AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯ ಕಾಯಿಲೆಗೆ ಬೇಸತ್ತು ತಾನೂ ವಿಷ ಸೇವಿಸಿ ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿದ ತಾಯಿ

ಕೊಣ್ಣೂರು ಗ್ರಾಮದ ಯಲ್ಲವ್ವ ಚಂದಣ್ಣವರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಈ ಕಾಯಿಲೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಮಕ್ಕಳಾದ ಸಮರ್ಥ್ ಮತ್ತು ಸ್ವಪ್ನಾಳಿಗೂ ವಿಷ ಕುಡಿಸಿದ್ದಾರೆ.

ಹೃದಯ ಕಾಯಿಲೆಗೆ ಬೇಸತ್ತು ತಾನೂ ವಿಷ ಸೇವಿಸಿ ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿದ ತಾಯಿ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Oct 06, 2021 | 7:38 AM

Share

ಗದಗ: ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 2 ವರ್ಷದ ಸ್ವಪ್ನಾ ಮೃತಪಟ್ಟಿದ್ದಾಳೆ. ಯಲ್ಲವ್ವ ಚಂದಣ್ಣವರ(27), ಸ್ವಪ್ನಾ(2) ಮೃತಪಟ್ಟಿದ್ದು ಸಮರ್ಥ್(6)ಗೆ ಚಿಕಿತ್ಸೆ ಮುಂದುವರೆದಿದೆ. ಕೊಣ್ಣೂರು ಗ್ರಾಮದಲ್ಲಿ ಸೋಮವಾರ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೊಣ್ಣೂರು ಗ್ರಾಮದ ಯಲ್ಲವ್ವ ಚಂದಣ್ಣವರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಈ ಕಾಯಿಲೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಮಕ್ಕಳಾದ ಸಮರ್ಥ್ ಮತ್ತು ಸ್ವಪ್ನಾಳಿಗೂ ವಿಷ ಕುಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಓಡೋಡಿ ಬಂದ ಸ್ಥಳೀಯರು ತಾಯಿ ಮತ್ತು ಮಕ್ಕಳನ್ನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಇನ್ನು ಸೋಮವಾರ ತಡರಾತ್ರಿ ಚಿಕಿತ್ಸೆ ಫಲಿಸದೆ ಯಲ್ಲವ್ವ ಮೃತಪಟ್ಟಿದ್ದು ನಿನ್ನೆ ಚಿಕಿತ್ಸೆ ಫಲಿಸದೆ 2 ವರ್ಷದ ಸ್ವಪ್ನಾ ಕೂಡ ತಾಯಿಯನ್ನೇ ಹಿಂಬಾಳಿಸಿದ್ದಾಳೆ. ಸದ್ಯ 6 ವರ್ಷದ ಸಮರ್ಥ್‌ಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಬಗ್ಗೆ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಜಾನುವಾರಗಳ ಮೇಲೆ ದುಷ್ಟರ ಅಟ್ಟಹಾಸ; ಪೆಟ್ರೋಲ್ ಸುರಿದು ಎಮ್ಮೆಗಳಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

‘ನನ್ನ ಸ್ಥಿತಿಗೆ ನೀವೇ ಕಾರಣ’; ತಮಿಳು ನಟ ಅಜಿತ್ ಮನೆ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು