AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿಗಳು ಬೇಡ, ಸಾಲ ಮನ್ನಾ ಮಾಡಿ ಎಂದು ಕೇಂದ್ರ ಬರ ಅಧ್ಯಯನ ತಂಡದ ಮುಂದೆ ರೈತ ಮಹಿಳೆಯರ ಅಳಲು

ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಗ್ರಾಮದಲ್ಲಿ ಕೇಂದ್ರ ಅಧ್ಯಯನ ತಂಡ ಬರ ಪರಿಶೀಲನೆ ನಡೆಸಿದ ಬಳಿಕ ರೈತ ಮಹಿಳೆಯರು ಅಧಿಕಾರಿಗಳ ಎದುರು ಅಳಲು ತೋಡಿಕೊಂಡರು. "ನಮಗೆ ರಾಜ್ಯ ಸರ್ಕಾರದ ಶಕ್ತಿ ಯೋಜನೆ, ಗೃಹ‌ಲಕ್ಷ್ಮೀ ಯೋಜನೆ ಇದ್ಯಾವುದು ಬೇಡ". ಸರ್ಕಾರ ನಮ್ಮ ಸಾಲಮನ್ನಾ ಮಾಡಲಿ, ನಮ್ಮನ್ನು ಬದುಕಿಸಬೇಕು" ಎಂದು ಆಗ್ರಹಿಸಿದರು.

ಗ್ಯಾರಂಟಿಗಳು ಬೇಡ, ಸಾಲ ಮನ್ನಾ ಮಾಡಿ ಎಂದು ಕೇಂದ್ರ ಬರ ಅಧ್ಯಯನ ತಂಡದ ಮುಂದೆ ರೈತ ಮಹಿಳೆಯರ ಅಳಲು
ಗದಗ ರೈತ ಮಹಿಳೆಯರು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Oct 06, 2023 | 12:14 PM

Share

ಗದಗ ಅ.06: ರಾಜ್ಯದ 195 ತಾಲೂಕುಗಳಲ್ಲಿ ಬರ (Drought) ಆವರಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಬರ ಅಧ್ಯಯನ (Central Drought Study) ತಂಡ ರಾಜ್ಯಕ್ಕೆ ಆಗಮಿಸಿದ್ದು, ಕೇಂದ್ರ ಕುಡಿಯುವ ನೀರು, ನೈರ್ಮಲ್ಯ ವಿಭಾಗದ ಹೆಚ್ಚುವರಿ ಸಲಹೆಗಾರ ಡಿ.ರಾಜಶೇಖರ ನೇತೃತ್ವದಲ್ಲಿ ಅಧ್ಯಯನ ನಡೆಯುತ್ತಿದೆ. ಅಧಿಕಾರಿಗಳು ಶುಕ್ರವಾರ ಲಕ್ಷ್ಮೇಶ್ವರ (Laxmeshwar) ತಾಲೂಕಿನ ಹುಲಗೇರಿ, ಇಟ್ಟಿಗೇರಿ ಕೆರೆ, ದೊಡ್ಡೂರು, ಸೂರಣಗಿ, ಶಿರಹಟ್ಟಿ ತಾಲೂಕಿನ ಚಿಕ್ಕಸವನೂರು, ಬೆಳ್ಳಟ್ಟಿ, ವಡವಿ, ಛಬ್ಬಿ, ದೇವಿಹಾಳ, ಶೆಟ್ಟಿಕೇರಿ ಮತ್ತು ಗದಗ ತಾಲೂಕಿನ ಮುಳಗುಂದದಲ್ಲಿ ಬರ ಪರಿಸ್ಥಿತಿ ಪರಿಶೀಲನೆ ನಡೆಸುತ್ತಿದ್ದಾರೆ.

ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಗ್ರಾಮದಲ್ಲಿ ಕೇಂದ್ರ ಅಧ್ಯಯನ ತಂಡ ಬರ ಪರಿಶೀಲನೆ ನಡೆಸಿದ ಬಳಿಕ ರೈತ ಮಹಿಳೆಯರು ಅಧಿಕಾರಿಗಳ ಎದರು ಗೋಳು ತೋಡಿಕೊಂಡರು. “ನಮಗೆ ರಾಜ್ಯ ಸರ್ಕಾರದ ಶಕ್ತಿ ಯೋಜನೆ, ಗೃಹ‌ಲಕ್ಷ್ಮೀ ಯೋಜನೆ ಇದ್ಯಾವುದು ಬೇಡ”. ಸರ್ಕಾರ ನಮ್ಮ ಸಾಲ ಮನ್ನಾ ಮಾಡಿ, ನಮ್ಮನ್ನು ಬದುಕಿಸಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಜಮೀನಿಗೆ ಬಂದ ಕೇಂದ್ರ ಬರ ತಂಡದ ಅಧಿಕಾರಿಗಳ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ರೈತ

ಮಳೆ ಇಲ್ಲದೆ ಬೆಳೆ ನಾಶವಾಗಿದ್ದು ಭೀಕರ ಬರಗಾಲ ಆರಂಭವಾಗಿದೆ. ಸಾಲ ಮಾಡಿ ಹೆಸರು, ಹತ್ತಿ, ಗೋವಿನ ಜೋಳ ಬಿತ್ತನೆ ಮಾಡಿದ್ದೇವೆ. ಮಳೆ ಇಲ್ಲದೆ ಬೆಳೆಗಳೆಲ್ಲಾ ಹಾಳಾಗಿದ್ದು ತುಂಬಾ ತೊಂದರೆ ಆಗುತ್ತಿದೆ. ಭೀಕರ ಬರಕ್ಕೆ ನಾವು ಕಂಗಾಲಾಗಿದ್ದೇವೆ. ನಮ್ಮ ಬದುಕು ಚಿಂತಾಜನಕವಾಗಿದೆ. ನಾವು ತೀವ್ರ ಸಂಕಷ್ಟದಲ್ಲಿದ್ದೇವೆ ಎಂದು ಅಳಲು ತೋಡಿಕೊಂಡರು.

ಮಕ್ಕಳು ಮದುವೆ ಬಂದಿದ್ದಾರೆ. ಮದುವೆ ಮಾಡಬೇಕು ಅಂದ್ರೆ ಕನ್ಯಾ ಸಿಗುತ್ತಿಲ್ಲ. ಭೀಕರ ಬರ ಇದೆ. ನಿಮ್ಮ ಹೊಲದಲ್ಲಿ ಏನಿದೆ ಅಂತ ಕೇಳುತ್ತಾರೆ. ಹೀಗಾಗಿ ನಮ್ಮ ಬದುಕು ಸಂಕಷ್ಟದಲ್ಲಿದೆ. ರೈತ ಕುಟುಂಬಗಳಿಗೆ ಎಲ್ಲಿ ಪ್ರಯಾಣ‌ ಮಾಡಲು ಆಗುತ್ತೆ? ಎರಡು ಸಾವಿರ ಯಾವುದಕ್ಕೆ ಸಾಲುತ್ತೆ ? ಚೆನ್ನಾಗಿ ಮಳೆ ಬೆಳೆ ಆದರೆ ಮನಗೆ ಏನೂ ಬೇಡ. ಈ ಯೋಜನೆಗಳ ಬದಲು ರೈತರ ಸಾಲ ಮನ್ನಾ ಮಾಡಬೇಕು. ಕೂಡಲೇ ಬರ ಪರಿಹಾರ ನೀಡಿ ನಮ್ಮನ್ನು ಬದುಕಿಸಬೇಕು. ಇಲ್ಲಾಂದ್ರೆ ನೇಣು ಹಾಕಿಕೊಂಡು‌ ಸಾಯುವುದು ಬಾಕಿ ಇದೆ ಅಂತ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ