AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್ಸ್ ಆಸ್ಪತ್ರೆಯ ಔಷಧಿಗಳಲ್ಲಿ ಧೂಳು; ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ

ನಿರ್ದೇಶಕರೇ ಸರಿಯಾಗಿ ಕಚೇರಿಗೆ ಬರಲ್ಲ ಅಂದರೆ. ಇನ್ನೂ ಸಿಬ್ಬಂದಿಗಳು, ಅಧಿಕಾರಿಗಳು, ವೈದ್ಯರು ನಿರ್ಲಕ್ಷ್ಯ ವಹಿಸುವುದಿಲ್ಲವ ಸರ್ಕಾರದ ಹಣ ಹಾಳಾದರೆ ನಮಗೇನೂ ಎಂದು ಅಪಾರ ಔಷಧಿಗಳು ಹಾಳಾದರೂ ಯಾರೂ ನೋಡುತ್ತಿಲ್ಲ. ಜಿಲ್ಲಾಡಳಿತ, ಸರ್ಕಾರದ ಭಯವೂ ಇಲ್ಲಿನ ಜಿಮ್ಸ್ ಆಡಳಿತಕ್ಕೆ ಇಲ್ಲದಂತಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಜಿಮ್ಸ್ ಆಸ್ಪತ್ರೆಯ ಔಷಧಿಗಳಲ್ಲಿ ಧೂಳು; ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ
ಧೂಳು ಹಿಡಿದ ಔಷಧಿಗಳು
TV9 Web
| Edited By: |

Updated on: Dec 14, 2021 | 3:25 PM

Share

ಗದಗ: ಜಿಲ್ಲೆಯ ಜಿಮ್ಸ್ ಆಡಳಿತಕ್ಕೆ ಹೇಳೋರು ಕೇಳೋರು ಯಾರೂ ಇಲ್ಲದಂತಾಗಿದೆ. ಒಂದಿಲ್ಲೊಂದು ಅದ್ವಾನ, ಯಡವಟ್ಟುಗಳ ಮೂಲಕ ಸರ್ಕಾರಕ್ಕೆ ಮುಜಗುರ ತರುವಂತ ಕೆಲಸ ಮಾಡುತ್ತಿದೆ. ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಈ ವಿಚಾರ ಬಹಿರಂಗವಾಗಿದೆ. 2ನೇ ಅಲೆಯಲ್ಲಿ ಅಗತ್ಯ ಇಂಜಕ್ಷನ್, ಔಷಧಿ ಇಲ್ಲದೆ ಎಷ್ಟೋ ಜನರು ಉಸಿರು ಚೆಲ್ಲಿದ್ದಾರೆ. ಹೀಗಿರುವಾಗಲೇ ಈಗ ಜಿಮ್ಸ್ ( Gims) ಆಸ್ಪತ್ರೆಯಿಂದ ಮತ್ತೊಂದು ಯಡುವಟ್ಟಾಗಿದೆ. ಕೊವಿಡ್ ವಾರ್ಡ್​ಗಳಲ್ಲಿ ಲಕ್ಷಾಂತರ ಮೌಲ್ಯದ ಔಷಧಿ ಧೂಳು ಹಿಡಿಯುತ್ತಿದ್ದರೂ ಜಿಮ್ಸ್ ಆಡಳಿತ ನಿರ್ಲಕ್ಷ್ಯ ವಹಿಸಿದೆ. ಇದು ಸಹಜವಾಗಿಯೇ ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಬಡವರಿಗಾಗಿ ಸರ್ಕಾರ ನೀಡಿದ ಅಮೂಲ್ಯ ಔಷಧಿಗಳು, ಇಂಜಕ್ಷನ್​ ಧೂಳು ತಿನ್ನುವಂತೆ ಆಗಿದೆ. ಕೊವಿಡ್ ವಾರ್ಡ್​ಗಳಲ್ಲಿ ಅಪಾರ ಪ್ರಮಾಣದ ಇಂಜಕ್ಷನ್, ಮಾತ್ರೆಗಳು , ಡ್ರಿಪ್​ಗಳು ಸೇರಿ ಹಲವು ಔಷಧಿಗಳು ಧೂಳು ಹಿಡಿದಿವೆ. ಆದರೆ ಜಿಲ್ಲಾಡಳಿತ ಮಾತ್ರ ಈ ಬಗ್ಗೆ ನಿರ್ಲಕ್ಷ್ಯ ತೋರಿದೆ. ಜಿಮ್ಸ್ ಆಡಳಿತದ ಬೇಜವಾಬ್ದಾರಿಯೇ ಅಪಾರ ಔಷಧಿಗಳು ಧೂಳು ತಿನ್ನುವುದಕ್ಕೆ ಕಾರಣ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಚಂದ್ರಕಾಂತ ಚವ್ಹಾಣ ಒತ್ತಾಯಿಸಿದ್ದಾರೆ.

ಆನೆ ನಡೆದಿದ್ದೇ ದಾರಿ ಅನ್ನೋ ರೀತಿಯಲ್ಲಿ ಗದಗ ಜಿಮ್ಸ್ ಆಡಳಿತ ವರ್ತನೆ ಮಾಡುತ್ತಿದೆ. ಸಾಕಷ್ಟು ಅವ್ಯವಸ್ಥೆ ಇದ್ದರು ಜಿಮ್ಸ್ ನಿರ್ದೇಶಕ ಡಾ. ಪಿ. ಎಸ್. ಭೂಸರೆಡ್ಡಿ ಮಾತ್ರ ಪ್ರತಿಕ್ರಿಯೆ ನೀಡುತ್ತಿಲ್ಲ. ಕಚೇರಿಗೆ ವಾರಕ್ಕೊಮ್ಮೆ ಆಗಮಿಸುವ ನಿರ್ದೇಶಕರು ಆಸ್ಪತ್ರೆ ಕಡೆ ಸುಳಿಯುವುದಿಲ್ಲ. ಆಸ್ಪತ್ರೆ ಆಗುಹೋಗುಗಳ ಬಗ್ಗೆ ಎಚ್ಚರ ವಹಿಸಿಲ್ಲ ಎಂದು ಸಿಬ್ಬಂದಿಗಳು ದೂರಿದ್ದಾರೆ.

ಹೀಗಾಗಿ ನಿರ್ದೇಶಕರೇ ಸರಿಯಾಗಿ ಕಚೇರಿಗೆ ಬರಲ್ಲ ಅಂದರೆ. ಇನ್ನೂ ಸಿಬ್ಬಂದಿಗಳು, ಅಧಿಕಾರಿಗಳು, ವೈದ್ಯರು ನಿರ್ಲಕ್ಷ್ಯ ವಹಿಸುವುದಿಲ್ಲವ ಸರ್ಕಾರದ ಹಣ ಹಾಳಾದರೆ ನಮಗೇನೂ ಎಂದು ಅಪಾರ ಔಷಧಿಗಳು ಹಾಳಾದರೂ ಯಾರೂ ನೋಡುತ್ತಿಲ್ಲ. ಜಿಲ್ಲಾಡಳಿತ, ಸರ್ಕಾರದ ಭಯವೂ ಇಲ್ಲಿನ ಜಿಮ್ಸ್ ಆಡಳಿತಕ್ಕೆ ಇಲ್ಲದಂತಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಬಗ್ಗೆ ಮೆಡಿಕಲ್ ಸೂಪರಿಟೆಂಡೆಂಟ್ ಡಾ. ರಾಜಶೇಖರ್ ಮ್ಯಾಗೇರಿ ಅವರನ್ನು ಕೇಳಿದರೆ ಇನ್ನೂ ಅಲ್ಲಿ ಕೊವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಬೇಕಾದ ಔಷಧಿಗಳು ಅಲ್ಲಿ ಇಡಲಾಗಿದೆ. ಈಗ ನನ್ನ ಗಮನಕ್ಕೆ ಬಂದಿದೆ. ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

ವರದಿ: ಸಂಜೀವ ಪಾಂಡ್ರೆ

ಇದನ್ನೂ ಓದಿ:

ಅಧ್ಯಯನ ವರದಿ: ಧೂಳು ಹೆಚ್ಚಿರುವ ನಗರಗಳಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚು, ಬೆಂಗಳೂರಿಗೆ ಆತಂಕ?

ಗದಗದಲ್ಲೂ ಶುರುವಾಗಿದೆ ಬೆಡ್ಗಾಗಿ ಹಾಹಾಕಾರ.. ಜಿಮ್ಸ್‌ ಆಸ್ಪತ್ರೆಯಲ್ಲಿ ಡಿಸ್ಚಾರ್ಜ್ ಆದ್ರೆ ಮಾತ್ರ ಸೋಂಕಿತರಿಗೆ ಬೆಡ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?