AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಮಾವೇಶದಲ್ಲಿ ಕೂಲ್‌ಡ್ರಿಂಕ್ಸ್‌, ನೀರು ಕೊಂಡೊಯ್ದ ಜನ: ವ್ಯಾಪಾರಿಯ ನಷ್ಟ ಭರಿಸಿ ಮಾನವೀಯತೆ ಮೆರೆದ ಪ್ರತಾಪ್ ಸಿಂಹ

ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಅವರ ಸಮಾವೇಶದ ವೇಳೆ ತಂಪು ಪಾನೀಯದ ವಾಹನದ ಮೇಲೆ ಮುಗಿಬಿದ್ದು, ಕೂಲ್​ ಡ್ರಿಂಕ್ಸ್​ ಕುಡಿದ ಹಿನ್ನೆಲೆಯಲ್ಲಿ ನಷ್ಟ ಅನುಭವಿಸಿದ್ದ ಸಮೀರ್​ ಹಸನ್​ ಸಾಬ್​ ಅವರಿಗೆ ಸಂಸದ ಪ್ರತಾಪ್ ಸಿಂಹ ಅವರು ಹಣ ಪಾವತಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಬಿಜೆಪಿ ಸಮಾವೇಶದಲ್ಲಿ ಕೂಲ್‌ಡ್ರಿಂಕ್ಸ್‌, ನೀರು ಕೊಂಡೊಯ್ದ ಜನ: ವ್ಯಾಪಾರಿಯ ನಷ್ಟ ಭರಿಸಿ ಮಾನವೀಯತೆ ಮೆರೆದ ಪ್ರತಾಪ್ ಸಿಂಹ
ರಮೇಶ್ ಬಿ. ಜವಳಗೇರಾ
|

Updated on:May 01, 2023 | 8:03 AM

Share

ಬೆಂಗಳೂರು: ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ಅಮಿತ್ ಶಾ(Amit Shah) ಸಮಾವೇಶದ ವೇಳೆ ಜನರ ಗುಂಪು ತಂಪು ಪಾನೀಯ (Cool Drinks) ವಾಹನದ ಮೇಲೆ ಮುಗಿಬಿದ್ದು, ಕೂಲ್ ಡ್ರಿಂಕ್ಸ್ ಕುಡಿದಿದ್ದರು. ಇದರಿಂದ ಸಮೀರ್ ಹಸನ್ ಸಾಬ್​ಗೆ ನಷ್ಟವಾಗಿ ಕಣ್ಣೀರಿಟ್ಟಿದ್ದರು. ಈ ಸುದ್ದಿ ತಿಳಿದು ಸಂಸದ ಪ್ರತಾಪ್ ಸಿಂಹ (Pratap Simha), ನಷ್ಟ ಅನುಭವಿಸಿದ್ದ ವ್ಯಾಪಾರಿ ಸಮೀರ್​ಗೆ ಹಣ ಸಂದಾಯ ಮಾಡಿದ್ದಾರೆ. ಹಣ ಸಂದಾಯ ಮಾಡಿರುವ ಬಗ್ಗೆ ಟ್ವೀಟ್‌ನಲ್ಲಿ ಸ್ಪಷ್ಟನೆ ನೀಡಿದ್ದು, Sorry Brother ಎಂದು ಟ್ವೀಟ್‌ ಮಾಡಿದ್ದಾರೆ. ಇದರೊಂದಿಗೆ ಬಡ ವ್ಯಾಪಾರಿಗೆ ಹಣ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇನ್ನು ಇವರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.

ಇದನ್ನೂ ಓದಿ: ಗದಗ: ಚುನಾವಣಾ ಪ್ರಚಾರದಲ್ಲಿ ಕೂಲ್ ಡ್ರಿಂಕ್ಸ್ ಮಾರಾಟಕ್ಕೆ ಬಂದ ವ್ಯಾಪಾರಿಗೆ ಭಾರೀ ನಷ್ಟ; ಕಾರಣ ಏನು ಗೊತ್ತಾ?

ಲಕ್ಷ್ಮೇಶ್ವರದಲ್ಲಿ ಅಮಿತ್ ಶಾ ಸಮಾವೇಶಕ್ಕೆ ಬದಿದ್ದ ಜನರಿಗೆ ಕಾರ್ಯಕ್ರಮದ ಆಯೋಜಕರು ನೀರಿನ ವ್ಯವಸ್ಥೆ ಮಾಡಿರಲಿಲ್ಲ. ಇದರಿಂದ ಬಿಸಿಲಿನ ಬೇಗೆಗೆ ಜನ ಬೇಸತ್ತು ಹೋಗಿದ್ದರು. ಜನರಿಗೆ ತುಂಬ ಬಾಯಾರಿಕೆ ಆಗಿದ್ದುಮ ನೀರಿಗಾಗಿ ಪರದಾಡುತ್ತಿದ್ದರು. ಅದೇ ಸಂದರ್ಭದಲ್ಲಿ ಸಮೀರ್ ಹಸನ್​ ಸಾವ್ ಎನ್ನುವಾತ ಕೂಲ್ ಡ್ರಿಂಕ್ಸ್​ ಇರುವ ವಾಹನ ಸಮಾವೇಶದ ಬಳಿ ವ್ಯಾಪಾರಕ್ಕೆ ಬಂದಿದ್ದ. ಬಿಜೆಪಿಯವರೇ ಕೂಲ್​ ಡ್ರಿಂಕ್ಸ್ ತರಿಸಿದ್ದಾರೆ ಎಂದು ಜನ ಸಮೀರ್​ ವಾಹನಕ್ಕೆ ಮುಗಿಬಿದ್ದು, ಕೂಲ್​ ಡ್ರಿಂಕ್ಸ್, ಜ್ಯೂಸ್, ನೀರಿನ ಬಾಟಲ್​ ತಗೆದುಕೊಂಡು ಹೋಗಿದ್ದರು. ಇದರಿಂದ ಸುಮಾರ್ 35 ಸಾವಿರ ರೂಪಾಯಿ ನಷ್ಟವಾಯ್ತು ಎಂದು ಸಮೀರ್​ ಕಣ್ಣೀರಿಟ್ಟಿದ್ದ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ವೈರಲ್ ಆಗಿತ್ತು.

ಇದೀಗ ಮೈಸೂರು ಸಂಸದ ಪ್ರತಾಪ್ ಸಿಂಹ, ವ್ಯಾಪಾರಿ ಸಮೀರ್​ ಅಕೌಂಟ್​ಗೆ 35 ಸಾವಿರ ರೂಪಾಯಿ ಟ್ರಾನ್ಸ್​ಫರ್ ಮಾಡಿದ್ದಾರೆ. ಈ ಮೂಲಕ ಪ್ರತಾಪ್ ಸಿಂಹ್ ಮಾನವೀಯತೆ ಮರೆದಿದ್ದಾರೆ. ಇನ್ನು ಸಂಸದರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Published On - 7:58 am, Mon, 1 May 23

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?