AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag Police: ಹೃದಯಾಘಾತದಿಂದ ಸ್ವಾತಿ ಸಾವು; ಕಂಬನಿ ಮಿಡಿದ ಇಲಾಖೆಯಿಂದ ಸ್ವಾತಿಗೆ ಪೊಲೀಸ್ ಸೆಲ್ಯೂಟ್!

ಸ್ವಾತಿಯು ಗದಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಒಟ್ಟು 95 ವಿವಿಧ ಪ್ರಕರಣಗಳಲ್ಲಿ ಕರ್ತವ್ಯ ನಿರ್ವಹಿಸಿದೆ. ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಸುಳಿವು ನೀಡಿ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದ ಸ್ವಾತಿ ಇನ್ನು ನೆನಪು ಮಾತ್ರ.

Gadag Police: ಹೃದಯಾಘಾತದಿಂದ ಸ್ವಾತಿ ಸಾವು; ಕಂಬನಿ ಮಿಡಿದ ಇಲಾಖೆಯಿಂದ ಸ್ವಾತಿಗೆ ಪೊಲೀಸ್ ಸೆಲ್ಯೂಟ್!
ಗದಗ: ಹೃದಯಾಘಾತದಿಂದ ಸ್ವಾತಿ ಸಾವು; ಕಂಬನಿ ಮಿಡಿದ ಇಲಾಖೆಯಿಂದ ಸ್ವಾತಿಗೆ ಪೊಲೀಸ್ ಸೆಲ್ಯೂಟ್!
TV9 Web
| Edited By: |

Updated on: May 02, 2022 | 6:57 PM

Share

ಗದಗ ಜಿಲ್ಲಾ ಪೊಲೀಸ್ ಇಲಾಖೆಯ ಕಣ್ಮಣಿಯಾಗಿ ಸುಮಾರು 11 ವರ್ಷ 7 ತಿಂಗಳುಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ, ವಿವಿಧ ಪ್ರಕರಣಗಳನ್ನು ಪತ್ತೆ ಮಾಡಿ ಇಲಾಖೆಯ ಗೌರವ ಹೆಚ್ಚಿಸಿದ್ದ ‘ಸ್ವಾತಿ‘ ಎಂಬ ಹೆಸರಿನ ಶ್ವಾನವು (Dog) ಸೋಮವಾರ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದೆ. ಸ್ವಾತಿಯ ಅಗಲಿಕೆಗೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸ್ವಾತಿಗೆ ಅಂತಿಮ ಗೌರವ ನಮನ ಸಲ್ಲಿಸಿದರು. ಗಾಳಿಯಲ್ಲಿ ಒಂದು ಸುತ್ತಿನ ಗುಂಡು ಹಾರಿಸುವ ಮೂಲಕ ಪೊಲೀಸ್ ಇಲಾಖೆ ಸ್ವಾತಿಗೆ ಗೌರವ ವಂದನೆ ಸಲ್ಲಿಸಿತು (Gadag Police).

‘ಲ್ಯಾಬ್ರಡರ್’ ಜಾತಿಯ ಸ್ವಾತಿ ಎಂಬ ಹೆಸರಿನ ಹೆಣ್ಣು ಶ್ವಾನವು 2011 ಸೆಪ್ಟಂಬರ್ 1 ರಂದು ಜನಿಸಿದ್ದು, 2013 ಜನವರಿ 1 ರಂದು ಪೊಲೀಸ್ ಇಲಾಖೆಯ ಕರ್ತವ್ಯಕ್ಕೆ ಸೇರ್ಪಡೆಗೊಂಡಿತ್ತು. 11 ವರ್ಷ 7 ತಿಂಗಳ ಕಾಲ ಸ್ಫೋಟಕ ವಸ್ತು ಪತ್ತೆ ಶ್ವಾನವಾಗಿ ಕರ್ತವ್ಯ ನಿರ್ವಹಿಸಿದ್ದ ಸ್ವಾತಿಯನ್ನು ಜಿಲ್ಲಾ ಪೊಲೀಸ್ ಇಲಾಖೆ ಅನೇಕ ಬಾರಿ ಶ್ಲಾಘಿಸಿತ್ತು.

ಗದಗ ನಗರದ ನಿವೃತ್ತ ಇಂಜನೀಯರ್ ಅಶೋಕ ಬರಗುಂಡಿ ಅವರು ಪೊಲೀಸ್ ಇಲಾಖೆಗೆ ಕೊಡುಗೆಯಾಗಿ ನೀಡಿದ್ದರು. ಸ್ವಾತಿಯ ಮೇಲುಸ್ತುವಾರಿಯನ್ನು ಡಿಎಸ್‌ಪಿ ಡಿಎಆರ್ ಮತ್ತು ಆರ್‌ಪಿಐ ಡಿಎಆರ್‌ನವರು ವಹಿಸಿದ್ದರು. ಅಲ್ಲದೆ ಎಂ.ಎಸ್. ಕುಂಬಾರ (ಎಎಚ್‌ಸಿ-229), ಎನ್.ಆರ್. ಕಂದಗಲ್ (ಎಪಿಸಿ-2-214) ಸ್ವಾತಿಯ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸಿದ್ದರು.

ಸ್ವಾತಿಯು ಸುಮಾರು 10 ತಿಂಗಳ ಕಾಲ ಬೆಂಗಳೂರಿನ ಆಡುಗೋಡಿಯಲ್ಲಿರುವ ಪೊಲೀಸ್ ಶ್ವಾನದಳ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದಿತ್ತು. ಅಲ್ಲದೆ, ರಾಷ್ಟ್ರಪತಿ, ಪ್ರಧಾನ ಮಂತ್ರಿ, ಕೇಂದ್ರ ಗೃಹ ಸಚಿವ, ಗೋವಾ ಚಿಕ್ ಶೃಂಗ ಸಭೆ, ಮುಖ್ಯಮಂತ್ರಿಗಳು ಸೇರಿದಂತೆ ವಿವಿಐಪಿ ಹಾಗೂ ವಿಐಪಿಗಳ ಅನೇಕ ಭದ್ರತಾ ಕರ್ತವ್ಯ ನಿರ್ವಹಿಸಿದ ಕೀರ್ತಿ ಸ್ವಾತಿಯದ್ದಾಗಿದೆ.

ಕೊನೆಯದಾಗಿ ನಿನ್ನೆ ಅಂದರೆ ಮೇ 1 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್ ಭಾಗವತ್‌ರವರ ಭದ್ರತಾ ಕರ್ತವ್ಯ ನಿರ್ವಹಿಸಿದ್ದ ಸ್ವಾತಿಯು ಇಂದು ಕೊನೆಯುಸಿರೆಳೆದಿದ್ದು, ಪೊಲೀಸ್ ಇಲಾಖೆಗೆ ಅತ್ಯಂತ ದುಃಖ ತಂದಿಟ್ಟಿದ್ದಾಳೆ.

ಸ್ವಾತಿಯು ಗದಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಒಟ್ಟು 95 ವಿವಿಧ ಪ್ರಕರಣಗಳಲ್ಲಿ ಕರ್ತವ್ಯ ನಿರ್ವಹಿಸಿದೆ. ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಸುಳಿವು ನೀಡಿ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದ ಸ್ವಾತಿ ಇನ್ನು ನೆನಪು ಮಾತ್ರ.

ಇನ್ನಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. 

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ