AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡಿಗೇಡಿಗಳಿಂದ ಮಹಿಳೆಗೆ ಲೈಂಗಿಕ ಕಿರುಕುಳ‌ ಆರೋಪ; ಕಾಪಾಡಿ ಎಂದು ಕಣ್ಣೀರು

ಎಷ್ಟೇ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಂಡರೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲುತ್ತಿಲ್ಲ. ಅದರಂತೆ ಇಂದು(ಮೇ.14) ಗದಗ-ಬೆಟಗೇರಿ(Gadag-Betageri) ಪೊಲೀಸ್ ಠಾಣೆ ವ್ಯಾಪ್ತಿಯಲ್ಲೊಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆ ಸೇರಿದಂತೆ ಆಕೆಯ ಅಪ್ರಾಪ್ತ ಇಬ್ಬರು ಹೆಣ್ಣು ಮಕ್ಕಳಿಗೆ ಕಿಡಿಗೇಡಿಗಳು ಲೈಂಗಿಕ ಕಿರುಕುಳ‌ ನೀಡಿದ ಆರೋಪ ಕೇಳಿಬಂದಿದೆ.

ಕಿಡಿಗೇಡಿಗಳಿಂದ ಮಹಿಳೆಗೆ ಲೈಂಗಿಕ ಕಿರುಕುಳ‌ ಆರೋಪ; ಕಾಪಾಡಿ ಎಂದು ಕಣ್ಣೀರು
ಗದಗದಲ್ಲಿ ಕಿಡಿಗೇಡಿಗಳಿಂದ ಮಹಿಳೆಗೆ ಲೈಂಗಿಕ ಕಿರುಕುಳ‌
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:May 14, 2024 | 5:24 PM

Share

ಗದಗ, ಮೇ.14: ಕಿಡಿಗೇಡಿಗಳ ಅಟ್ಟಹಾಸಕ್ಕೆ ಕುಟುಂಬವೊಂದು ನಲುಗಿದ ಘಟನೆ ಗದಗ-ಬೆಟಗೇರಿ(Gadag-Betageri) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೌದು, ಮಹಿಳೆ ಸೇರಿದಂತೆ ಆಕೆಯ ಅಪ್ರಾಪ್ತ ಇಬ್ಬರು ಹೆಣ್ಣು ಮಕ್ಕಳಿಗೂ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ‘ನನ್ನ ಕುಟುಂಬವನ್ನು ಕಾಪಾಡಿ ಎಂದು ಮಹಿಳೆ ಕಣ್ಣೀರು ಹಾಕುತ್ತಿದ್ದಾರೆ. ಜೊತೆಗೆ ಇದನ್ನು ಪ್ರಶ್ನಿಸಿದ್ದಕ್ಕೆ ತಾಯಿ, ಮಕ್ಕಳ ‌ಮೇಲೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಪೊಲೀಸರಿಗೆ ದೂರು ನೀಡಿದ್ರೂ ಕ್ಯಾರೇ ಎನ್ನದ ಪೊಲೀಸರು

ಇನ್ನು ಘಟನೆ ಕುರಿತು ಬೆಟಗೇರಿ ಪೊಲೀಸ್ ಠಾಣೆಗೆ ಲಿಯಾಕತ್, ಅಲ್ತಾಫ್ ಎಂಬುವವರ ವಿರುದ್ದ ಲೈಂಗಿಕ ಕಿರುಕುಳ ಆರೋಪದ ಮೇಲೆ ದೂರು ನೀಡಿದರೂ ಪೊಲೀಸರು ಮಾತ್ರ ಈ ಕುರಿತು ಕ್ಯಾರೇ ಎಂದಿಲ್ಲ. ಜೊತೆಗೆ ದೂರು ನೀಡಿದ್ರೆ ನಿನ್ನ ಮತ್ತು ಮಕ್ಕಳನ್ನು ಒಳಗೆ ಹಾಕುತ್ತೇವೆ  ಎಂದು ಪೊಲೀಸರು ಕೂಡ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಪೊಲೀಸರ ವಿರುದ್ಧ ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ನಿನ್ನೆ ರಾತ್ರಿ ಕೂಡ ತಾಯಿ ಸೈನಾಜ್, ಪುತ್ರ ಸದ್ಧಾಂ ಮೇಲೆ ಆರೋಪಿ ಲಿಯಾಕತ್, ಅಲ್ತಾಫ್ ಸೈಯದ್, ಸಮೀರ್, ರಿಯಾಜ್, ಜಾವೀದ್ ಎಂಬುವವರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಲೈಂಗಿಕ ಕಿರುಕುಳ‌ ಆರೋಪ; ವೈದ್ಯನ ಮೇಲೆ ದೂರು ದಾಖಲಿಸಿದ ವೈದ್ಯೆ

ಕೆಲಸ ಮಾಡ್ತಿದ್ದ ಕಚೇರಿಯಲ್ಲೇ ಹಣ ಕದ್ದು ಎಸ್ಕೇಪ್; ಆರೋಪಿ ಬಂಧನ

ಬೆಂಗಳೂರು: ಕೆಲಸ ಮಾಡ್ತಿದ್ದ ಕಚೇರಿಯಲ್ಲಿಯೇ ಹಣ ಕದ್ದು ಎಸ್ಕೇಪ್ ಅಗಿದ್ದ ಆರೋಪಿ ಮಹೇಶ್ (32) ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ವಿಜಯ ನಗರ ಸರ್ವೀಸ್ ರಸ್ತೆಯಲ್ಲಿರುವ ಇನ್ಫ್ರಾಸ್ಟ್ರಕ್ಚರ್ ಕಂಪನಿಯಲ್ಲಿ ಆರೋಪಿ ಕೆಲಸ ಮಾಡಿಕೊಂಡಿದ್ದ. ಇತ ನಿವೃತ್ತಿ ಸಬ್ ಇನ್ಸ್ಪೆಕ್ಟರ್ ಮಗ ಕೂಡ ಹೌದು, ಕಚೇರಿಯ ಸಿಬ್ಬಂದಿಗಳಿಗೆ ಸಂಬಳ ಮಾಡಬೇಕಾಗಿದ್ದ 24 ಲಕ್ಷ  ರೂ. ಹಣವನ್ನು ಕದ್ದು ಎಸ್ಕೇಪ್ ಅಗಿದ್ದ.ಇದೀಗ ಆತನನ್ನು ಬಂಧಿಸಿ ಆರೋಪಿಯಿಂದ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Tue, 14 May 24

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?