AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರ್ ಹರಿದ ಹೈವೋಲ್ಟೇಜ್ ವಿದ್ಯುತ್​ಗೆ 20 ಕ್ಕೂ ಹೆಚ್ಚು ಟಿವಿ, ಇನ್ನಿತರ ವಸ್ತುಗಳು ಬ್ಲಾಸ್ಟ್ 

ನಿನ್ನೆ(ಸೆ.30) ರಾತ್ರಿ ಮನೆಯಲ್ಲಿ ಟಿವಿ ನೋಡುತ್ತಿರುವಾಗ ಇದ್ದಕ್ಕಿದ್ದಂತೆ ಹೈವೋಲ್ಟೇಜ್ ವಿದ್ಯುತ್ ಬಂದಿದ್ದು, ಇದರಿಂದ ಟಿವಿಗಳು ಸೇರಿದಂತೆ ಇನ್ನಿತರ ವಸ್ತುಗಳು ಬ್ಲಾಸ್ಟ್ ಆದ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದ ಕಸಬಾ ಓಣಿಯಲ್ಲಿ ನಡೆದಿದೆ.

ದಿಢೀರ್ ಹರಿದ ಹೈವೋಲ್ಟೇಜ್ ವಿದ್ಯುತ್​ಗೆ 20 ಕ್ಕೂ ಹೆಚ್ಚು ಟಿವಿ, ಇನ್ನಿತರ ವಸ್ತುಗಳು ಬ್ಲಾಸ್ಟ್ 
ಹೈವೋಲ್ಟೇಜ್ ವಿದ್ಯುತ್​ಗೆ 20 ಕ್ಕೂ ಹೆಚ್ಚು ಟಿವಿ ಬ್ಲಾಸ್ಟ್​
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Oct 01, 2023 | 3:58 PM

Share

ಗದಗ, ಅ.01: ದಿಢೀರ್ ಹೈವೋಲ್ಟೇಜ್ ವಿದ್ಯುತ್(High-Voltage Power) ಹರಿದ ಪರಿಣಾಮ 20 ಕ್ಕೂ ಹೆಚ್ಚು ಟಿವಿಗಳು, ಹಾಗೂ ಹಲವಾರು ಗೃಹೋಪಯೋಗಿ ವಸ್ತುಗಳು ಹಾಳಾಗಿರುವ ಘಟನೆ ಗದಗ(Gadag) ಜಿಲ್ಲೆಯ ನರಗುಂದ ಪಟ್ಟಣದ ಕಸಬಾ ಓಣಿಯಲ್ಲಿ ನಡೆದಿದೆ. ನಿನ್ನೆ(ಸೆ.30) ರಾತ್ರಿ ಮನೆಯಲ್ಲಿ ಟಿವಿ ನೋಡುತ್ತಿರುವಾಗ ಇದ್ದಕ್ಕಿದ್ದಂತೆ ಹೈವೋಲ್ಟೇಜ್ ವಿದ್ಯುತ್ ಬಂದಿದೆ. ಇದರಿಂದ ಟಿವಿಗಳು ಸೇರಿದಂತೆ ಇನ್ನಿತರ ವಸ್ತುಗಳು ಬ್ಲಾಸ್ಟ್ ಆಗಿವೆ. ಇನ್ನು ಟಿವಿ ಬ್ಲಾಸ್ಟ್ ಆಗುತ್ತಿದ್ದಂತೆ ಮನೆ ಮಂದಿಯೆಲ್ಲಾ ಭಯಭೀತರಾಗಿ ಹೊರಗಡೆ ಓಡಿ ಬಂದಿದ್ದಾರೆ. ಮನೆಯಲ್ಲಿ ಕತ್ತಲು ಆವರಿಸಿ ಹೊಗೆಯಿಂದ ತುಂಬಿದ್ದು, ಹೀಗೆ ಹಲವಾರು ಮನೆಗಳಲ್ಲಿ ಈ ರೀತಿ ಅವಘಡ ಸಂಭವಿಸಿದೆ.

ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ

ಇನ್ನು ಈ ಘಟನೆಯಿಂದ ಆಕ್ರೋಶಗೊಂಡ ಮನೆ ಮಾಲೀಕರು, ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ‌ ಅವಘಡಕ್ಕೆ ಹೆಸ್ಕಾಂ ಅವರೇ ನೇರ ಹೊಣೆಯಾಗಿದ್ದು, ತಕ್ಷಣ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ, ಹಾಳಾಗಿರುವ ಗೃಹೋಪಯೋಗಿ ವಸ್ತುಗಳ ರಿಪೇರಿಗಾಗಿ ಪರಿಹಾರ ಒದಗಿಸಬೇಕು.‌ಇಲ್ಲದೇ ಇದ್ದರೆ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದ ಘಟನೆ ನಡೆದಿದ್ದು, ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪರಿಶೀಲಿಸಿ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಕುಸಿದ ವಿದ್ಯುತ್‌ ಉತ್ಪಾದನೆ; ಇಂಧನ ಇಲಾಖೆಯ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ವಿದ್ಯುತ್ ತಂತಿ ತಗುಲಿ ರೈತ ದಂಪತಿಗಳಿಬ್ಬರ ಸಾವು

ಬೀದರ್: ಇನ್ನು ಬೀದರ್​ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಲ್ಲಿಕಾರ್ಜುನ (61) ಹಾಗೂ ಶರಣಮ್ಮ (50) ಸಾವಿಗೀಡಾದ ದಂಪತಿಗಳು. ಇವರು ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಕೈಗೆ ತಗಲುವ ಹಾಗೆ  ವಿದ್ಯುತ್ ತಂತಿ ಜೋತುಬಿದ್ದಿದ್ದೆ. ಇದನ್ನು ಗಮನಿಸಿದೆ ವಿದ್ಯುತ್ ತಂತಿ ತಗುಲಿ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್