AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜತೆ ಓಡಿ ಹೋಗಿ ಮದುವೆಯಾದ ಮಗಳು; ಮರ್ಯಾದೆಗೆ ಅಂಜಿ ಪ್ರಾಣ ಬಿಟ್ಟ ಅಂಗನವಾಡಿ ಶಿಕ್ಷಕಿ

ಗದಗದಲ್ಲಿ ಅಂಗನವಾಡಿ ಶಿಕ್ಷಕಿಯಾಗಿದ್ದ ಸುನೀತಾ ಅವರು ತಮ್ಮ ಮಗಳು ಕೊಟ್ಟ ಆಘಾತವನ್ನು ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಿಯಕರನ ಜತೆ ಓಡಿ ಹೋಗಿ ಮದುವೆಯಾದ ಮಗಳು; ಮರ್ಯಾದೆಗೆ ಅಂಜಿ ಪ್ರಾಣ ಬಿಟ್ಟ ಅಂಗನವಾಡಿ ಶಿಕ್ಷಕಿ
ಸುನೀತಾ ಕೋ ವೀರಣ್ಣ ನಾಯಕವಾಡಿ ಮೃತ ತಾಯಿ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Jul 06, 2023 | 11:12 AM

Share

ಗದಗ: ಪ್ರೀತಿ, ಸಲುಗೆಯಿಂದ ಬೆಳೆದಿದ್ದ ಮಗಳು ಅದೇ ಗ್ರಾಮದ ಯುವಕನೊಬ್ಬನನ್ನು ಪ್ರೀತಿಸಿ(Love) ಮದುವೆಯಾಗಿ ಊರು ಬಿಟ್ಟು ಓಡಿ ಹೋಗಿದ್ದಳು. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ನೊಂದಿದ್ದ ತಾಯಿ ನೇಣು(Hanging) ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಬುಧವಾರ ಗದಗದಲ್ಲಿ ಜರುಗಿದೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮದ ಹದ್ಲಿ ರಸ್ತೆಯ ಬರೋಡ ಬ್ಯಾಂಕ್ ಬಳಿಯ ನಿವಾಸಿ, ಅಂಗನವಾಡಿ ಶಿಕ್ಷಕಿಯಾಗಿದ್ದ ಸುನೀತಾ ಕೋ ವೀರಣ್ಣ ನಾಯಕವಾಡಿ (48) ಎಂಬ ಮಹಿಳೆ, ಮಗಳು ಕೊಟ್ಟ ಆಘಾತವನ್ನು ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ಮಗಳು ಅದೇ ಏರಿಯಾದ ಯುವಕನೊಬ್ಬನನ್ನು ಪ್ರೀತಿಸಿ ಮದುವೆಯಾಗಿ ಊರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದಳು. ಮಗಳು ಪ್ರೀತಿಸಿ ಮದುವೆಯಾಗಿ ಊರು ಬಿಟ್ಟು ಹೋಗಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ತಾಯಿ ಸುನೀತಾ ತನ್ನ ಸಹೋದರಿಯ ಮನೆ ಮುಂದಿರುವ (ಸ್ಟೇರ್ ಕೇಸ್) ಮಳಿಗೆ ಹತ್ತುವು ಮೆಟ್ಟಿಲುಗಳ ಪೈಪ್ ಗೆ ಸೀರೆ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ನರಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ವಿದ್ಯಾರ್ಥಿಗಳನ್ನೇ ಟಾರ್ಗೆಟ್​ ಮಾಡಿ ಗಾಂಜಾ ಮಾರಾಟ; ಅರೋಪಿಯನ್ನ ಬಂಧಿಸಿದ ಪೊಲೀಸರು, 5 ಕೆಜಿಗೂ ಅಧಿಕ ಗಾಂಜಾ ಜಪ್ತಿ

ಕಾರಿನ ಗ್ಲಾಸ್ ಹೊಡೆದು ಕಳ್ಳತನ

ಕಾರಿನ ಗ್ಲಾಸ್ ಹೊಡೆದು ಲಕ್ಷಾಂತರ ರೂಪಾಯಿ ಮೌಲ್ಯದ ನಗದು, ಚಿನ್ನಾಭರಣ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳನ್ನು ದೋಚಿರುವ ಘಟನೆ ಚಂದಾಪುರದಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಹೊನ್ನಕಳಸಾಪುರ ಮೂಲದ ನವೀನ್ ಎಂಬುವವರು ನಿನ್ನೆ ಸಂಜೆ ಊಟ ಮಾಡಲು ಚಂದಾಪುರದ ಎಟುಬಿ ಹೋಟೆಲ್ ಗೆ ಬಂದಿದ್ದರು. ಪಾರ್ಕಿಂಗ್ ನಲ್ಲಿ ಕಾರು ನಿಲ್ಲಿಸಿದ್ದ ವೇಳೆ, ದುಷ್ಕರ್ಮಿಗಳು ಕಾರಿನ ಗಾಜು ಹೊಡೆದು ಆ್ಯಪಲ್ ಟ್ಯಾಬ್, ಚಿನ್ನದ ಓಲೆ, ಮತ್ತು ನಗದು ದೋಚಿ ಪರಾರಿಯಾಗಿದ್ದಾರೆ. ಹೋಟೆಲ್ ನಲ್ಲಿ ಊಟ ಮುಗಿಸಿ ಹೊರಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಹೆಬ್ಬಗೋಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:06 am, Thu, 6 July 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್