ಸಾವಿರಾರು ಕೋಟಿ ರೂ. ವೆಚ್ಚ ಮಾಡಿದ್ರೂ ರೈತರ ಜಮೀನುಗಳಿಗೆ ಹರಿಯದ ನೀರು; ಅಧಿಕಾರಿಗಳ ವಿರುದ್ಧ ಅನ್ನದಾತರ ಆಕ್ರೊಶ

ಅದು ಗದಗ ಜಿಲ್ಲೆಯ ರೈತರ ಮಹತ್ವಾಕಾಂಕ್ಷಿ ನೀರಾವರಿ ಯೋಜನೆ. ಜಮೀನುಗಳಿಗೆ ನೀರು ಹರಿಯುತ್ತೆ, ಹಸಿರಿನಿಂದ ಕಂಗೊಳಿಸುತ್ತವೆ. ನಮ್ಮ ಬದುಕು ಬಂಗಾರ ಆಗುತ್ತದೆ ಎಂದು ರೈತರು ಕನಸು ಕಂಡಿದ್ದರು. ಅದರಂತೆ ಆ ನೀರಾವರಿ ಯೋಜನೆ ಪೂರ್ಣಗೊಂಡಿದೆ. ಆದರೆ ನೀರಾವರಿ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೈತರ ಕನಸು ನುಚ್ಚುನೂರು ಮಾಡಿದೆ. ಸಾವಿರಾರು ಕೋಟಿ ವೆಚ್ಚದಲ್ಲಿ ಹನಿ ನೀರಾವರಿ ಯೋಜನೆ ಮಾಡಿದರೂ ರೈತರ ಜಮೀನುಗಳಿಗೆ ನೀರಿ ಹರಿಯುತ್ತಿಲ್ಲ. ಬರದಲ್ಲಿ ರೈತರ ಬದುಕಿಗೆ ಕೊಳ್ಳಿ ಇಟ್ಟಿದೆ ಎಂದು ಕಿಡಿಕಾರಿದ್ದಾರೆ.

ಸಾವಿರಾರು ಕೋಟಿ ರೂ. ವೆಚ್ಚ ಮಾಡಿದ್ರೂ ರೈತರ ಜಮೀನುಗಳಿಗೆ ಹರಿಯದ ನೀರು; ಅಧಿಕಾರಿಗಳ ವಿರುದ್ಧ ಅನ್ನದಾತರ ಆಕ್ರೊಶ
ಗದಗದಲ್ಲಿ ಸಾವಿರಾರು ಕೋಟಿ ರೂ. ವೆಚ್ಚ ಮಾಡಿದ್ರೂ ರೈತರ ಜಮೀನುಗಳಿಗೆ ಹರಿಯದ ನೀರು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: May 15, 2024 | 9:13 PM

ಗದಗ, ಮೇ.15: ಜಿಲ್ಲೆಯ ಮುಂಡರಗಿ(Mundaragi) ತಾಲೂಕಿನಲ್ಲಿ ಒಂದನೇ ಹಂತದ ಹನಿ ನೀರಾವರಿ ಯೋಜನೆ ವ್ಯಾಪ್ತಿಗೆ ಮುಂಡರಗಿ ತಾಲೂಕಿನ ಮೇವುಂಡಿ, ಡಂಬಳ, ತಾಮ್ರಗುಂಡಿ, ಚಿಕ್ಕವಡ್ಡಟ್ಟಿ, ಹಿರೇಮವಡ್ಡಟ್ಟಿ ಸೇರಿ ಹಲವು ಗ್ರಾಮಗಳು ಬರುತ್ತವೆ. ಹನಿ ನೀರಾವರಿ 1ನೇ ಹಂತ ಯೋಜನೆ ಪೂರ್ಣಗೊಂಡರೂ ರೈತರ ಜಮೀನುಗಳಿಗೆ ಮಾತ್ರ ಇನ್ನು ಹನಿ ನೀರು ಹರಿಯುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. 2800 ಕೋಟಿ ರೂ. ಖರ್ಚು ಮಾಡಿ ಯೋಜನೆ ಜಾರಿ ‌ಮಾಡಿದ್ದಾರೆ. ಜೊತೆಗೆ ಪಂಪ್ ಹೌಸ್​ಗಳಲ್ಲಿ ಅತ್ಯಾಧುನಿಕ ಯಂತ್ರೋಪಕರಣ ಅಳವಡಿಕೆ ಮಾಡಲಾಗಿದೆ. ಆದ್ರೆ, ರೈತರ ಜಮೀನುಗಳಿಗೆ ಮಾತ್ರ ನೀರು ಹರಿಯುತ್ತಿಲ್ಲ.

ಭೀಕರ ಬರಗಾಲದಲ್ಲಿ ಹನಿ ನೀರಾವರಿ ಯೋಜನೆಯ ಲಾಭ ಪಡೆದು ಬೆಳೆ ಬೆಳೆಯಬೇಕು ಅಂದುಕೊಂಡಿದ್ದ ರೈತರಿಗೆ ನಿರಾಸೆಯಾಗಿದೆ. ಹಮ್ಮಿಗಿ ಬ್ಯಾರೇಜ್​ನಲ್ಲಿ 3.24ಟಿಎಂಸಿ ನೀರು ನಿಲ್ಲಿಸುವ ಕ್ರಮ ಆಗುತ್ತಿಲ್ಲ. ಹೀಗಾಗಿ ರೈತರ ಜಮೀನುಗಳಿಗೆ ನೀರು ಹರಿಯುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಜಮೀನುಗಳಿಗೆ ಹರಿ ಹರಿಯುತ್ತೆ. ಬದುಕು ಬಂಗಾರವಾಗುತ್ತೆ ಎಂದು ನೀರಾವರಿ ಯೋಜನೆಗೆ ನಮ್ಮ ಜಮೀನುಗಳನ್ನು ಕಳೆದುಕೊಂಡಿದ್ದೇವೆ. ಆದ್ರೆ, ನಮ್ಮ ಜಮೀನುಗಳಿಗೆ ಹನಿ ನೀರು ಬರುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:ಕೋಲಾರ: ಯರಗೋಳ್ ನೀರಾವರಿ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಯೋಜನೆಗೆ ಭೂಮಿ ಕಳೆದುಕೊಂಡಿದ್ದು, ಮುಂಡರಗಿ ತಾಲೂಕಿನ ರೈತರು. ಅದ್ರೆ, ನೀರು ಹರಿಯುತ್ತಿರೋದು ಗದಗ-ಬೆಟಗೇರಿ ಅವಳಿ ನಗರದ ಭೀಷ್ಮ ಕೆರೆಗೆ. ಈ ಕುರಿತು ನೀರಾವರಿ ನಿಗಮದ ಅಧಿಕಾರಿಗಳು ಕೂಡ ರೈತರ ಬಗ್ಗೆ ಕಾಳಿಜಿ ವಹಿಸುತ್ತಿಲ್ಲ. ಹೀಗಾಗಿ ಈ ಹನಿ ನೀರಾವರಿ ಯೋಜನೆ ಹಳ್ಳಹಿಡಿದಿದೆಯಾ ಎನ್ನುವ ಅನುಮಾನ ರೈತರನ್ನು ಕಾಡುತ್ತಿದೆ ಅಂತಿದ್ದಾರೆ. ಹನಿ-ನೀರಾವರಿ ಯೋಜನೆ ಒಟ್ಟು 5 ಪ್ಯಾಕೇಜ್​ಗಳಲ್ಲಿ ಯೋಜನೆ ಜಾರಿ ಮಾಡಲಾಗಿದೆ. ಒಟ್ಟು 1.07 ಲಕ್ಷ ಹೇಕ್ಟರ್ ನೀರಾವರಿ ಮಾಡುವ ಉದ್ದೇಶ ಯೋಜನೆಯದ್ದು, 20 ಸಾವಿರ ಹೇಕ್ಟೆರ್ ಹರಿಯುವ ನೀರಾವರಿ ಯೋಜನೆ. 87 ಸಾವಿರ ಹೇಕ್ಟರ್ ಹನಿ ನೀರಾವರಿ ಯೋಜನೆ ಮೂಲಕ ರೈತರ ಬಾಳು ಬಂಗಾರ ಮಾಡುವ ಉದ್ದೇಶ ಇದಾಗಿದೆ. 70 ಸಾವಿರ ಹೇಕ್ಟರ್​ನಲ್ಲಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಆದರೂ ನೀರು ಬರುತ್ತಿಲ್ಲ. ನೀರಾವರಿ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ರೈತರು ಆರೋಪಿಸಿದ್ದಾರೆ.

ಇತ್ತ ಜಮೀನು ಹೋಯ್ತು, ನೀರೂ ಇಲ್ಲದೇ ರೈತರು ಕಂಗಲಾಗಿದ್ದಾರೆ. ಪ್ರತಿಯೊಬ್ಬ ರೈತರ ಜಮೀನುಗಳಿಗೆ ನೀರು ಹರಿದಾಗ ಮಾತ್ರ ಯೋಜನೆ ಸಫಲವಾಗುತ್ತದೆ ಎನ್ನುವುದು ರೈತರ ವಾದ. ಆದ್ರೆ, ನೀರಾವರಿ ಇಲಾಖೆ ಅಧಿಕಾರಿಗಳ ಪ್ರಕಾರ ರೈತರ ಜಮೀನುಗಳಿಗೆ ನೀರು ಹರಿಸಲಾಗಿದೆ. ಸಾಕಷ್ಟು ರೈತರು ಯೋಜನೆ ಲಾಭ ಪಡೆದಿದ್ದಾರೆ ಅಂತಿದ್ದಾರೆ. ಕೆಲ ರೈತರಿಗೆ ಮಾತ್ರ ಸಮಸ್ಯೆಯಾಗಿದೆ ಅಂತಿದ್ದಾರೆ. ಏನೇ ಇರಲಿ ಸಂಪೂರ್ಣ ನೀರು ನಿಲ್ಲಿಸಿದ್ರೆ, ಬರಗಾಲದಲ್ಲಿ ರೈತರಿಗೆ ಈ ಯೋಜನೆ ತುಂಬಾ ಅನುಕೂಲ ಆಗುತ್ತಿತ್ತು ಎನ್ನುವುದು ಅನ್ನದಾತರ ವಾದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್