಾನ ಸಹ ಕಳೆದುಕೊಳ್ತೀರಿ. ಈಗ ರಾಜ್ಯದಲ್ಲಿಯೂ ಇದೇ ಪರಿಸ್ಥಿತಿ ಅನುಭವಿಸಬೇಕಾಗ್ತಿದೆ. 2023 ರ ನಮ್ಮ ಗುರಿ – ನಮ್ಮ ಭವ್ಯ ಭವಿಷ್ಯ ಎಂದು ಸಿಎಂ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಹೇಳಿದರು.

ಕಾಂಗ್ರೆಸ್ಸಿನ ಆ ಭಾಗ್ಯ – ಈ ಭಾಗ್ಯಗಳು ರಾಜ್ಯದ ದೌರ್ಭಾಗ್ಯವಾಗಿ ಹೋಯ್ತು: ಸಿಎಂ ಬೊಮ್ಮಾಯಿ ಲೇವಡಿ ವಿರೋಧ ಪಕ್ಷದ ವಿರೋಧವನ್ನ ಮೆಟ್ಟಿ ನಿಲ್ಲಬೇಕು. ಸರ್ವ ಸ್ಪರ್ಶಿ, ಸರ್ವ ವ್ಯಾಪ್ತಿ ಬಜೆಟ್ ಕೊಟ್ಟಿದ್ದೇವೆ. ಈಗ ದುಡಿಮೆಯೇ ದೊಡ್ಡಪ್ಪ ಅನ್ನೋ ಕಾಲ ಬಂದಿದೆ. ಈ ಹಿಂದೆ ನಾವು ಆ ಭಾಗ್ಯ ಕೊಟ್ವೆವು, ಈ ಭಾಗ್ಯ ಕೊಟ್ವಿ ಅಂತೆಲ್ಲಾ ದೊಡ್ಡದಾಗಿ ಭಾಷಣ ಮಾಡ್ತಿದ್ದರು. ಆದ್ರೆ ಎಲ್ಲವೂ ಕೂಡ ಕೇವಲ ಭಾಷಣದ ಭಾಗ್ಯವಾಗಿ ಕೊಟ್ಟರು ಅಷ್ಟೆ. ಇದು ಈ ರಾಜ್ಯದ ದೌರ್ಭಾಗ್ಯವಾಗಿ ಹೋಯ್ತು ಎಂದು ಸಿಎಂ ಬೊಮ್ಮಾಯಿ ಲೇವಡಿ ಮಾಡಿದರು. ಇದೂ ಓದಿ: ಆಪ್ ಆದ್ಮಿ ರಾಜಕೀಯ ಅನಾಥಾಶ್ರಮ ಅಲ್ಲ: ಯುವಕರೇ ರಾಜಕೀಯಕ್ಕೆ ಬನ್ನಿ ಎಂದ ಭಾಸ್ಕರ್ ರಾವ್

ಇದೂ ಓದಿ: ಸಚಿವ ಮುರುಗೇಶ್ ನಿರಾಣಿ ಭೇಟಿ ಬಳಿಕ ಮೃದುವಾದ ಸಂತೋಷ್ ಕುಟುಂಬಸ್ಥರು, ಸಂತೋಷ್ ಸಾವು ವಿಧಿಲಿಖಿತ ಎಂದ ಸೋದರ ಪ್ರಶಾಂತ್

Published On - 3:03 pm, Fri, 15 April 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?