AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನ ಮನೆಯಲ್ಲಿದ್ದ ಮಗಳನ್ನು ಅಪಹರಿಸಿದ ಪೋಷಕರು; ಎರಡೇ ದಿನದಲ್ಲಿ ದಂಪತಿಯನ್ನ ಒಂದು ಮಾಡಿದ ಪೊಲೀಸ್ರು

ಆತ ಆ ಹುಡುಗಿಯನ್ನ ಮದುವೆಯೊಂದರಲ್ಲಿ ನೋಡಿ, ಪರಿಚಯ ಮಾಡಿಕೊಂಡು ಪ್ರೀತ್ಸೆ ಪ್ರೀತ್ಸೆ ಅಂತಿದ್ದ. ಆಗ ಇಬ್ಬರ ನಡುವೆ ಪ್ರೀತಿಯೂ ಹುಟ್ಟಿದೆ. ಆದ್ರೆ, ‌ಹುಡುಗಿ ಮನೆಯವರ ವಿರೋಧ ವ್ಯಕ್ತಪಡಿಸಿದ್ದಾರೆ. ಅವರ ವಿರೋಧದ ನಡುವೆಯೂ ದೇವಸ್ಥಾನದಲ್ಲಿ ಮದುವೆಯಾದ ಈ ಜೋಡಿ ಹಕ್ಕಿಗಳು, ಹೊಸ ಜೀವನ ನಡೆಸಬೇಕೆಂದು ನೂರಾರು ಕನಸು ಕಂಡಿದ್ರು‌. ಅಷ್ಟರಲ್ಲಿ ಯುವತಿ ಮನೆಯವರು ಮನೆಗೆ ನುಗ್ಗಿ ಹುಡುಗಿಯನ್ನ ಕಿಡ್ನ್ಯಾಪ್​ ಮಾಡಿದ್ದರು. ಇದೀಗ ಮತ್ತೆ ನವಜೋಡಿಗಳು ಒಂದಾಗಿದೆ.

ಗಂಡನ ಮನೆಯಲ್ಲಿದ್ದ ಮಗಳನ್ನು ಅಪಹರಿಸಿದ ಪೋಷಕರು; ಎರಡೇ ದಿನದಲ್ಲಿ ದಂಪತಿಯನ್ನ ಒಂದು ಮಾಡಿದ ಪೊಲೀಸ್ರು
ಅಭಿಷೇಕ್, ಐಶ್ವರ್ಯ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Jul 16, 2023 | 11:29 AM

Share

ಗದಗ: ಮದುವೆಯಾಗಿ ಒಂದೇ ತಿಂಗಳಲ್ಲೇ ಜೋಡಿ ದೂರ ಆಗಿದ್ದರು, ಈ ಕುರಿತು ಆಕೆಯ ಗಂಡ ಠಾಣೆಗೆ ದೂರು ನೀಡಿದ್ದ. ಇದೀಗ ಗದಗ ಪೊಲೀಸರ ಕಾರ್ಯಾಚರಣೆಯಿಂದ ಜುಲೈ 14 ರಂದು ಹುಡಗಿಯನ್ನು ಮತ್ತೆ ಗಂಡನ ಮನೆಗೆ ಸೇರಿಸಿದ್ದಾರೆ. ನಿನ್ನೆ ಅದ್ಧೂರಿ ರಿಸೆಪ್ಷನ್ ಕೂಡ ನಡೆದಿದೆ. ಹೀಗೆ ನಗು ನಗುತಾ ಸಪ್ತಪದಿ ತುಳಿದಿರುವ ಈ ಜೋಡಿಯ ಹೆಸರು ಅಭಿಷೇಕ್ ಐಶ್ವರ್ಯ. ಗದಗ(Gadag) ನಗರದ ಡಿಸಿ ಮಿಲ್ ಪ್ರದೇಶದ ಯುವಕ ಅಭಿಷೇಕ್. ಹುಬ್ಬಳಿ ನಿವಾಸಿಯಾಗಿರುವ ಐಶ್ವರ್ಯಳನ್ನ ಕಳೆದ ಎರಡು ವರ್ಷಗಳ ಹಿಂದೆ ಮದುವೆಯೊಂದರಲ್ಲಿ ನೋಡಿ ಹುಡುಗಿ ಪರಿಚಯವಾಗಿದ್ದಳು. ಅಂದು ಆರಂಭವಾದ ಇವರ ಸ್ನೇಹ ಪ್ರೀತಿಗೆ ತಿರುಗಿತ್ತು. ಕುಟುಂಬಸ್ಥರನ್ನು ಒಪ್ಪಿಸಿ ಮದುವೆಯಾಗಬೇಕೆಂದು ನಿರ್ಧಾರ ಮಾಡಿ, ಕುಟುಂಬಸ್ಥರಿಗೆ ಪ್ರೀತಿಯ ವಿಷಯ ತಿಳಿಸಿದ್ರು. ಹುಡುಗನ ಮನೆಯವರು ಮದುವೆಗೆ ಒಪ್ಪಿಕೊಂಡಿದ್ರು. ಆದ್ರೆ, ಹುಡುಗಿ ಮನೆಯವರು ಮದುವೆ ನಿರಾಕರಣೆ ಮಾಡಿದ್ದರು.

ಹುಡುಗಿ ಮನೆಯವ್ರ ವಿರೋಧದ ನಡುವೆ ಮದುವೆಯಾಗಿದ್ರು

ದೇವಸ್ಥಾನದಲ್ಲಿ ಹುಡುಗಿ ಮನೆಯವರ ವಿರೋಧದ ನಡುವೆ ಮದುವೆಯಾಗಿ, 2023 ಜೂನ್ 23 ರಂದು ಗದಗನ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮದುವೆ ನೊಂದಣಿ ಮಾಡಿಸಿದ್ರು. ಆದಾದ ಮೇಲೆ ಹೊಸ ಜೀವನ ನಡೆಸಬೇಕೆಂದು ಹುಡುಗ ಹಾಗೂ ಹುಡುಗಿ ಗದಗನಲ್ಲಿ ವಾಸ ಮಾಡ್ತಾಯಿದ್ರು‌. ಆದ್ರೆ, ಜುಲೈ 12 ಡಿಸಿ ಮಿಲ್ ಪ್ರದೇಶದ ಹುಡಗನ ಮನೆಗೆ ನುಗ್ಗಿದ ಐಶ್ವರ್ಯ ಪೋಷಕರು ಸೇರಿದಂತೆ ಅವರ ಸಹಚರರು ಆಕೆಯನ್ನ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾರಂತೆ ಎಂದು ಪತಿ ಅಭಿಷೇಕ್ ಮಹಿಳಾ ಠಾಣೆಗೆ ದೂರು ನೀಡಿದ್ದ. ಅಂದು ಟಿವಿ9 ಕೂಡ ವರದಿ ಮಾಡಿತ್ತು. ಎಸ್ಪಿ ಬಿ ಎಸ್ ನೇಮಗೌಡ ಅವ್ರು ಕೂಡ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ರು. ಅಲರ್ಟ್ ಆದ ಮಹಿಳಾ ಪೊಲೀಸರು ಹುಬ್ಬಳ್ಳಿಗೆ ಹೋಗಿ ಹುಡುಗಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ವಶಕ್ಕೆ ಪಡೆದಿದ್ದಾರೆ. ಆದ್ರೆ, ಐಶ್ವರ್ಯ ಪೊಲೀಸ್ ವಿಚಾರಣೆಯಲ್ಲಿ ತಾಯಿಯ ಕರೆ ಹಿನ್ನಲೆಯಲ್ಲಿ ನಾನೆ ಹೋಗಿದ್ದೇನೆ. ನನ್ನ ಯಾರೂ ಕಿಡ್ನ್ಯಾಪ್ ಮಾಡಿಲ್ಲ ಅಂತ ಹೇಳಿಕೆ ಕೊಟ್ಟಿದ್ದಾಳೆಂದು ಎಸ್ಪಿ ಹೇಳಿದ್ದಾರೆ.

ಇದನ್ನೂ ಓದಿ:‘ಐ ಲವ್​ ಯೂ ಎಂದು ಹೇಳಬೇಡಿ, ಅದರ ಬದಲು…’; ಟಿಪ್ಸ್ ಕೊಟ್ಟ ಸಾನ್ಯಾ ಐಯ್ಯರ್

ಪರಸ್ಪರ ಪ್ರೀತಿ ಮಾಡಿದ್ದ ಜೋಡಿಗೆ ಯುವತಿ ಮನೆಯವ್ರು ವಿಲನ್ ಆಗಿದ್ರು. ಈಗ ಪೊಲೀಸರು ಹುಡಗಿಯನ್ನು ವಶಕ್ಕೆ ಪಡೆದುಕೊಂಡು ಗದಗ ಪತಿ ಅಭಿಷೇಕ್ ಗೆ ಒಪ್ಪಿಸಿದ್ದಾರೆ. ಹೀಗಾಗಿ ಕಿಡ್ನ್ಯಾಪ್ ಪ್ರಕರಣ ಸುಖಾಂತ್ಯ ಕಂಡಿದೆ. ಹೆಂಡತಿ ಮನೆಗೆ ಬಂದಿದ್ದೇ ತಡ ಇವತ್ತು ಅಭಿಷೇಕ ಮತ್ತು ಐಶ್ವರ್ಯಳ ಅದ್ದೂರಿಯಾಗಿ ಆರಕ್ಷತೆ ನಡೆದಿದೆ. ಹೆಂಡತಿ ಕಿಡ್ನ್ಯಾಪ್ ನಿಂದ ಕಂಗಾಲಾಗಿದ್ದ ಅಭಿಷೇಕ್​ ಮುಖದಲ್ಲಿ ಮಂದಹಾಸ ಮೂಡಿದೆ. ನಿನ್ನೆ ರಿಸೆಪ್ಷನ್​ ಮಾಡಿಕೊಳ್ಳುವ ಮೂಲಕ ಹಿರಿಯರ ಸಮ್ಮುಖದಲ್ಲಿ ತಮ್ಮ ಪ್ರೀತಿಗೆ ಅಧಿಕೃತ ಮುದ್ರೆ ಒತ್ತಿದ್ದಾರೆ. ಆದ್ರೆ, ಹುಡಗಿ ಮನೆಯವ್ರು ಮಾತ್ರ ಈ ಆರಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ನನಗೆ ಸೊಸೆ ಬೇಕು ಅಂತಿದ್ದ ಅತ್ತೆಯೂ ಫುಲ್ ಖಷಿಯಾಗಿದ್ದು, ಇವತ್ತು ನನ್ನ ಮಗ ಸೊಸೆ ಒಂದಾಗಿದ್ದಾರೆ. ಬಹಳ ಖುಷಯಾಗಿದೆಯೆಂದು ಅಭಿಷೇಕ ತಾಯಿ ಹೇಳಿದ್ದಾಳೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:02 am, Sun, 16 July 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್