AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ವಿಜ್ಞಾನ ಪ್ರಯೋಗಾಲಯ ಇಲ್ಲದೆ ಮೊರಾರ್ಜಿ ವಸತಿ ಪಿಯುಸಿ ವಿದ್ಯಾರ್ಥಿಗಳ ಗೋಳಾಟ

ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಅಂದ್ರೆ ಹೈಟೆಕ್ ಆಗಿರುತ್ತೆ. ಎಲ್ಲ ಸೌಕರ್ಯ ಇರುತ್ತೆ. ಅಲ್ಲಿ ನಾವು ಓದಿ ಡಾಕ್ಟರ್, ಇಂಜಿನೀಯರ್ ಆಗಬೇಕು ಅಂತ ಕನಸು ಕಟ್ಟಿಕೊಂಡು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರು. ಆದರೆ, ಯಾಕಪ್ಪಾ ಈ ಕಾಲೇಜಿಗೆ ದಾಖಲಾಗಿದ್ದೇವೆ ಅಂತ ಪಶ್ಚಾತಾಪ ಪಡುವಂತಾಗಿದೆ. ಎರಡು ವರ್ಷವಾದರೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಯೋಗಾಲಯದ ಭಾಗ್ಯ ಸಿಕ್ಕಿಲ್ಲ.

ಗದಗ: ವಿಜ್ಞಾನ ಪ್ರಯೋಗಾಲಯ ಇಲ್ಲದೆ ಮೊರಾರ್ಜಿ ವಸತಿ ಪಿಯುಸಿ ವಿದ್ಯಾರ್ಥಿಗಳ ಗೋಳಾಟ
ಮೊರಾರ್ಜಿ ದೇಸಾಯಿ ವಸತಿ ಕಾಲೇಜು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Jul 26, 2025 | 8:06 PM

Share

ಗದಗ, ಜುಲೈ 26: ಬೆಟಗೇರಿಯಲ್ಲಿರುವ (Betageri) ಅಲ್ಪಸಂಖ್ಯಾತ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಹತ್ತಾರು ಕನಸು ಹೊತ್ತು ನೂರಾರು ವಿದ್ಯಾರ್ಥಿಗಳು (Students) ಪ್ರವೇಶ ಪಡೆದಿದ್ದಾರೆ. ಆದರೆ, ಈಗ ಯಾಕಪ್ಪಾ ಈ ಕಾಲೇಜಿಗೆ ಪ್ರವೇಶ ಪಡೆದಿದ್ದೇವೆ ಅಂತ ಪಶ್ಚಾತಾಪ ಪಡುತ್ತಿದ್ದಾರೆ. ಹೌದು, ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯವಿಲ್ಲ. ಇದರಿಂದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಈ ವರ್ಷ ಬೋರ್ಡ್ ಪರೀಕ್ಷೆ ಇದೆ. ಪ್ರಾಕ್ಟಿಕಲ್​ಪರೀಕ್ಷೆ ಬರೆಯಬೇಕು. ಪ್ರಾಕ್ಟಿಕಲ್​  ಪಾಠ ಇಲ್ಲದೆ, ನಾವು ಪರೀಕ್ಷೆ ಬರೆಯುವುದು ಹೇಗೆ ಅಂತ ವಿದ್ಯಾರ್ಥಿಗಳು ಪ್ರಶ್ನೆ ಮಾಡಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಬೇಕು ಅಂತ ಒತ್ತಾಯಿಸಿದ್ದಾರೆ.

ಪ್ರಾಚಾರ್ಯರು ಅಪರೂಪಕ್ಕೊಮ್ಮೆ ಕಾಲೇಜಿಗೆ ಬರುತ್ತಾರಂತೆ. ಹೀಗಾಗಿ, ವಿದ್ಯಾರ್ಥಿಗಳು ಗೋಳು ಕೇಳುವರು ಯಾರೂ ಇಲ್ಲದಂತಾಗಿದೆ. ಅವ್ಯವಸ್ಥೆ ಆಗರದಲ್ಲಿ ಬಡ ವಿದ್ಯಾರ್ಥಿಗಳ ಪಾಠ ಕಲಿಯುವಂತಾಗಿದೆ. ಡಾಕ್ಟರ್, ಇಂಜಿನಿಯರ್ ಕನಸು ಹೊತ್ತುಕೊಂಡು ಬಂದ ವಿದ್ಯಾರ್ಥಿಗಳಿಗೆ ಶಾಕ್ ನೀಡಿದಂತಾಗಿದೆ. ಕಾಲೇಜು ಆರಂಭವಾದ ತಿಂಗಳು ಕಳೆದ ಬಳಿಕ ಪುಸ್ತಕಗಳನ್ನು ವಿತರಿಸಲಾಗಿದೆ. ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಪ್ರಾಕ್ಟಿಕಲ್​ ಪಾಠ ಆರಂಭವಾಗಿಲ್ಲ. ಪ್ರಯೋಗಾಲಯಗಳು ಧೂಳು ತಿನ್ನುತ್ತಿವೆ ಅಂತ ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಎಲೆ ಜತೆಗೆ ಅಡಿಕೆ ತಿಂದು ಉಗಿಯುವವರು ಈ ಸುದ್ದಿ ಓದಲೇಬೇಕು..!

ಈ ವರ್ಷ ಬೋರ್ಡ್ ಪರೀಕ್ಷೆ ಬರುತ್ತದೆ. ಪರೀಕ್ಷೆಯಲ್ಲಿ ನಾವು ಏನು ಬರೆಯಬೇಕು? ಪ್ರಾಚಾರ್ಯರನ್ನು ಕೇಳಿದರೆ ಶೀಘ್ರದಲ್ಲೇ ಆರಂಭಿಸುತ್ತೇವೆ ಅಂತ ದಿನಗಳನ್ನು ಮುಂದೂಡುತ್ತಿದ್ದಾರೆ. ಆದರೆ, ಎರಡು ವರ್ಷ ಕಳೆದರೂ ಇನ್ನೂ ಪ್ರಯೋಗಾಲಯ ಆರಂಭವಾಗಿಲ್ಲ. ಕೊಠಡಿಗಳು ಸರಿಯಾಗಿ ಇಲ್ಲ ಎಂದು ಅಳಲು ತೋಡಿಕೊಂಡರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Sat, 26 July 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ