AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಹಟ್ಟಿಯಲ್ಲಿ ಮಹಿಳೆಯರ ಜೊತೆಗೆ ಕುಳಿತು ಹೆದರದೆ-ಹೆದರಿಸದೆ ಪಂಕ್ತಿ ಭೋಜನ ಮಾಡಿದ ಮಂಗಣ್ಣ!

ಶಿರಹಟ್ಟಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಂಗನಿಗೆ ಊಟ ನೀಡಿ ಮಾನವೀಯತೆಯನ್ನು ಮೆರೆದರು. ಮಹಿಳೆಯರು ತಟ್ಟೆಯಲ್ಲಿ ಆಹಾರವನ್ನು ಹಾಕಿದ್ರು, ಅವರ ಜೊತೆಗೆ ಕುಳಿತು, ಹೆದರದೆ/ ಹೆಸರಿಸದೆ ಪಂಕ್ತಿ ಭೋಜನ ಮಾಡಿದ್ದಾನೆ ಮಂಗಣ್ಣ.

ಶಿರಹಟ್ಟಿಯಲ್ಲಿ ಮಹಿಳೆಯರ ಜೊತೆಗೆ ಕುಳಿತು ಹೆದರದೆ-ಹೆದರಿಸದೆ ಪಂಕ್ತಿ ಭೋಜನ ಮಾಡಿದ ಮಂಗಣ್ಣ!
ಗದಗ: ಮಹಿಳೆಯರ ಜೊತೆಗೆ ಕುಳಿತು ಊಟ ಮಾಡಿದ ಮಂಗ
ಸಾಧು ಶ್ರೀನಾಥ್​
|

Updated on: Mar 20, 2023 | 5:43 PM

Share

ಗದಗ: ಮಹಿಳೆಯರ ಜೊತೆಗೆ ಕುಳಿತು ಊಟ ಮಾಡಿದ ಮಂಗ – ಈ ತಲೆಬರಹ ನಾನಾ ಅರ್ಥಗಳು, ಒಳಾರ್ಥಗಳು, ಗೂಡಾರ್ಥಗಳು ನೀಡುತ್ತಿದೆ. ಆದರೆ ಅದು ಅವರವರ ಭಾವಕ್ಕೆ, ಅನುಭವಕ್ಕೆ ಬಿಟ್ಟ ಸಂಗತಿಯಾಗಿದೆ. ಹೌದು ಗದಗ ಜಿಲ್ಲೆ ಶಿರಹಟ್ಟಿ (Shirahatti) ಪಟ್ಟಣದಲ್ಲಿ ಈ ಅಪರೂಪದ ಘಟನೆ ನಡೆದಿದೆ. ಶಿರಹಟ್ಟಿ ಪಟ್ಟಣದ ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ ಕಚೇರಿ ಆವರಣದಲ್ಲಿ ಇಂದು ಸೋಮವಾರ ಈ ದೃಶ್ಯಾವಳಿ ಕಂಡುಬಂದಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರು (Anganavadi Karyakarte) ಮೀಟಿಂಗ್ ಅಂಗವಾಗಿ ಆಗಮಿಸಿದ್ದರು. ಸಹಜವಾಗಿಯೆ, ಊಟದ ಸಮಯವಾಗಿದ್ದರಿಂದ (Eating) ಮೂರ್ನಾಲ್ಕು ಅಂಗನವಾಡಿ ಕಾರ್ಯಕರ್ತೆಯರು ಮರದ ಕೆಳಗೆ ಊಟಕ್ಕೆ ಕುಳಿತಿದ್ದಾರೆ. ಆ ವೇಳೆ, ಮರದ ಮೇಲಿದ್ದ ಮಂಗವೊಂದು (Monkey) ಕೆಳಗಿಳಿದು ಅನಿರೀಕ್ಷಿತವಾಗಿ ಎಂಟ್ರಿ ಕೊಟ್ಟಿದೆ.

Also Read:

Buntings: ರಾಜಕೀಯ ಪಕ್ಷದ ಬಂಟಿಂಗ್ಸ್​​​ಗೆ ಸಿಲುಕಿ ಅಮಾಯಕ ಕೋತಿಯ ದುರ್ಮರಣ

ಆ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆ ಭಾಗಿರತಿ ಸಾತಪುತೆ ಅವರು ಮಂಗನಿಗೆ ತುತ್ತು ಮಾಡಿ ಊಟ ಮಾಡಿಸಿದರು. ನಾಗಲಕ್ಷ್ಮಿ ಕುಲಕರ್ಣಿ, ಲಕ್ಷ್ಮಿ ನವಲೆ, ರೂಪಾ ಕಟ್ಟಿಮನಿ ಹಾಗೂ ಭಾಗಿರತಿ ನಾಲ್ಕೂ ಜನ ಊಟ ಮಾಡುವಾಗ ಈ ಘಟನೆ ನಡೆದಿದೆ.

ಕಾರ್ಯಕರ್ತೆಯರು ಮಂಗನಿಗೆ ಊಟ ನೀಡಿ ಮಾನವೀಯತೆಯನ್ನು ಮೆರೆದರು. ಮಹಿಳೆಯರು ತಟ್ಟೆಯಲ್ಲಿ ಆಹಾರವನ್ನು ಹಾಕಿದ್ರು, ಅವರ ಜೊತೆಗೆ ಕುಳಿತು, ಹೆದರದೆ/ ಹೆಸರಿಸದೆ ಪಂಕ್ತಿ ಭೋಜನ ಮಾಡಿದ್ದಾನೆ ಮಂಗಣ್ಣ. ಅಪರೂಪದ ಈ ದೃಶ್ಯಗಳು ಸ್ಥಳೀಯರ‌ ಮೊಬೈಲ್ ನಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್