AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ನಾಶಕ್ಕಾಗಿ ಹೋರಾಡಿದ ಬಸವಣ್ಣನ ಅನುಯಾಯಿಗಳು ನಾವು, ಲಿಂಗಾಯತರಿಗೆ ಮೀಸಲಾತಿ ಸಾಧ್ಯವಿಲ್ಲ: ಎಸ್​ಎಂ ಜಾಮದಾರ

ಬಸವಣ್ಣ ಹೋರಾಡಿದ್ದು ಜಾತಿ ನಾಶಕ್ಕಾಗಿ. ಆದರೆ, ನಾವು ಜಾತಿಗಾಗಿ ಮತ್ತು ಮೀಸಲಾತಿಗಾಗಿ ಹೋರಾಡುತ್ತಿದ್ದೇವೆ. ಇನ್ನು 100 ವರ್ಷ ಹೋದರೂ ಲಿಂಗಾಯತರಿಗೆ ಮೀಸಲಾತಿ ಸಿಗುವುದಕ್ಕೆ ಸಾಧ್ಯವಿಲ್ಲ ಎಂದು ನಿವೃತ್ತ ಐಎಎಸ್ ಅಧಿಕಾರಿ ಎಸ್​​.ಎಂ. ಜಾಮದಾರ ಹೇಳಿದ್ದಾರೆ. 6 ವರ್ಷಗಳ ಹಿಂದೆ ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟ ಮಾಡಿದವರೇ, ಈಗ ಮೀಸಲಾತಿ ಬಗ್ಗೆ ಈ ರೀತಿಯಾಗಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಜಾತಿ ನಾಶಕ್ಕಾಗಿ ಹೋರಾಡಿದ ಬಸವಣ್ಣನ ಅನುಯಾಯಿಗಳು ನಾವು, ಲಿಂಗಾಯತರಿಗೆ ಮೀಸಲಾತಿ ಸಾಧ್ಯವಿಲ್ಲ: ಎಸ್​ಎಂ ಜಾಮದಾರ
ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಂ. ಜಾಮದಾರ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Oct 25, 2023 | 7:20 PM

Share

ಗದಗ, ಅಕ್ಟೋಬರ್​​​​​​ 25: ಬಸವಣ್ಣ ಹೋರಾಡಿದ್ದು ಜಾತಿ ನಾಶಕ್ಕಾಗಿ. ಆದರೆ, ನಾವು ಜಾತಿಗಾಗಿ ಮತ್ತು ಮೀಸಲಾತಿಗಾಗಿ ಹೋರಾಡುತ್ತಿದ್ದೇವೆ. ಇನ್ನು 100 ವರ್ಷ ಹೋದರೂ ಲಿಂಗಾಯತರಿಗೆ ಮೀಸಲಾತಿ ಸಿಗುವುದಕ್ಕೆ ಸಾಧ್ಯವಿಲ್ಲ ಎಂದು ನಿವೃತ್ತ ಐಎಎಸ್ ಅಧಿಕಾರಿ ಎಸ್​​.ಎಮ್. ಜಾಮದಾರ (SM Jamadar) ಹೇಳಿದ್ದಾರೆ. ಆರು ವರ್ಷಗಳ ಹಿಂದೆ ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಎಸ್​​.ಎಂ. ಜಾಮದಾರ ಮತ್ತು ಎಂಬಿ ಪಾಟೀಲ್​​ ಮುಂಚೂಣಿಯಲ್ಲಿ ಹೋರಾಟ ಮಾಡಿದ್ದರು. ಆದರೆ ಈಗ ಅವರೇ ಮೀಸಲಾತಿ ಬಗ್ಗೆ ಈ ರೀತಿಯಾಗಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಗದಗ ನಗರದ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ನಿಜವಾಗಿಯೂ ಬಸವತತ್ವ ಅನುಸರಿಸುವ ಲಿಂಗಾಯತರನ್ನ ಹುಡುಕಬೇಕಿದೆ. ಜಾತಿ ಹೆಸರಿನಲ್ಲಿ ಬೀದಿ ಬೀದಿಗಳಲ್ಲಿ ಹಾರಾಟ, ಹೋರಾಟ ನಡೆಸುತ್ತಿದ್ದಾರೆ. ಲಿಂಗಾಯತರು ಅತ್ಯಂತ ಕೆಟ್ಟ ಜಾತಿಗಳಾಗಿ ಪರಿವರ್ತನೆಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ; ಅಧಿಕೃತ ಪ್ರತಿ ಪರಿಶೀಲಿಸಿ ನಿರ್ಧಾರ ಎಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಕೆಲವು ಸಂಘಟನೆಗಳು ಬಸವ ತತ್ವಕ್ಕೆ ವಿರುದ್ಧವಾದುದು. ಲಿಂಗಾಯತ 100 ಒಳಪಂಗಡ ಜಾತಿಗಳಿಗೆ ಮೀಸಲಾತಿ ಕೊಡಿಸುವುದಕ್ಕೆ ಹೋರಾಡುತ್ತಿದ್ದಾರೆ. ಯಾಕೆ ಸಾಧ್ಯವಿಲ್ಲ ಅಂದರೆ 104 ವರ್ಷಗಳ ಇತಿಹಾಸವಿದೆ. 1919ರಲ್ಲಿ ಮಿಲ್ಲರ್​ ಕಮಿಷನ್​, ಹಾವನೂರು ಆಯೋಗ, 1958 ನಾಗನಗೌಡ ಕಮಿಷನ್​  ವೆಂಕಟಸ್ವಾಮಿ ಆಯೋಗ ಸೇರಿದಂತೆ ಇಲ್ಲಿವರೆಗಿನ 6 ಆಯೋಗಗಳ ವರದಿ ಸಲ್ಲಿಸಲಾಗಿದೆ. ಆದರೆ ಮೀಸಲಾತಿ ಕೊಡುವ ಬಗ್ಗೆ ವರದಿ ಇಲ್ಲ ಎಂದು ಹೇಳಿದ್ದಾರೆ.

ರಾಜಕೀಯ ಶಕ್ತಿಗಳು ಸಮಾಜವನ್ನು ಹಾಳು ಮಾಡುತ್ತಿದೆ

ರಾಜಕೀಯ ಶಕ್ತಿಗಳು ಸಮಾಜವನ್ನು ಹಾಳು ಮಾಡುತ್ತಿವೆ. ಪ್ರತ್ಯೇಕ ಜಾತಿಗಳಿಗಾಗಿ ಮತ್ತು ರಾಜಕಾರಣಕ್ಕಾಗಿ ಮೀಸಲಾತಿ ಹೋರಾಟ ನಡೆದಿದೆ. ರಾಜಕೀಯ ಶಕ್ತಿಗಳು ಸಮಾಜವನ್ನು ಹಾಳು ಮಾಡುತ್ತಿದ್ದಾರೆ. ವರ್ಗವೇ ಬೇರೆ, ಜಾತಿಯೇ ಬೇರೆ, ಧರ್ಮವೇ ಬೇರೆ. ಇದೇ ಸತ್ಯ. ಲಿಂಗಾಯತರು ರಾಜಕೀಯವಾಗಿ ಒಗ್ಗೂಡುವ ಅಗತ್ಯತೆಗಿಂತ ಬದುಕಿನ ಆದರ್ಶಕ್ಕಾಗಿ ಒಂದಾಗಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ