AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲಿಗೆ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಪೇಪರ್ ಲೀಕ್ ಮಾಡಿದ ತಂದೆ-ಮಗ

ಗದಗದ ಮುನ್ಸಿಪಲ್ ಕಾಲೇಜ್ ನಲ್ಲಿ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಪರೀಕ್ಷೆ ನಡೆದಿತ್ತು. ಆದ್ರೆ ಗದಗದಲ್ಲಿಯೇ ಈ ಪರೀಕ್ಷಾ ಪತ್ರಿಕೆ ಲೀಕ್ ಆಗಿದೆ. ತಂದೆ-ಮಗನ ಸೇರಿಕೊಂಡು ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲಿಗೆ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಪೇಪರ್ ಲೀಕ್ ಮಾಡಿದ ತಂದೆ-ಮಗ
ಗದಗದ ಮುನ್ಸಿಪಲ್ ಕಾಲೇಜ್
TV9 Web
| Updated By: ಆಯೇಷಾ ಬಾನು|

Updated on:Aug 21, 2022 | 10:05 PM

Share

ಗದಗ: ಕಲಬುರಗಿಯಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿತ್ತು(PSI Recruitment Scam). ಅದೇ ರೀತಿ ಈಗ ರಾಜ್ಯದಲ್ಲಿ ಮತ್ತೊಂದು ಭಾರೀ ಪರೀಕ್ಷಾ ಅಕ್ರಮ ಬಯಲಾಗಿದೆ. ಪಿಎಸ್ಐ ಪರೀಕ್ಷೆಯ ಹಗರಣ ಮಾಸುವ ಮುನ್ನವೇ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ(KPTCL Junior Assistant) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆದಿದ್ದ ಪರೀಕ್ಷೆ ಪತ್ರಿಕೆ ಲೀಕ್ ಆಗಿದೆ.

ಗದಗದ ಮುನ್ಸಿಪಲ್ ಕಾಲೇಜ್ ನಲ್ಲಿ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಪರೀಕ್ಷೆ ನಡೆದಿತ್ತು. ಆದ್ರೆ ಗದಗದಲ್ಲಿಯೇ ಈ ಪರೀಕ್ಷಾ ಪತ್ರಿಕೆ ಲೀಕ್ ಆಗಿದೆ. ತಂದೆ-ಮಗನ ಸೇರಿಕೊಂಡು ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಮುನಿಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಮತ್ತು ಅವರ ಮಗ ಸಮೀತ ಕುಮಾರ್ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ.

ಮಗ ಸಮೀತಕುಮಾರ್ ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಎಂಟ್ರಿ ಕೊಟ್ಟು ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆ ಸೆರೆ ಹಿಡಿದಿದ್ದಾನೆ. ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಮೊಬೈಲ್ ಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ತಂದೆ-ಮಗನನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಸೈಬರ್ ಪೊಲೀಸರು, ಕಾಲೇಜ್ ಪ್ರಾಚಾರ್ಯ ಕುಲಕರ್ಣಿ ಅವರನ್ನು ವಿಚಾರಣೆ ನಡೆಸಿದ್ದು ವಿಚಾರಣೆ ವೇಳೆ ಪ್ರಾಚಾರ್ಯರ ಕಣ್ಣೀರಿಟ್ಟಿದ್ದಾರೆ. 2022, ಆಗಸ್ಟ್ 7ರ ಭಾನುವಾರದಂದು ಗದಗ-ಬೆಟಗೇರಿ ಅವಳಿ ನಗರದಲ್ಲಿ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಆ ಪೈಕಿ ಮುನ್ಸಿಪಲ್ ಕಾಲೇಜ್ ನಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ. ಪ್ರಶ್ನೆ ಪತ್ರಿಕೆ ಲಿಂಕ್ ಆಗಿರುವ ಜಾಡು ಹಿಡಿದುಕೊಂಡು ಬಂದ ಬೆಳಗಾವಿ ಪೊಲೀಸರು ಭಾರಿ ಶೋಧ ನಡೆಸುತ್ತಿದ್ದಾರೆ.

Published On - 5:32 pm, Sun, 21 August 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!