AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುವ ಸೇತುವೆ ಮೇಲೆ ದಾಟಲು ಯತ್ನಿಸಿದ ಲಾರಿ ಚಾಲಕ; ಗದಗದ ಬೆಣ್ಣೆ ಹಳ್ಳದಲ್ಲಿ ತಪ್ಪಿತು ಭಾರಿ ಅನಾಹುತ

ಜಿಲ್ಲೆಯ ರೋಣ ತಾಲೂಕಿನ ಯಾವಗಲ್ ಗ್ರಾಮ ಬಳಿಯ ಸೇತುವೆ ಅಪಾಯಮಟ್ಟ ಮೀರಿ ಹರಿಯುತ್ತಿದೆ. ನರಗುಂದ ಹಾಗೂ ರೋಣ ಮಾರ್ಗ ಸಂಪರ್ಕ ಕಡಿತವಾಗಿದ್ದು, ವಾಹನ ಸವಾರರು ಪರದಾಟ ಪಡುತ್ತಿದ್ದಾರೆ.

ತುಂಬಿ ಹರಿಯುವ ಸೇತುವೆ ಮೇಲೆ ದಾಟಲು ಯತ್ನಿಸಿದ ಲಾರಿ ಚಾಲಕ; ಗದಗದ ಬೆಣ್ಣೆ ಹಳ್ಳದಲ್ಲಿ ತಪ್ಪಿತು ಭಾರಿ ಅನಾಹುತ
ನೀರಿನ ರಭಸಕ್ಕೆ ಸಿಕ್ಕ ಲಾರಿ
TV9 Web
| Edited By: |

Updated on: Jul 25, 2021 | 1:59 PM

Share

ಗದಗ: ಜಿಲ್ಲೆಯಲ್ಲಿ ಮಳೆ ಅಬ್ಬರ ಇಲ್ಲ. ಆದರೂ ಪ್ರವಾಹದ ಭೀತಿ ಆರಂಭವಾಗಿದೆ. ಮಲಪ್ರಭಾ ನದಿ ಹಾಗೂ ಬೆಣ್ಣೆ ಹಳ್ಳ ಉಕ್ಕಿ ಹರಿಯುತ್ತಿವೆ. ಕ್ಷಣ ಕ್ಷಣಕ್ಕೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಲಪ್ರಭೆ ಉಕ್ಕಿ ಹರಿಯುತ್ತಿರುವುದರಿಂದ ಒಂದು ಗ್ರಾಮ ನಡುಗಡ್ಡೆಯಾಗಿದ್ದರೆ, ಬೆಣ್ಣೆ ಹಳ್ಳದ ಉಗ್ರ ನರ್ತನಕ್ಕೆ ಸೇತುವೆಗಳು ಜಲಾವೃತವಾಗಿವೆ. ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆ ಜಲಾಸುರನ ಪಾಲಾಗಿವೆ. ಈ ನಡುವೆ ಬೆಣ್ಣೆ ಹಳ್ಳದ ರಭಸಕ್ಕೆ ಲಾರಿಯೊಂದು ಹಳ್ಳಕ್ಕೆ ವಾಲಿದ್ದು, ಚಾಲಕ ಮತ್ತು ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

ಜಿಲ್ಲೆಯ ರೋಣ ತಾಲೂಕಿನ ಯಾವಗಲ್ ಗ್ರಾಮ ಬಳಿಯ ಸೇತುವೆ ಅಪಾಯಮಟ್ಟ ಮೀರಿ ಹರಿಯುತ್ತಿದೆ. ನರಗುಂದ ಹಾಗೂ ರೋಣ ಮಾರ್ಗ ಸಂಪರ್ಕ ಕಡಿತವಾಗಿದ್ದು, ವಾಹನ ಸವಾರರು ಪರದಾಟ ಪಡುತ್ತಿದ್ದಾರೆ. ಹರಿಯುತ್ತಿರುವ ನೀರಿನ ನಡುವೆ ಸೇತುವೆ ದಾಟಲು ಯತ್ನಿಸಿದ್ದ ಲಾರಿ, ಬೆಣ್ಣೆ ಹಳ್ಳದಲ್ಲಿ ಸಿಲುಕಿಕೊಂಡು ಭಾಗಶಃ ಮುಳಗಡೆಯಾಗಿದೆ. ಉಕ್ಕಿ ಹರಿಯುವ ಬೆಣ್ಣೆ ಹಳ್ಳದಲ್ಲಿ ಲಾರಿ ದಾಟಿಸಲು ಚಾಲಕ ಪ್ರಯತ್ನ ಮಾಡಿದ್ದಾನೆ. ಆದರೆ ನೀರಿನ ರಭಸಕ್ಕೆ ಲಾರಿ ಹಳ್ಳಕ್ಕೆ ವಾಲಿದೆ.

ಲಾರಿ ಸೇತುವೆ ಪಾಲಾಗುತ್ತೆ ಅಂತಾ ಕಬ್ಬಿಣದ ಚೈನ್ ಹಾಕಿ ಲಾರಿ ಕಾಪಾಡಿಕೊಳ್ಳುವ ಪ್ರಯತ್ನ ಕೂಡಾ ನಡೆದಿದೆ. ಅದೃಷ್ಟವಶಾತ್ ಚಾಲಕ, ಕ್ಲೀನರ್ ಬಚಾವ್ ಆಗಿದ್ದಾರೆ.

ನವಿಲು ತೀರ್ಥ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹರಿಬಿಟ್ಟಿದ್ದು, ಮಲಪ್ರಭಾ ದಡದಲ್ಲಿ ಗ್ರಾಮಗಳಿಗೆ ಪ್ರವಾಹದ ಭೀತಿ ಅರಂಭವಾಗಿದೆ. ಅದರಲ್ಲೂ ಜಿಲ್ಲೆಯ ನರಗುಂದ ತಾಲೂಕಿನ ಲಖಮಾಪುರ ಗ್ರಾಮ ಸಂಪೂರ್ಣ ನಡುಗಡ್ಡೆಯಾಗಿದೆ. ಗ್ರಾಮಸ್ಥರು ಕಾಳಜಿ ಕೇಂದ್ರದಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ. ಇನ್ನೂ ಕೆಲವರು ಉಕ್ಕಿ ಹರಿಯುವ ಮಲಪ್ರಭಾ ನದಿಯನ್ನು ದಾಟಿ ಅಪಾಯವನ್ನು ಮೈಮೆಲೆ ಎಳೆದುಕೊಳ್ಳುತ್ತಿದ್ದಾರೆ. ಲಖಮಾಪುರ, ವಾಸನ ಹಾಗೂ ಕೊಣ್ಣೂರ ಗ್ರಾಮದ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದ ನೀರು ಜಲಾವೃತವಾಗಿವೆ. ಲಖಮಾಪುರ ಗ್ರಾಮಕ್ಕೆ ಸೇತುವೆ ನಿರ್ಮಾಣ ಮಾಡುವಂತೆ ಈ ಗ್ರಾಮದ ಜನರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸರ್ಕಾರ ಕಳೆದ ಮೂರು ವರ್ಷಗಳಿಂದ ಕುಂಟು ನೆಪ ಹೇಳಿಕೊಂಡು ಬರುತ್ತಿದೆ. ಹೀಗಾಗಿಯೇ ಮಲಪ್ರಭಾ ನದಿ ಉಕ್ಕಿ ಹರಿದಾಗ ಗ್ರಾಮವನ್ನು ಬಿಟ್ಟು ಹೋಗುವಂತಹ ಸ್ಥಿತಿ ನಿರ್ಮಾಣವಾಗುತ್ತದೆ ಅಂತ ಗ್ರಾಮಸ್ಥರು ಕಿಡಿಕಾರಿದ್ದಾರೆ. ಸಚಿವರಿಗೆ, ಅಧಿಕಾರಿಗಳಿಗೆ ಪ್ರವಾಹ ಬಂದಾಗ ಮಾತ್ರ ನಮ್ಮ ನೆನಪಾಗುತ್ತೆ. ಪ್ರವಾಹ ಕಡಿಮೆಯಾದ ಬಳಿಕ ನಮ್ಮ ಗ್ರಾಮದತ್ತ ತಿರುಗಿ ನೋಡಿಲ್ಲ ಅಂತ ರೈತ ಪೂರ್ಣಾನಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಮಳೆ ಅಬ್ಬರ ತಗ್ಗಿದರೂ ಬೆಳಗಾವಿಯಲ್ಲಿ ನಿಲ್ಲದ ಭೀತಿ; ಬೆಳೆ ಹಾನಿಗೆ ಪರಿಹಾರ ನೀಡುವಂತೆ ರೈತರ ಆಗ್ರಹ

60 ಅಡಿಯ ತುಂಗಾ ಚಾನಲ್​ಗೆ ಬಿದ್ದ ಹಸು; ಒಂದು ಘಂಟೆ ಕಾರ್ಯಾಚರಣೆ ಯಶಸ್ವಿ

(lorry driver tried to cross between the heavy water in Gadag)

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ