AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ತಿಂಗಳಿಂದ ವೃದ್ಧಾಪ್ಯ ವೇತನಕ್ಕೆ ಬ್ರೇಕ್; ಊಟ, ಔಷಧಿಗೂ ಹಣವಿಲ್ಲದೆ ಹಿರಿ ಜೀವಗಳು ಕಂಗಾಲು

Gadag News: ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಐದು ತಿಂಗಳಿಂದ ವೃದ್ಧಾಪ್ಯ ವೇತನ ಸಿಗದೆ ಸಾವಿರಾರು ವೃದ್ಧರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆಹಾರ, ಔಷಧಕ್ಕೂ ಹಣವಿಲ್ಲದೆ ಕಚೇರಿಗಳಿಗೆ ಅಲೆದಾಡುತ್ತಿರುವ ಹಿರಿಯ ಜೀವಗಳು ಕಣ್ಣೀರಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಬಾಕಿ ವೇತನ ಪಾವತಿಸಿ, ಹಿರಿಯರಿಗೆ ಆಸರೆ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

5 ತಿಂಗಳಿಂದ ವೃದ್ಧಾಪ್ಯ ವೇತನಕ್ಕೆ ಬ್ರೇಕ್; ಊಟ, ಔಷಧಿಗೂ ಹಣವಿಲ್ಲದೆ ಹಿರಿ ಜೀವಗಳು ಕಂಗಾಲು
ವೃದ್ಧಾಪ್ಯ ವೇತನImage Credit source: tv9 kannada
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Aug 30, 2026 | 8:50 PM

Share

ಗದಗ, ಆಗಸ್ಟ್​ 30: ಇಳಿವಯಸ್ಸಿನಲ್ಲಿ ಆಸರೆಯಾಗಬೇಕಿದ್ದ ಸರ್ಕಾರಿ ವ್ಯವಸ್ಥೆಯೇ ಬಡ ವೃದ್ಧರಿಗೆ ಕೈಕೊಟ್ಟಿದೆ. ಗದಗ (gadag) ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಲ್ಲಿ ಕಳೆದ 5 ತಿಂಗಳಿಂದ ವೃದ್ಧಾಪ್ಯ ವೇತನ (Old age pension) ಸಿಗದೆ ಫಲಾನುಭವಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಕ್ಕಳಿಂದ ಪರಿತ್ಯಕ್ತರಾಗಿ, ದುಡಿಯುವ ಶಕ್ತಿಯೂ ಇಲ್ಲದೆ ತುತ್ತು ಅನ್ನ ಹಾಗೂ ಮಾತ್ರೆ-ಔಷಧಿಗೂ ಪರದಾಡುತ್ತಿರುವ ಹಿರಿಯ ಜೀವಿಗಳು, ಪ್ರತಿದಿನ ತಹಶೀಲ್ದಾರ್ ಕಚೇರಿಗೆ ಅಲೆದಾಡಿ ಕಣ್ಣೀರಿಡುತ್ತಿದ್ದಾರೆ.

5 ತಿಂಗಳಿಂದ ನಿಂತ ವೇತನ: ಕಚೇರಿಗಳಿಗೆ ತಪ್ಪದ ಅಲೆದಾಟ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಲ್ಲಿ ಕಳೆದ ಐದು ತಿಂಗಳಿಂದ ವೃದ್ಧರಿಗೆ ವೃದ್ಧಾಪ್ಯ ವೇತನ ಸಿಗುತ್ತಿಲ್ಲ. ಹೀಗಾಗಿ ಹಳ್ಳಿಹಳ್ಳಿಗಳಿಂದ ವೇತನಕ್ಕಾಗಿ ಬಡ ಹಿರಿಯ ಜೀವಿಗಳು ನಿತ್ಯವೂ ತಹಶೀಲ್ದಾರ ಕಚೇರಿಗೆ ಅಲೆದಾಡಿ ಹೈರಾಣಾಗಿದ್ದಾರೆ. ಅಧಿಕಾರಿಗಳು ಮಾತ್ರ ನಾಳೆ ಬರುತ್ತೆ, ನಾಡಿದ್ದು ಬರುತ್ತೆ ಅಂತ ಭರವಸೆ ನೀಡಿ ಸಾಗಿ ಹಾಕುತ್ತಿದ್ದಾರೆ. ವೃದ್ಧರ ಬದುಕಿನ ಜೊತೆ ಚೆಲ್ಲಾಟ ಯಾಕೆ ಅಂತ ವೃದ್ಧರು ಕಿಡಿಕಾರುತ್ತಿದ್ದಾರೆ. ದುಡಿದು ತಿನ್ನುವ ಶಕ್ತಿ ಇಲ್ಲ. ಆದಾಯದ ಮೂಲವೂ ಇಲ್ಲ. ಸರ್ಕಾರ ಕೊಡುವ ವೃದ್ಧಾಪ್ಯ ವೇತನವೇ ಬದುಕಿಗೆ ಆಸರೆ. ಆದರೆ ಆ ಆಸರೆಯೇ ಈಗ ಐದು ತಿಂಗಳಿಂದ ಸಿಗುತ್ತಿಲ್ಲ. ವೇತನ ಬರುತ್ತೆ ಎನ್ನುವ ನಿರೀಕ್ಷೆಯಲ್ಲಿ ಪ್ರತಿದಿನ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ಆರೋಪಿ ಬಂಧನ!

ಲಕ್ಷ್ಮೇಶ್ವರ ತಾಲೂಕಿನಲ್ಲಿ ಒಟ್ಟು 7,400 ವೃದ್ಧರು ವೃದ್ಧಾಪ್ಯ ವೇತನ ಪಡೆಯುತ್ತಿದ್ದರು. ಆದರೆ ಇದೀಗ ಸುಮಾರು 3,200 ವೃದ್ಧರ ವೇತನಕ್ಕೆ ತಡೆ ಬಿದ್ದಿದೆ ಎನ್ನಲಾಗಿದೆ. ಆದಾಯ ಹೆಚ್ಚಾಗಿದೆ ಎನ್ನುವ ಕಾರಣ ನೀಡಿ ವೇತನಕ್ಕೆ ಸರ್ಕಾರದ ಮಟ್ಟದಲ್ಲೇ ಕೊಕ್ಕೆ ಹಾಕಲಾಗಿದೆ ಎನ್ನಲಾಗ್ತಿದೆ. ಆದರೆ ಇಲ್ಲಿ ಮತ್ತೊಂದು ಗಂಭೀರ ಪ್ರಶ್ನೆ ಎದುರಾಗಿದೆ. ಮನೆ ಇಲ್ಲ, ಜಮೀನು ಇಲ್ಲ, ಆದಾಯದ ಮೂಲವೂ ಇಲ್ಲ, ಇಂತಹ ಕಡುಬಡ ವೃದ್ಧರಿಗೂ ವೇತನ ಸಿಗದಿದ್ದರೆ ಅವರ ಬದುಕಿನ ಗತಿ ಏನು ಅಂತ ಪ್ರಶ್ನೆ ಎದ್ದಿದೆ. ಪ್ರತಿ ತಿಂಗಳು ಬರಬೇಕಾದ ಹಣಕ್ಕಾಗಿ ಹಿರಿಯ ಜೀವಗಳು ತಿಂಗಳುಗಟ್ಟಲೆ ಕಚೇರಿಗೆ ಅಲೆದು ಅಲೆದು ಸುಸ್ತಾಗಿದ್ದಾರೆ. ಕೆಲ ವೃದ್ಧರಿಗೆ ಮಕ್ಕಳಿದ್ದರೂ ನೋಡಿಕೊಳ್ಳುತ್ತಿಲ್ಲ. ಅಂತವರಿಗೆ ಸರ್ಕಾರದ ಹಣವೇ ಆಸರೆ.

ತಾಂತ್ರಿಕ ಕಾರಣ ಎಂದ ಅಧಿಕಾರಿಗಳು: ಶೀಘ್ರ ಪರಿಹಾರಕ್ಕೆ ಆಗ್ರಹ

ಆದಾಯ ಪರಿಶೀಲನೆ ಹಾಗೂ ತಾಂತ್ರಿಕ ಕಾರಣಗಳಿಂದಾಗಿ 3,200 ಫಲಾನುಭವಿಗಳ ವೇತನ ತಡೆಹಿಡಿಯಲಾಗಿದ್ದು, ಅರ್ಹ ಫಲಾನುಭವಿಗಳ ಸಮಸ್ಯೆಯನ್ನು ಪರಿಶೀಲಿಸಿ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾಜಿಕ ಭದ್ರತಾ ಯೋಜನೆಯಡಿ ಸಿಗಬೇಕಾದ ಈ ಹಕ್ಕಿನ ಹಣವನ್ನು ಸರ್ಕಾರ ತಕ್ಷಣ ಬಿಡುಗಡೆ ಮಾಡಿ, ಕಣ್ಣೀರಲ್ಲಿ ಕೈತೊಳೆಯುತ್ತಿರುವ ಹಿರಿಯ ಜೀವಗಳಿಗೆ ಆಸರೆಯಾಗಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ