AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿಲ್ಲ: ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘ ಸ್ಪಷ್ಟನೆ

ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿಲ್ಲ. ಗದಗ ಜಿಲ್ಲೆಯಲ್ಲಿರುವ 39 ಕ್ರಷರ್​ಗಳು ಅನಧಿಕೃತ ಇಲ್ಲ. ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆದರೇ ನಾವೇ ಕ್ರಮ ಕೈಗೊಳ್ಳುತ್ತೇವೆ ಎಂದು ಗದಗ ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘ ಸ್ಪಷ್ಟನೆ ನೀಡಿದೆ.

ಗದಗ ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿಲ್ಲ: ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘ ಸ್ಪಷ್ಟನೆ
ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘದ ಅಧ್ಯಕ್ಷ ರಾಮಣ್ಣ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jul 15, 2023 | 7:42 PM

Share

ಗದಗ: ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ (Stone mining) ನಡೆಯುತ್ತಿಲ್ಲ. ಗದಗ (Gadag) ಜಿಲ್ಲೆಯಲ್ಲಿರುವ 39 ಕ್ರಷರ್​ಗಳು ಅನಧಿಕೃತ ಇಲ್ಲ. ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆದರೇ ನಾವೇ ಕ್ರಮ ಕೈಗೊಳ್ಳುತ್ತೇವೆ ಎಂದು ಗದಗ ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘ ಸ್ಪಷ್ಟನೆ ನೀಡಿದೆ. ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘದ ಅಧ್ಯಕ್ಷ ರಾಮಣ್ಣ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಗಣಿಗಾರಿಕೆ ನಡೆಯುತ್ತಿರುವ ಸ್ಥಳದಲ್ಲಿ ಜಮೀನುಗಳಿಗೆ ಸಮಸ್ಯೆ ಆಗುತ್ತಿದೆ. ಕೆಲವು ರೈತರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಬಡವರ ಪಾಲಾಗಬೇಕಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳರ ಪಾಲು, ಗದಗದಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ ವಶಕ್ಕೆ

100 ಮೀಟರ್ ವ್ಯಾಪ್ತಿಯ ಜಮೀನಿಗಳಿಗೆ 10 ಸಾವಿರ ರೂ. ನಿಗದಿ ಮಾಡಲಾಗಿದೆ. 200 ಮೀಟರ್ ವ್ಯಾಪ್ತಿಯ ಜಮೀನಿಗೆ 5 ಸಾವಿರ ರೂ. ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ ಎಕರೆಗೆ 30, 50 ಸಾವಿರ ರೂ. ಹಾಗೂ ಒಂದು ಲಕ್ಷ ಹಣ ನೀಡಿದ್ದೇವೆ ಎಂದು ತಿಳಿಸಿದರು.

ಏನಿದು ಕಲ್ಲು ಗಣಿಗಾರಿಕೆ ಪ್ರಕರಣ

ಗದಗ ತಾಲೂಕಿ ಶಿತಾಲಹರಿ, ಮುಳಗುಂದ ಗ್ರಾಮಗಳ ಸುತ್ತಮುತ್ತ ನಡೆಯುವ ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್ ಘಟಗಳಿಂದ ದಬ್ಬಾಳಿಕೆ ಹಾಗೂ ಬೆಳಗಳಿಗೆ ಹಾನಿಯಾಗುತ್ತಿದೆ ಎಂದು ರೈತರು ಆರೋಪಿಸಿದ್ದರು. ರೈತರು ಗಣಿ ಮಾಲೀಕರ ದಬ್ಬಾಳಿಕೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಬಳಿಕ ಗಣಿ ಇಲಾಖೆ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ನಿಮ್ಮ ಗಣಿ ಇಲಾಖೆ ನಿಯಮಗಳೇನು. ಬ್ಲಾಸ್ಟಿಂಗ್ ನಿಯಮ ಏನೂ ಹೀಗಾಗಿ ಪ್ರಶ್ನೆ ಮೇಲೆ ಪ್ರಶ್ನೆ ಹಾಕಿ ತರಾಟೆಗೆ ತೆಗೆದುಕೊಂಡಿದ್ದರು.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಾಗಡಿ, ಪರಸಾಪೂರ, ಕೊಂಚಿಗೇರಿ, ಚಿಕ್ಕಸವಣೂರ ಹಾಗೂ ಗದಗ ತಾಲೂಕಿನ ಮಿಳಗುಂದ, ಶೀತಾಲಹರಿ ಸೇರಿದಂತೆ ಹಲವು ಗ್ರಾಮಗಳ ವ್ಯಾಪ್ತಿಯ ಕಲ್ಲು ಗಣಿಗಾರಿಕೆಯಲ್ಲಿ ಬ್ಲಾಸ್ಟಿಂಗ್ ಮಾಡಲಾಗುತ್ತಿದೆ. ಇದರಿಂದ ಶೇಂಗಾ, ಚೆಂಡೂ ಹೂವು, ಸೂರ್ಯಕಾಂತಿ, ಮೆಣಸಿನಕಾಯಿ, ಗೋವಿನಜೋಳ ಸೇರಿ ಹಲವು ಬೆಳೆಗಳಿಗೆ ಕಂಟಕವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ