AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ರಷ್ಯಾ ಬಾಲಕಿಯ ಮೇಲೆ ಅತ್ಯಾಚಾರ: ಗದಗದಲ್ಲಿ ಆರೋಪಿ ಬಂಧನ

ಮೇ 6ರಂದು ಅತ್ಯಾಚಾರ ನಡೆದಿತ್ತು. ಮೇ 9ರಂದು ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು.

ಗೋವಾದಲ್ಲಿ ರಷ್ಯಾ ಬಾಲಕಿಯ ಮೇಲೆ ಅತ್ಯಾಚಾರ: ಗದಗದಲ್ಲಿ ಆರೋಪಿ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 12, 2022 | 12:40 PM

Share

ಪಣಜಿ: ರಷ್ಯಾದಿಂದ ಪ್ರವಾಸಕ್ಕೆ ಬಂದಿದ್ದ (Russian Tourist) 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅತ್ಯಾಚಾರ ಎಸಗಿದ ಆರೋಪಿಯನ್ನು ಕರ್ನಾಟಕದ ಗದಗದಲ್ಲಿ ಗೋವಾ ಪೊಲೀಸರು (Goa Police) ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಗೋವಾದ ಅರಂಬೊಲ್ ರೆಸಾರ್ಟ್​ನಲ್ಲಿ ಆರೋಪಿಯು ಕೊಠಡಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ರವಿ ಲಮಾಣಿ ಎಂದು ಗುರುತಿಸಲಾಗಿದೆ. ಪೆರ್​ನೆಮ್ ಪೊಲೀಸರು ಮೇ 10ರಂದು ಗದಗದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಮೇ 6ರಂದು ಅತ್ಯಾಚಾರ ನಡೆದಿತ್ತು. ಮೇ 9ರಂದು ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಕುರಿತು ಪಿಟಿಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿರುವ ಪೆರ್​ನೆಮ್ ಪೊಲೀಸ್ ಠಾಣೆಯ ಇನ್​ಸ್ಪೆಕ್ಟರ್ ವಿಕ್ರಮ್ ನಾಯಕ್, ‘ರೆಸಾರ್ಟ್​ನ ಈಜುಕೊಳದಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ನಂತರ ಹೊಟೆಲ್ ರೂಮ್​ನಲ್ಲಿಯೂ ಕೊಠಡಿ ಸಹಾಯಕನಿಂದ ಅತ್ಯಾಚಾರ ನಡೆದಿದೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದರು. ಘಟನೆ ನಡೆದಾಗ ಮಗಳನ್ನು ಈಜುಕೊಳದ ಬಳಿ ಬಿಟ್ಟು ತಾಯಿ ಕೆಲ ಅತ್ಯಗತ್ಯ ವಸ್ತುಗಳನ್ನು ಖರೀದಿಸಲು ಸಮೀಪದ ಅರಂಬೊಲ್ ಪೇಟೆಗೆ ಹೋಗಿದ್ದರು’ ಎಂದು ಹೇಳಿದರು.

ಘಟನೆಯ ನಂತರ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದ. ಆದರೆ ದೂರು ಸ್ವೀಕರಿಸಿದ 24 ಗಂಟೆಗಳ ಒಳಗೆ ನಾವು ಆರೋಪಿಯನ್ನು ಗದಗದಲ್ಲಿ ಪತ್ತೆ ಮಾಡಿ ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (Indian Penal Code – IPC) 376ನೇ ವಿಧಿ (ಅತ್ಯಾಚಾರ), ಗೋವಾ ಮಕ್ಕಳ ಕಾಯ್ದೆಯ 8ನೇ ವಿಧಿ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (Protection of Children from Sexual Offences – POCSO) ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ಅತ್ಯಾಚಾರಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ

ತೀರ್ಥಹಳ್ಳಿ (Thirthahalli) ತಾಲೂಕಿನ ಆರಗ ಸಮೀಪ ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇ 9 ರ ರಾತ್ರಿ ಆರಗ ಬಳಿ ನಾಲ್ವರು ದುಷ್ಕರ್ಮಿಗಳು ದಲಿತ ಮಹಿಳೆ ಮತ್ತು ಆಕೆಯ ಗಂಡನ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳೀಯರು ಬರುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಸದ್ಯ ಹಲ್ಲೆಗೊಳಗಾದ ಮಹಿಳೆ ಮತ್ತು ಆಕೆಯ ಪತಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ನೀಡಲಾಗುತ್ತಿದೆ.

ತೀರ್ಥಹಳ್ಳಿ ಸಿಪಿಐ ಸಂತೋಷ್ ನೇತೃತ್ವದ ತಂಡ ಇಬ್ಬರು ಆರೋಪಿಗಳನ್ನ ಬಂಧಿಸಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಆದರ್ಶ ಮತ್ತು ಸಂಪತ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಬ್ಬರು ಆರೋಪಿಗಳು ಘಟನೆ ಬಳಿಕ ತಲೆಮರೆಸಿಕೊಂಡಿದ್ದರು. ಮತ್ತಿಬ್ಬರು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.

Published On - 12:40 pm, Thu, 12 May 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ