AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ರಷ್ಯಾ ಬಾಲಕಿಯ ಮೇಲೆ ಅತ್ಯಾಚಾರ: ಗದಗದಲ್ಲಿ ಆರೋಪಿ ಬಂಧನ

ಮೇ 6ರಂದು ಅತ್ಯಾಚಾರ ನಡೆದಿತ್ತು. ಮೇ 9ರಂದು ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು.

ಗೋವಾದಲ್ಲಿ ರಷ್ಯಾ ಬಾಲಕಿಯ ಮೇಲೆ ಅತ್ಯಾಚಾರ: ಗದಗದಲ್ಲಿ ಆರೋಪಿ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 12, 2022 | 12:40 PM

Share

ಪಣಜಿ: ರಷ್ಯಾದಿಂದ ಪ್ರವಾಸಕ್ಕೆ ಬಂದಿದ್ದ (Russian Tourist) 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅತ್ಯಾಚಾರ ಎಸಗಿದ ಆರೋಪಿಯನ್ನು ಕರ್ನಾಟಕದ ಗದಗದಲ್ಲಿ ಗೋವಾ ಪೊಲೀಸರು (Goa Police) ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಗೋವಾದ ಅರಂಬೊಲ್ ರೆಸಾರ್ಟ್​ನಲ್ಲಿ ಆರೋಪಿಯು ಕೊಠಡಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ರವಿ ಲಮಾಣಿ ಎಂದು ಗುರುತಿಸಲಾಗಿದೆ. ಪೆರ್​ನೆಮ್ ಪೊಲೀಸರು ಮೇ 10ರಂದು ಗದಗದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಮೇ 6ರಂದು ಅತ್ಯಾಚಾರ ನಡೆದಿತ್ತು. ಮೇ 9ರಂದು ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಕುರಿತು ಪಿಟಿಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿರುವ ಪೆರ್​ನೆಮ್ ಪೊಲೀಸ್ ಠಾಣೆಯ ಇನ್​ಸ್ಪೆಕ್ಟರ್ ವಿಕ್ರಮ್ ನಾಯಕ್, ‘ರೆಸಾರ್ಟ್​ನ ಈಜುಕೊಳದಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ನಂತರ ಹೊಟೆಲ್ ರೂಮ್​ನಲ್ಲಿಯೂ ಕೊಠಡಿ ಸಹಾಯಕನಿಂದ ಅತ್ಯಾಚಾರ ನಡೆದಿದೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದರು. ಘಟನೆ ನಡೆದಾಗ ಮಗಳನ್ನು ಈಜುಕೊಳದ ಬಳಿ ಬಿಟ್ಟು ತಾಯಿ ಕೆಲ ಅತ್ಯಗತ್ಯ ವಸ್ತುಗಳನ್ನು ಖರೀದಿಸಲು ಸಮೀಪದ ಅರಂಬೊಲ್ ಪೇಟೆಗೆ ಹೋಗಿದ್ದರು’ ಎಂದು ಹೇಳಿದರು.

ಘಟನೆಯ ನಂತರ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದ. ಆದರೆ ದೂರು ಸ್ವೀಕರಿಸಿದ 24 ಗಂಟೆಗಳ ಒಳಗೆ ನಾವು ಆರೋಪಿಯನ್ನು ಗದಗದಲ್ಲಿ ಪತ್ತೆ ಮಾಡಿ ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (Indian Penal Code – IPC) 376ನೇ ವಿಧಿ (ಅತ್ಯಾಚಾರ), ಗೋವಾ ಮಕ್ಕಳ ಕಾಯ್ದೆಯ 8ನೇ ವಿಧಿ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (Protection of Children from Sexual Offences – POCSO) ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ಅತ್ಯಾಚಾರಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ

ತೀರ್ಥಹಳ್ಳಿ (Thirthahalli) ತಾಲೂಕಿನ ಆರಗ ಸಮೀಪ ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇ 9 ರ ರಾತ್ರಿ ಆರಗ ಬಳಿ ನಾಲ್ವರು ದುಷ್ಕರ್ಮಿಗಳು ದಲಿತ ಮಹಿಳೆ ಮತ್ತು ಆಕೆಯ ಗಂಡನ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳೀಯರು ಬರುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಸದ್ಯ ಹಲ್ಲೆಗೊಳಗಾದ ಮಹಿಳೆ ಮತ್ತು ಆಕೆಯ ಪತಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ನೀಡಲಾಗುತ್ತಿದೆ.

ತೀರ್ಥಹಳ್ಳಿ ಸಿಪಿಐ ಸಂತೋಷ್ ನೇತೃತ್ವದ ತಂಡ ಇಬ್ಬರು ಆರೋಪಿಗಳನ್ನ ಬಂಧಿಸಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಆದರ್ಶ ಮತ್ತು ಸಂಪತ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಬ್ಬರು ಆರೋಪಿಗಳು ಘಟನೆ ಬಳಿಕ ತಲೆಮರೆಸಿಕೊಂಡಿದ್ದರು. ಮತ್ತಿಬ್ಬರು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.

Published On - 12:40 pm, Thu, 12 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್