AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಜಾಗೊಂಡಿದ್ದ ಕೆಎಸ್ಆರ್​ಟಿಸಿ ಸಿಬ್ಬಂದಿ 4 ವಾರದೊಳಗೆ ಮರುನೇಮಕಕ್ಕೆ ನಿರ್ಧಾರ; ಸಚಿವ ಬಿ ಶ್ರೀರಾಮುಲು

ಮುಂದುವರಿದು ಮಾತನಾಡಿದ ಅವರು, ಸಿಎಂ ಬದಲಾವಣೆ, ಸಂಪುಟ ಪುನಾರಚನೆಯ ಪ್ರಸ್ತಾಪವಿಲ್ಲ. ಎಲ್ಲ ಮಂತ್ರಿಗಳು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಬದಲಾವಣೆ ಬಗ್ಗೆ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ.

ವಜಾಗೊಂಡಿದ್ದ ಕೆಎಸ್ಆರ್​ಟಿಸಿ ಸಿಬ್ಬಂದಿ 4 ವಾರದೊಳಗೆ ಮರುನೇಮಕಕ್ಕೆ ನಿರ್ಧಾರ; ಸಚಿವ ಬಿ ಶ್ರೀರಾಮುಲು
ಕೆಎಸ್​ಆರ್​ಟಿಸಿ ಬಸ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Dec 21, 2021 | 12:54 PM

Share

ಗದಗ: ವಜಾಗೊಂಡಿದ್ದ ಕೆಎಸ್ಆರ್​ಟಿಸಿ (KSRTC) ಸಿಬ್ಬಂದಿಯನ್ನು 4 ವಾರದೊಳಗೆ ಮರುನೇಮಕ ಮಾಡಲು ನಿರ್ಧರಿಸಲಾಗಿದೆ ಅಂತ ಗದಗ ನಗರದಲ್ಲಿ ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ. ಮುಷ್ಕರ ವೇಳೆ ಕೆಲವರು ಕೆಲಸಕ್ಕೆ ಗೈರಾಗಿದ್ದರು. ಅಂತವರನ್ನ ಕೆಲಸದಿಂದ ವಜಾ ಮಾಡಲಾಗಿತ್ತು. ವಜಾ ಆಗಿದ್ದವರನ್ನ ಇಲ್ಲಿಯವರೆಗೆ ಕೆಲಸಕ್ಕೆ ನೇಮಕಗೊಳಿಸಲು ಸಾಧ್ಯ ಆಗಿರಲಿಲ್ಲ. ನಾಲ್ಕು ವಿಭಾಗದ ಎಂಡಿಗಳಿಗೆ ಈಗಾಗಲೇ ಸೂಚನೆ ಕೊಟ್ಟಿದ್ದೇನೆ. ಲೋಕಾದಾಲತ್ ಮೂಲಕ ಕಾನೂನು ತೊಡಕು ನಿವಾರಿಸಿ ಸಮಸ್ಯೆ ಇತ್ಯರ್ಥ ಮಾಡಲಾಗುತ್ತದೆ ಅಂತ ಶ್ರೀರಾಮುಲು ತಿಳಿಸಿದ್ದಾರೆ.

ಮುಂದುವರಿದು ಮಾತನಾಡಿದ ಅವರು, ಸಿಎಂ ಬದಲಾವಣೆ, ಸಂಪುಟ ಪುನಾರಚನೆಯ ಪ್ರಸ್ತಾಪವಿಲ್ಲ. ಎಲ್ಲ ಮಂತ್ರಿಗಳು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಬದಲಾವಣೆ ಬಗ್ಗೆ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ. ನಾನು ಡಿಸಿಎಂ ಆಗುವ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಅಂತ ಹೇಳಿದರು.

ಆಸೆ, ಆಮಿಷ, ಒತ್ತಡದ ಮೂಲಕ ಮತಾಂತರ ಆಗಬಾರದು. ಈ ರೀತಿ ಮತಾಂತರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮದುವೆ, ಶಿಕ್ಷಣ, ಹಣ, ಉಡುಗೊರೆ ಮೂಲಕ ಮತಾಂತರ ಮಾಡಿಸಿದರೆ ಅದು ಕಾನೂನು ಬಾಹಿರ. ಎಸ್‌ಸಿ, ಎಸ್‌ಟಿ ಸಮುದಾಯದ ಹಿತ ರಕ್ಷಣೆಗೆ ಸರ್ಕಾರ ಬದ್ಧ ಅಂತ ಬಿ ಶ್ರೀರಾಮುಲು ಅಭಿಪ್ರಾಯಪಟ್ಟರು.

ಇನ್ನು ಇದೇ ವೇಳೆ ಎಮ್ಇಎಸ್ ಪುಂಡರ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ಎಂಇಎಸ್ ಅಂದ್ರೆ ಮಹಾ ಎಡವಟ್ಟು ಸಂಘ. ಪುಂಡಾಟಿಕೆ, ಹೇಡಿ ಕೃತ್ಯ, ನಾಟಕಕ್ಕೆ ಸರ್ಕಾರದಿಂದ ಪ್ರತ್ಯುತ್ತರ ಸಿಗುತ್ತದೆ. ಎಮ್​ಇಎಸ್ ನಿಷೇಧದ ಕುರಿತು ಸಿಎಂ ಪರಾಮರ್ಶೆ ಮಾಡುತ್ತಿದ್ದಾರೆ. ಇನ್ಮುಂದೆ ರಾಜ್ಯದಲ್ಲಿ ಎಂಇಎಸ್ ಆಟಗಳು ನಡೆಯೋದಿಲ್ಲ ಅಂತ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ

ಮುಂದುವರಿದ ಎಮ್ಇಎಸ್ ಪುಂಡರ ಪುಂಡಾಟಿಕೆ! ಬಸ್​ಗೆ ಎಮ್ಇಎಸ್ ಧ್ವಜ ಕಟ್ಟಿ, ಮಸಿ ಬಳಿದ ಪುಂಡರು; ವಿಡಿಯೋ ವೈರಲ್

MapmyIndia: 1033 ರೂಪಾಯಿಗೆ ವಿತರಿಸಿದ್ದ ಮ್ಯಾಪ್​​ಮೈಇಂಡಿಯಾ ಷೇರು ರೂ. 1565ಕ್ಕೆ ಬಂಪರ್ ಲಿಸ್ಟಿಂಗ್

Published On - 12:50 pm, Tue, 21 December 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?