ಬೆಳೆ ವಿಮೆ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯವಾಗಲಿ: ಸಚಿವ ಎಚ್​ಕೆ ಪಾಟೀಲ

ಗದಗ: ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತರಿಗೆ ಬೆಳೆ ವಿಮೆ ಸೌಲಭ್ಯವನ್ನು ದೊರಕಬೇಕು. ಆ ನಿಟ್ಟಿನಲ್ಲಿ ಬೆಳೆವಿಮೆ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವಂತೆ ರಾಜ್ಯ ಕಾನೂನು ಸಚಿವ ಎಚ್.ಕೆ.ಪಾಟೀಲ​ ಸೂಚನೆ ನೀಡಿದ್ದಾರೆ.

ಬೆಳೆ ವಿಮೆ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯವಾಗಲಿ: ಸಚಿವ ಎಚ್​ಕೆ ಪಾಟೀಲ
ಅಧಿಕಾರಿಗಳೊಂದಿಗೆ ಸಭೆ ಮಾಡಿದ ಸಚಿವ ಹೆಚ್​ಕೆ ಪಾಟೀಲ್​
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jul 01, 2023 | 6:39 PM

ಗದಗ: ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತರಿಗೆ ಬೆಳೆ ವಿಮೆ (crop insurance) ಸೌಲಭ್ಯವನ್ನು ದೊರಕಬೇಕು. ಆ ನಿಟ್ಟಿನಲ್ಲಿ ಪ್ರಾಥಮಿಕ ಹಂತದಲ್ಲಿಯೇ ತಯಾರಿ ನಡೆಸುವದರ ಜೊತೆಗೆ ಬೆಳೆವಿಮೆ ಕುರಿತು ರೈತರಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಪ್ರಚಾರ ಕೈಗೊಳ್ಳಲು ಮುಂದಾಗುವಂತೆ ರಾಜ್ಯ ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದ್ದಾರೆ.

ಗದಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರದಂದು ಜರುಗಿದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳೆ ವಿಮೆ ಕುರಿತು ರೈತರಿಗೆ ಮನವರಿಕೆ ಮಾಡಿ ಕೊಡಲು ಕಂದಾಯ ಹಾಗೂ ವಿಮಾ ಕಂಪನಿಯವರನ್ನು ನೇಮಿಸುವದರ ಜೊತೆಗೆ ಬೆಳೆ ವಿಮೆ ಕುರಿತು ನಿಯಮಿತವಾಗಿ ಪತ್ರಿಕಾ ಪ್ರಕಟಣೆಗಳನ್ನು ನೀಡಬೇಕು. ಬೆಳೆ ವಿಮೆ ವ್ಯಾಪ್ತಿಗೆ ಬರುವಂತಹ ಹೆಸರು ಬೆಳೆ ಜೊತೆಗೆ ಎಲ್ಲ ಬೆಳೆಗಳ ಕುರಿತು ಜಾಗೃತಿ ಮೂಡಿಸಲು ಸೂಚಿಸಿದರು.

ಈಗಾಗಲೇ ಜಿಲ್ಲೆಯ 50 ಸಾವಿರ ಹೆಕ್ಟೆರ ಪ್ರದೇಶದಲ್ಲಿ ಬಿತ್ತನೆಯಾದಂತಹ ಹೆಸರು ಬೆಳೆ ಮಳೆ ಆಗದೇ ಇರುವ ಕಾರಣ ಹಾನಿ ಆಗುವ ಸಂಭವ ಹೆಚ್ಚಾಗಿದೆ. ಈ ವಿಷಯದಲ್ಲಿ ಯಾವುದೇ ಪ್ರಮಾದಗಳನ್ನು ಎಸಗದೆ ರೈತರಿಗೆ ಅನ್ಯಾಯವಾಗದಂತೆ ಬೆಳೆ ವಿಮೆ ಪಾವತಿಸಬೇಕು. ಬೆಳೆ ವಿಮೆ ಕುರಿತು ಇರುವ ಮಾರ್ಗಸೂಚಿಗಳ ಕುರಿತು ವಿಸ್ತ್ರತವಾಗಿ ಚರ್ಚಿಸಬೇಕು. ಜಿಲ್ಲೆಯಲ್ಲಿ ಹೆಸರು ಬಿತ್ತನೆಯಾದಂತಹ ಪ್ರದೇಶಗಳನ್ನು ಗುರುತಿಸಿ ಅಂತಹವರ ಪಹಣಿ ಪತ್ರದಲ್ಲಿ ನಮೂದಿಸಲು ತಹಶೀಲ್ದಾರರು ಹಾಗೂ ಸಹಾಯಕ ಕೃಷಿ ನಿರ್ದೇಶಕರುಗಳು ಕೂಡಲೇ ಕಾರ್ಯ ಪ್ರವೃತ್ತರಾಗಿ ಜು.8 ರೊಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಲು ಸೂಚನೆ ನೀಡಿದರು. ಅಲ್ಲದೇ ಹೆಸರು ಬಿತ್ತನೆ ಮಾಡಿದ ರೈತರೆಲ್ಲರೂ ಕಡ್ಡಾಯವಾಗ ಬೆಳೆ ವಿಮೆ ಮಾಡಿಸಲು ಅಧಿಕಾರಿಗಳು ಮುಂದಾಗಬೇಕು ಎಂದರು.

ಇದನ್ನೂ ಓದಿ: Pralhad Joshi: ಸುಳ್ಳು ಹಾಗೂ ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು : ಕಾಂಗ್ರೆಸ್ ಪಕ್ಷದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಾಗ್ದಾಳಿ

ರೋಣ ಶಾಸಕ ಜಿ.ಎಸ್.ಪಾಟೀಲ ಅವರು ಕಳಪೆ ಸೂರ್ಯಕಾಂತಿ ಬೀಜ ಕುರಿತು ಟಿವಿ9 ಮಾಡಿದ ವರದಿ ಸಭೆಯ ಗಮನಕ್ಕೆ ತಂದರು. ಈ ಕುರಿತು ಜಂಟಿ ಕೃಷಿ ನಿರ್ದೇಶಕರಿಂದ ಮಾಹಿತಿ ಪಡೆದ ಸಚಿವ ಎಚ್.ಕೆ.ಪಾಟೀಲ ಅವರು ಕಳಪೆ ಗುಣಮಟ್ಟದ ಸೂರ್ಯಕಾಂತಿ ಬಿತ್ತನೆ ಬೀಜ ಪೂರೈಕೆಯಾಗಿದ್ದರ ಕುರಿತು ವರದಿ ಬಂದಲ್ಲಿ ಅಂತಹ ಕಂಪನಿ ವಿರುದ್ಧ ಯಾವುದೇ ಒತ್ತಡಗಳಿಗೆ ಮನಿಯದೇ ನಿರ್ದಾಕ್ಷಣ್ಯವಾಗಿ ಕ್ರಿಮಿನಲ್​ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಹಾಗೂ ಕಳಪೆ ಬೀಜದಿಂದ ಬಾಧಿತರಾದ ರೈತರಿಗೆ ಸೂಕ್ತ ಪರಿಹಾರ ದೊರಕಿಸಿ ಕೊಡಬೇಕೆಂದು ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಬರಗಾಲದ ಛಾಯೆ ಎದ್ದು ಕಾಣುತ್ತಿದ್ದು ಇದರ ಸಮರ್ಪಕ ನಿರ್ವಹಣೆಗೆ ಪೂರ್ವಭಾವಿ ತಯಾರಾಗಿರಬೇಕು. ನರೆಗಾ ಯೋಜನೆಯಡಿ ಈಗಿರುವ ಗುರಿಯನ್ನು ನಾಲ್ಕು ಪಟ್ಟು ಹೆಚ್ಚಿಗೆ ಮಾಡಬೇಕು. ಅಲ್ಲದೇ ನೂರು ಮಾನವ ದಿನಗಳ ಬದಲಾಗಿ ಎರಡನೂರು ಮಾನವ ದಿನಗಳನ್ನು ಒದಗಿಸಲು ಸಭೆಯಲ್ಲಿ ಠರಾವು ಮಾಡಿ ಈ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದರು.

ಡಿ.ಬಿ.ಓ.ಟಿ ಯೋಜನೆಯಡಿ ಪ್ರತಿಯೊಬ್ಬರಿಗೆ ಎಪ್ಪತ್ತು ಲೀಟರ್ ನೀರು ಒದಗಿಸುವ ಯೋಜನೆಯಾಗಿದ್ದು ಇದರಲ್ಲಿ ಪ್ರಸ್ತುತ ಕೇವಲ ನಲವತ್ತು ಲೀಟರ್ ನೀರು ಮಾತ್ರ ಪೂರೈಸಲಾಗುತ್ತಿದೆ. ಪ್ರಸ್ತುತ ಈ ಯೋಜನೆಗಳನ್ನು ನಿರ್ವಹಿಸುತ್ತಿರುವ ಏಜೆನ್ಸಿಗಳಿಗೆ ಅಗತ್ಯದ ಜನರೇಟರಗಳನ್ನು ಪೂರೈಸಲಾಗಿದ್ದರು ಸಹ ಸಬೂಬುಗಳನ್ನು ಹೇಳುವ ಮೂಲಕ ಸಮರ್ಪಕವಾಗಿ ನೀರು ಪೂರೈಕೆ ಆಗದಿರುವ ಕುರಿತು ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದರು. ಮುಂದೆ ಜರುಗಲಿರುವ ಪ್ರತಿ ಸಭೆಗೂ ಕುಡಿಯುವ ನೀರಿಗೆ ಸಂಬಂಧಿಸಿದ ಏಜೆನ್ಸಿಯ ಜವಾಬ್ದಾರಿಯುತ ವ್ಯಕ್ತಿಯನ್ನು ಕಡ್ಡಾಯವಾಗಿ ಆಗಮಿಸಬೇಕೆಂದು ಸೂಚಿಸಿದರು.

ಇದನ್ನೂ ಓದಿ: ಕಾನೂನು ಸುವ್ಯವಸ್ಥೆಗೆ ಥರ್ಡ ಐ ಯೋಜನೆ ಶೀಘ್ರ ಜಾರಿ: ಸಚಿವ ಎಚ್​ಕೆ ಪಾಟೀಲ್

ಜುಲೈ ಅಂತ್ಯದವರೆಗೆ ಜಿಲ್ಲೆಯಲ್ಲಿನ ಎಲ್ಲ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿರುವ ಕುರಿತು ಎಲ್ಲ ಗ್ರಾಮ ಪಂಚಾಯತಗಳಿಂದ ವರದಿ ಪಡೆದು ದುರಸ್ತಿಗೊಳಪಟ್ಟಂತಹ ಎಲ್ಲ ಘಟಕಗಳನ್ನು ಪುನರ ಪ್ರಾರಂಭವಾಗುವಂತೆ ಸೂಚನೆ ನೀಡಿದರು. ಡಿ.ಬಿ.ಓ.ಟಿ ಯೋಜನೆಯಡಿ ಪೂರ್ಣ ಪ್ರಮಾಣದಲ್ಲಿ ನೀರು ಪೂರೈಕೆ ಆಗದೇ ಇರುವಂತಹ ಗ್ರಾಮಗಳನ್ನು ಗುರುತಿಸಿ ಅಂತಹ ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸುವ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಮುಂದಿನ ದಿನಮಾನಗಳಲ್ಲಿ ಜಾನುವಾರುಗಳಿಗೆ ಮೇವಿನ ತೊಂದರೆ ಆಗದಂತೆ ಈಗಿನಿಂದಲೇ ಮೇವಿನ ಬ್ಯಾಂಕ ತೆರೆಯಬೇಕು. ಜಿಲ್ಲೆಗೆ ಬೇಕಾಗಬಹುದಾಂತಹ ಮೇವಿನ ಅಗತ್ಯತೆಗಳನ್ನು ದಾಸ್ತಾನು ಮಾಡಿಕೊಳ್ಳಲು ಈಗಿನಿಂದಲೇ ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು. ಸ್ವಾತಂತ್ರೋತ್ಸವದ ಎಪ್ಪತ್ತೈದು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ನಾಲ್ಕು ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮ ರೂಪಿಸಲು ಸಭೆಯಲ್ಲಿ ನಿರ್ಣಯಿಸಿದರು. ಅಲ್ಲದೇ ಈ ಗುರಿಯನ್ನು ಪೂರ್ಣಗೊಳಿಸಲು ಎಲ್ಲ ಇಲಾಖೆಗಳು ಪಾಲ್ಗೊಂಡು ಗದಗ ಜಿಲ್ಲೆಯನ್ನು ಹಸಿರು ಜಿಲ್ಲೆಯನ್ನಾಗಿಸಲು ಪಣತೊಡಲು ಕರೆ ನೀಡಿದರು.

ಸರಕಾರ ಘೋಷಿಸಿರುವ ಗ್ಯಾರಂಟಿಗಳನ್ನು ಅಪೇಕ್ಷಿತ ದಿನದೊಳಗಾಗಿ ಅನುಷ್ಠಾನಗೊಳಿಸಲು ಜಿಲ್ಲೆ ಪ್ರಥಮವಾಗಿರಬೇಕು. ಅಲ್ಲದೇ ಈ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ನಿಗಾ ವಹಿಸಬೇಕು ಎಂದು ಸಚಿವರಾದ ಎಚ್.ಕೆ.ಪಾಟೀಲ ಸೂಚಿಸಿದರು.

ನರಗುಂದ ಶಾಸಕರಾದ ಸಿ.ಸಿ. ಪಾಟೀಲ ಮಾತನಾಡಿ ಈಗಾಗಲೇ ಬಿತ್ತನೆ ಮಾಡಿದಂತಹ ಹೆಸರು ಬೆಳೆ ನಾಶವಾದಲ್ಲಿ ಬೆಳೆ ವಿಮೆ ದೊರಕಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ ಜರುಗಿಸಲು ತಿಳಿಸಿದರು. ಪ್ರತಿ ಗ್ರಾಮ ಪಂಚಾಯತಗಳಿಗೆ ಒಂದರಂತೆ ಬೆಳೆ ವಿಮೆ ಕುರಿತು ಬ್ಯಾನರ ಅಳವಡಿಸಬೇಕು. ನಿಗದಿತ ಪ್ರಮಾಣದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯವಯವಾಗುತ್ತಿರುವ ಕುರಿತು ಗಂಭೀರವಾಗಿ ಪರಿಗಣಿಸಲು ತಿಳಿಸಿದರು. ಮೇವು ಬೆಳೆಯಲು ರೈತರಿಗೆ ಉತ್ತೇಜನ ನೀಡಬೇಕೆಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:33 pm, Sat, 1 July 23

ತಾಜಾ ಸುದ್ದಿ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ