AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ವಿಜ್ಞಾನ ಪ್ರಯೋಗಾಲಯ ಇಲ್ಲದೆ ಮೊರಾರ್ಜಿ ವಸತಿ ಪಿಯುಸಿ ವಿದ್ಯಾರ್ಥಿಗಳ ಗೋಳಾಟ

ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಅಂದ್ರೆ ಹೈಟೆಕ್ ಆಗಿರುತ್ತೆ. ಎಲ್ಲ ಸೌಕರ್ಯ ಇರುತ್ತೆ. ಅಲ್ಲಿ ನಾವು ಓದಿ ಡಾಕ್ಟರ್, ಇಂಜಿನೀಯರ್ ಆಗಬೇಕು ಅಂತ ಕನಸು ಕಟ್ಟಿಕೊಂಡು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರು. ಆದರೆ, ಯಾಕಪ್ಪಾ ಈ ಕಾಲೇಜಿಗೆ ದಾಖಲಾಗಿದ್ದೇವೆ ಅಂತ ಪಶ್ಚಾತಾಪ ಪಡುವಂತಾಗಿದೆ. ಎರಡು ವರ್ಷವಾದರೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಯೋಗಾಲಯದ ಭಾಗ್ಯ ಸಿಕ್ಕಿಲ್ಲ.

ಗದಗ: ವಿಜ್ಞಾನ ಪ್ರಯೋಗಾಲಯ ಇಲ್ಲದೆ ಮೊರಾರ್ಜಿ ವಸತಿ ಪಿಯುಸಿ ವಿದ್ಯಾರ್ಥಿಗಳ ಗೋಳಾಟ
ಮೊರಾರ್ಜಿ ದೇಸಾಯಿ ವಸತಿ ಕಾಲೇಜು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Jul 26, 2025 | 8:06 PM

Share

ಗದಗ, ಜುಲೈ 26: ಬೆಟಗೇರಿಯಲ್ಲಿರುವ (Betageri) ಅಲ್ಪಸಂಖ್ಯಾತ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಹತ್ತಾರು ಕನಸು ಹೊತ್ತು ನೂರಾರು ವಿದ್ಯಾರ್ಥಿಗಳು (Students) ಪ್ರವೇಶ ಪಡೆದಿದ್ದಾರೆ. ಆದರೆ, ಈಗ ಯಾಕಪ್ಪಾ ಈ ಕಾಲೇಜಿಗೆ ಪ್ರವೇಶ ಪಡೆದಿದ್ದೇವೆ ಅಂತ ಪಶ್ಚಾತಾಪ ಪಡುತ್ತಿದ್ದಾರೆ. ಹೌದು, ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯವಿಲ್ಲ. ಇದರಿಂದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಈ ವರ್ಷ ಬೋರ್ಡ್ ಪರೀಕ್ಷೆ ಇದೆ. ಪ್ರಾಕ್ಟಿಕಲ್​ಪರೀಕ್ಷೆ ಬರೆಯಬೇಕು. ಪ್ರಾಕ್ಟಿಕಲ್​  ಪಾಠ ಇಲ್ಲದೆ, ನಾವು ಪರೀಕ್ಷೆ ಬರೆಯುವುದು ಹೇಗೆ ಅಂತ ವಿದ್ಯಾರ್ಥಿಗಳು ಪ್ರಶ್ನೆ ಮಾಡಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಬೇಕು ಅಂತ ಒತ್ತಾಯಿಸಿದ್ದಾರೆ.

ಪ್ರಾಚಾರ್ಯರು ಅಪರೂಪಕ್ಕೊಮ್ಮೆ ಕಾಲೇಜಿಗೆ ಬರುತ್ತಾರಂತೆ. ಹೀಗಾಗಿ, ವಿದ್ಯಾರ್ಥಿಗಳು ಗೋಳು ಕೇಳುವರು ಯಾರೂ ಇಲ್ಲದಂತಾಗಿದೆ. ಅವ್ಯವಸ್ಥೆ ಆಗರದಲ್ಲಿ ಬಡ ವಿದ್ಯಾರ್ಥಿಗಳ ಪಾಠ ಕಲಿಯುವಂತಾಗಿದೆ. ಡಾಕ್ಟರ್, ಇಂಜಿನಿಯರ್ ಕನಸು ಹೊತ್ತುಕೊಂಡು ಬಂದ ವಿದ್ಯಾರ್ಥಿಗಳಿಗೆ ಶಾಕ್ ನೀಡಿದಂತಾಗಿದೆ. ಕಾಲೇಜು ಆರಂಭವಾದ ತಿಂಗಳು ಕಳೆದ ಬಳಿಕ ಪುಸ್ತಕಗಳನ್ನು ವಿತರಿಸಲಾಗಿದೆ. ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಪ್ರಾಕ್ಟಿಕಲ್​ ಪಾಠ ಆರಂಭವಾಗಿಲ್ಲ. ಪ್ರಯೋಗಾಲಯಗಳು ಧೂಳು ತಿನ್ನುತ್ತಿವೆ ಅಂತ ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಎಲೆ ಜತೆಗೆ ಅಡಿಕೆ ತಿಂದು ಉಗಿಯುವವರು ಈ ಸುದ್ದಿ ಓದಲೇಬೇಕು..!

ಈ ವರ್ಷ ಬೋರ್ಡ್ ಪರೀಕ್ಷೆ ಬರುತ್ತದೆ. ಪರೀಕ್ಷೆಯಲ್ಲಿ ನಾವು ಏನು ಬರೆಯಬೇಕು? ಪ್ರಾಚಾರ್ಯರನ್ನು ಕೇಳಿದರೆ ಶೀಘ್ರದಲ್ಲೇ ಆರಂಭಿಸುತ್ತೇವೆ ಅಂತ ದಿನಗಳನ್ನು ಮುಂದೂಡುತ್ತಿದ್ದಾರೆ. ಆದರೆ, ಎರಡು ವರ್ಷ ಕಳೆದರೂ ಇನ್ನೂ ಪ್ರಯೋಗಾಲಯ ಆರಂಭವಾಗಿಲ್ಲ. ಕೊಠಡಿಗಳು ಸರಿಯಾಗಿ ಇಲ್ಲ ಎಂದು ಅಳಲು ತೋಡಿಕೊಂಡರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Sat, 26 July 25

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ