AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಜಾಗೊಂಡಿದ್ದ ಕೆಎಸ್ಆರ್​ಟಿಸಿ ಸಿಬ್ಬಂದಿ 4 ವಾರದೊಳಗೆ ಮರುನೇಮಕಕ್ಕೆ ನಿರ್ಧಾರ; ಸಚಿವ ಬಿ ಶ್ರೀರಾಮುಲು

ಮುಂದುವರಿದು ಮಾತನಾಡಿದ ಅವರು, ಸಿಎಂ ಬದಲಾವಣೆ, ಸಂಪುಟ ಪುನಾರಚನೆಯ ಪ್ರಸ್ತಾಪವಿಲ್ಲ. ಎಲ್ಲ ಮಂತ್ರಿಗಳು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಬದಲಾವಣೆ ಬಗ್ಗೆ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ.

ವಜಾಗೊಂಡಿದ್ದ ಕೆಎಸ್ಆರ್​ಟಿಸಿ ಸಿಬ್ಬಂದಿ 4 ವಾರದೊಳಗೆ ಮರುನೇಮಕಕ್ಕೆ ನಿರ್ಧಾರ; ಸಚಿವ ಬಿ ಶ್ರೀರಾಮುಲು
ಕೆಎಸ್​ಆರ್​ಟಿಸಿ ಬಸ್ (ಸಾಂದರ್ಭಿಕ ಚಿತ್ರ)
TV9 Web
| Updated By: sandhya thejappa|

Updated on:Dec 21, 2021 | 12:54 PM

Share

ಗದಗ: ವಜಾಗೊಂಡಿದ್ದ ಕೆಎಸ್ಆರ್​ಟಿಸಿ (KSRTC) ಸಿಬ್ಬಂದಿಯನ್ನು 4 ವಾರದೊಳಗೆ ಮರುನೇಮಕ ಮಾಡಲು ನಿರ್ಧರಿಸಲಾಗಿದೆ ಅಂತ ಗದಗ ನಗರದಲ್ಲಿ ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ. ಮುಷ್ಕರ ವೇಳೆ ಕೆಲವರು ಕೆಲಸಕ್ಕೆ ಗೈರಾಗಿದ್ದರು. ಅಂತವರನ್ನ ಕೆಲಸದಿಂದ ವಜಾ ಮಾಡಲಾಗಿತ್ತು. ವಜಾ ಆಗಿದ್ದವರನ್ನ ಇಲ್ಲಿಯವರೆಗೆ ಕೆಲಸಕ್ಕೆ ನೇಮಕಗೊಳಿಸಲು ಸಾಧ್ಯ ಆಗಿರಲಿಲ್ಲ. ನಾಲ್ಕು ವಿಭಾಗದ ಎಂಡಿಗಳಿಗೆ ಈಗಾಗಲೇ ಸೂಚನೆ ಕೊಟ್ಟಿದ್ದೇನೆ. ಲೋಕಾದಾಲತ್ ಮೂಲಕ ಕಾನೂನು ತೊಡಕು ನಿವಾರಿಸಿ ಸಮಸ್ಯೆ ಇತ್ಯರ್ಥ ಮಾಡಲಾಗುತ್ತದೆ ಅಂತ ಶ್ರೀರಾಮುಲು ತಿಳಿಸಿದ್ದಾರೆ.

ಮುಂದುವರಿದು ಮಾತನಾಡಿದ ಅವರು, ಸಿಎಂ ಬದಲಾವಣೆ, ಸಂಪುಟ ಪುನಾರಚನೆಯ ಪ್ರಸ್ತಾಪವಿಲ್ಲ. ಎಲ್ಲ ಮಂತ್ರಿಗಳು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಬದಲಾವಣೆ ಬಗ್ಗೆ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ. ನಾನು ಡಿಸಿಎಂ ಆಗುವ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಅಂತ ಹೇಳಿದರು.

ಆಸೆ, ಆಮಿಷ, ಒತ್ತಡದ ಮೂಲಕ ಮತಾಂತರ ಆಗಬಾರದು. ಈ ರೀತಿ ಮತಾಂತರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮದುವೆ, ಶಿಕ್ಷಣ, ಹಣ, ಉಡುಗೊರೆ ಮೂಲಕ ಮತಾಂತರ ಮಾಡಿಸಿದರೆ ಅದು ಕಾನೂನು ಬಾಹಿರ. ಎಸ್‌ಸಿ, ಎಸ್‌ಟಿ ಸಮುದಾಯದ ಹಿತ ರಕ್ಷಣೆಗೆ ಸರ್ಕಾರ ಬದ್ಧ ಅಂತ ಬಿ ಶ್ರೀರಾಮುಲು ಅಭಿಪ್ರಾಯಪಟ್ಟರು.

ಇನ್ನು ಇದೇ ವೇಳೆ ಎಮ್ಇಎಸ್ ಪುಂಡರ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ಎಂಇಎಸ್ ಅಂದ್ರೆ ಮಹಾ ಎಡವಟ್ಟು ಸಂಘ. ಪುಂಡಾಟಿಕೆ, ಹೇಡಿ ಕೃತ್ಯ, ನಾಟಕಕ್ಕೆ ಸರ್ಕಾರದಿಂದ ಪ್ರತ್ಯುತ್ತರ ಸಿಗುತ್ತದೆ. ಎಮ್​ಇಎಸ್ ನಿಷೇಧದ ಕುರಿತು ಸಿಎಂ ಪರಾಮರ್ಶೆ ಮಾಡುತ್ತಿದ್ದಾರೆ. ಇನ್ಮುಂದೆ ರಾಜ್ಯದಲ್ಲಿ ಎಂಇಎಸ್ ಆಟಗಳು ನಡೆಯೋದಿಲ್ಲ ಅಂತ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ

ಮುಂದುವರಿದ ಎಮ್ಇಎಸ್ ಪುಂಡರ ಪುಂಡಾಟಿಕೆ! ಬಸ್​ಗೆ ಎಮ್ಇಎಸ್ ಧ್ವಜ ಕಟ್ಟಿ, ಮಸಿ ಬಳಿದ ಪುಂಡರು; ವಿಡಿಯೋ ವೈರಲ್

MapmyIndia: 1033 ರೂಪಾಯಿಗೆ ವಿತರಿಸಿದ್ದ ಮ್ಯಾಪ್​​ಮೈಇಂಡಿಯಾ ಷೇರು ರೂ. 1565ಕ್ಕೆ ಬಂಪರ್ ಲಿಸ್ಟಿಂಗ್

Published On - 12:50 pm, Tue, 21 December 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ