AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag Police: ಹೃದಯಾಘಾತದಿಂದ ಸ್ವಾತಿ ಸಾವು; ಕಂಬನಿ ಮಿಡಿದ ಇಲಾಖೆಯಿಂದ ಸ್ವಾತಿಗೆ ಪೊಲೀಸ್ ಸೆಲ್ಯೂಟ್!

ಸ್ವಾತಿಯು ಗದಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಒಟ್ಟು 95 ವಿವಿಧ ಪ್ರಕರಣಗಳಲ್ಲಿ ಕರ್ತವ್ಯ ನಿರ್ವಹಿಸಿದೆ. ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಸುಳಿವು ನೀಡಿ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದ ಸ್ವಾತಿ ಇನ್ನು ನೆನಪು ಮಾತ್ರ.

Gadag Police: ಹೃದಯಾಘಾತದಿಂದ ಸ್ವಾತಿ ಸಾವು; ಕಂಬನಿ ಮಿಡಿದ ಇಲಾಖೆಯಿಂದ ಸ್ವಾತಿಗೆ ಪೊಲೀಸ್ ಸೆಲ್ಯೂಟ್!
ಗದಗ: ಹೃದಯಾಘಾತದಿಂದ ಸ್ವಾತಿ ಸಾವು; ಕಂಬನಿ ಮಿಡಿದ ಇಲಾಖೆಯಿಂದ ಸ್ವಾತಿಗೆ ಪೊಲೀಸ್ ಸೆಲ್ಯೂಟ್!
TV9 Web
| Edited By: |

Updated on: May 02, 2022 | 6:57 PM

Share

ಗದಗ ಜಿಲ್ಲಾ ಪೊಲೀಸ್ ಇಲಾಖೆಯ ಕಣ್ಮಣಿಯಾಗಿ ಸುಮಾರು 11 ವರ್ಷ 7 ತಿಂಗಳುಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ, ವಿವಿಧ ಪ್ರಕರಣಗಳನ್ನು ಪತ್ತೆ ಮಾಡಿ ಇಲಾಖೆಯ ಗೌರವ ಹೆಚ್ಚಿಸಿದ್ದ ‘ಸ್ವಾತಿ‘ ಎಂಬ ಹೆಸರಿನ ಶ್ವಾನವು (Dog) ಸೋಮವಾರ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದೆ. ಸ್ವಾತಿಯ ಅಗಲಿಕೆಗೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸ್ವಾತಿಗೆ ಅಂತಿಮ ಗೌರವ ನಮನ ಸಲ್ಲಿಸಿದರು. ಗಾಳಿಯಲ್ಲಿ ಒಂದು ಸುತ್ತಿನ ಗುಂಡು ಹಾರಿಸುವ ಮೂಲಕ ಪೊಲೀಸ್ ಇಲಾಖೆ ಸ್ವಾತಿಗೆ ಗೌರವ ವಂದನೆ ಸಲ್ಲಿಸಿತು (Gadag Police).

‘ಲ್ಯಾಬ್ರಡರ್’ ಜಾತಿಯ ಸ್ವಾತಿ ಎಂಬ ಹೆಸರಿನ ಹೆಣ್ಣು ಶ್ವಾನವು 2011 ಸೆಪ್ಟಂಬರ್ 1 ರಂದು ಜನಿಸಿದ್ದು, 2013 ಜನವರಿ 1 ರಂದು ಪೊಲೀಸ್ ಇಲಾಖೆಯ ಕರ್ತವ್ಯಕ್ಕೆ ಸೇರ್ಪಡೆಗೊಂಡಿತ್ತು. 11 ವರ್ಷ 7 ತಿಂಗಳ ಕಾಲ ಸ್ಫೋಟಕ ವಸ್ತು ಪತ್ತೆ ಶ್ವಾನವಾಗಿ ಕರ್ತವ್ಯ ನಿರ್ವಹಿಸಿದ್ದ ಸ್ವಾತಿಯನ್ನು ಜಿಲ್ಲಾ ಪೊಲೀಸ್ ಇಲಾಖೆ ಅನೇಕ ಬಾರಿ ಶ್ಲಾಘಿಸಿತ್ತು.

ಗದಗ ನಗರದ ನಿವೃತ್ತ ಇಂಜನೀಯರ್ ಅಶೋಕ ಬರಗುಂಡಿ ಅವರು ಪೊಲೀಸ್ ಇಲಾಖೆಗೆ ಕೊಡುಗೆಯಾಗಿ ನೀಡಿದ್ದರು. ಸ್ವಾತಿಯ ಮೇಲುಸ್ತುವಾರಿಯನ್ನು ಡಿಎಸ್‌ಪಿ ಡಿಎಆರ್ ಮತ್ತು ಆರ್‌ಪಿಐ ಡಿಎಆರ್‌ನವರು ವಹಿಸಿದ್ದರು. ಅಲ್ಲದೆ ಎಂ.ಎಸ್. ಕುಂಬಾರ (ಎಎಚ್‌ಸಿ-229), ಎನ್.ಆರ್. ಕಂದಗಲ್ (ಎಪಿಸಿ-2-214) ಸ್ವಾತಿಯ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸಿದ್ದರು.

ಸ್ವಾತಿಯು ಸುಮಾರು 10 ತಿಂಗಳ ಕಾಲ ಬೆಂಗಳೂರಿನ ಆಡುಗೋಡಿಯಲ್ಲಿರುವ ಪೊಲೀಸ್ ಶ್ವಾನದಳ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದಿತ್ತು. ಅಲ್ಲದೆ, ರಾಷ್ಟ್ರಪತಿ, ಪ್ರಧಾನ ಮಂತ್ರಿ, ಕೇಂದ್ರ ಗೃಹ ಸಚಿವ, ಗೋವಾ ಚಿಕ್ ಶೃಂಗ ಸಭೆ, ಮುಖ್ಯಮಂತ್ರಿಗಳು ಸೇರಿದಂತೆ ವಿವಿಐಪಿ ಹಾಗೂ ವಿಐಪಿಗಳ ಅನೇಕ ಭದ್ರತಾ ಕರ್ತವ್ಯ ನಿರ್ವಹಿಸಿದ ಕೀರ್ತಿ ಸ್ವಾತಿಯದ್ದಾಗಿದೆ.

ಕೊನೆಯದಾಗಿ ನಿನ್ನೆ ಅಂದರೆ ಮೇ 1 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್ ಭಾಗವತ್‌ರವರ ಭದ್ರತಾ ಕರ್ತವ್ಯ ನಿರ್ವಹಿಸಿದ್ದ ಸ್ವಾತಿಯು ಇಂದು ಕೊನೆಯುಸಿರೆಳೆದಿದ್ದು, ಪೊಲೀಸ್ ಇಲಾಖೆಗೆ ಅತ್ಯಂತ ದುಃಖ ತಂದಿಟ್ಟಿದ್ದಾಳೆ.

ಸ್ವಾತಿಯು ಗದಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಒಟ್ಟು 95 ವಿವಿಧ ಪ್ರಕರಣಗಳಲ್ಲಿ ಕರ್ತವ್ಯ ನಿರ್ವಹಿಸಿದೆ. ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಸುಳಿವು ನೀಡಿ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದ ಸ್ವಾತಿ ಇನ್ನು ನೆನಪು ಮಾತ್ರ.

ಇನ್ನಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. 

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ