Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag Police: ಹೃದಯಾಘಾತದಿಂದ ಸ್ವಾತಿ ಸಾವು; ಕಂಬನಿ ಮಿಡಿದ ಇಲಾಖೆಯಿಂದ ಸ್ವಾತಿಗೆ ಪೊಲೀಸ್ ಸೆಲ್ಯೂಟ್!

ಸ್ವಾತಿಯು ಗದಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಒಟ್ಟು 95 ವಿವಿಧ ಪ್ರಕರಣಗಳಲ್ಲಿ ಕರ್ತವ್ಯ ನಿರ್ವಹಿಸಿದೆ. ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಸುಳಿವು ನೀಡಿ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದ ಸ್ವಾತಿ ಇನ್ನು ನೆನಪು ಮಾತ್ರ.

Gadag Police: ಹೃದಯಾಘಾತದಿಂದ ಸ್ವಾತಿ ಸಾವು; ಕಂಬನಿ ಮಿಡಿದ ಇಲಾಖೆಯಿಂದ ಸ್ವಾತಿಗೆ ಪೊಲೀಸ್ ಸೆಲ್ಯೂಟ್!
ಗದಗ: ಹೃದಯಾಘಾತದಿಂದ ಸ್ವಾತಿ ಸಾವು; ಕಂಬನಿ ಮಿಡಿದ ಇಲಾಖೆಯಿಂದ ಸ್ವಾತಿಗೆ ಪೊಲೀಸ್ ಸೆಲ್ಯೂಟ್!
Follow us
TV9 Web
| Updated By: ಸಾಧು ಶ್ರೀನಾಥ್​

Updated on: May 02, 2022 | 6:57 PM

ಗದಗ ಜಿಲ್ಲಾ ಪೊಲೀಸ್ ಇಲಾಖೆಯ ಕಣ್ಮಣಿಯಾಗಿ ಸುಮಾರು 11 ವರ್ಷ 7 ತಿಂಗಳುಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ, ವಿವಿಧ ಪ್ರಕರಣಗಳನ್ನು ಪತ್ತೆ ಮಾಡಿ ಇಲಾಖೆಯ ಗೌರವ ಹೆಚ್ಚಿಸಿದ್ದ ‘ಸ್ವಾತಿ‘ ಎಂಬ ಹೆಸರಿನ ಶ್ವಾನವು (Dog) ಸೋಮವಾರ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದೆ. ಸ್ವಾತಿಯ ಅಗಲಿಕೆಗೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸ್ವಾತಿಗೆ ಅಂತಿಮ ಗೌರವ ನಮನ ಸಲ್ಲಿಸಿದರು. ಗಾಳಿಯಲ್ಲಿ ಒಂದು ಸುತ್ತಿನ ಗುಂಡು ಹಾರಿಸುವ ಮೂಲಕ ಪೊಲೀಸ್ ಇಲಾಖೆ ಸ್ವಾತಿಗೆ ಗೌರವ ವಂದನೆ ಸಲ್ಲಿಸಿತು (Gadag Police).

‘ಲ್ಯಾಬ್ರಡರ್’ ಜಾತಿಯ ಸ್ವಾತಿ ಎಂಬ ಹೆಸರಿನ ಹೆಣ್ಣು ಶ್ವಾನವು 2011 ಸೆಪ್ಟಂಬರ್ 1 ರಂದು ಜನಿಸಿದ್ದು, 2013 ಜನವರಿ 1 ರಂದು ಪೊಲೀಸ್ ಇಲಾಖೆಯ ಕರ್ತವ್ಯಕ್ಕೆ ಸೇರ್ಪಡೆಗೊಂಡಿತ್ತು. 11 ವರ್ಷ 7 ತಿಂಗಳ ಕಾಲ ಸ್ಫೋಟಕ ವಸ್ತು ಪತ್ತೆ ಶ್ವಾನವಾಗಿ ಕರ್ತವ್ಯ ನಿರ್ವಹಿಸಿದ್ದ ಸ್ವಾತಿಯನ್ನು ಜಿಲ್ಲಾ ಪೊಲೀಸ್ ಇಲಾಖೆ ಅನೇಕ ಬಾರಿ ಶ್ಲಾಘಿಸಿತ್ತು.

ಗದಗ ನಗರದ ನಿವೃತ್ತ ಇಂಜನೀಯರ್ ಅಶೋಕ ಬರಗುಂಡಿ ಅವರು ಪೊಲೀಸ್ ಇಲಾಖೆಗೆ ಕೊಡುಗೆಯಾಗಿ ನೀಡಿದ್ದರು. ಸ್ವಾತಿಯ ಮೇಲುಸ್ತುವಾರಿಯನ್ನು ಡಿಎಸ್‌ಪಿ ಡಿಎಆರ್ ಮತ್ತು ಆರ್‌ಪಿಐ ಡಿಎಆರ್‌ನವರು ವಹಿಸಿದ್ದರು. ಅಲ್ಲದೆ ಎಂ.ಎಸ್. ಕುಂಬಾರ (ಎಎಚ್‌ಸಿ-229), ಎನ್.ಆರ್. ಕಂದಗಲ್ (ಎಪಿಸಿ-2-214) ಸ್ವಾತಿಯ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸಿದ್ದರು.

ಸ್ವಾತಿಯು ಸುಮಾರು 10 ತಿಂಗಳ ಕಾಲ ಬೆಂಗಳೂರಿನ ಆಡುಗೋಡಿಯಲ್ಲಿರುವ ಪೊಲೀಸ್ ಶ್ವಾನದಳ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದಿತ್ತು. ಅಲ್ಲದೆ, ರಾಷ್ಟ್ರಪತಿ, ಪ್ರಧಾನ ಮಂತ್ರಿ, ಕೇಂದ್ರ ಗೃಹ ಸಚಿವ, ಗೋವಾ ಚಿಕ್ ಶೃಂಗ ಸಭೆ, ಮುಖ್ಯಮಂತ್ರಿಗಳು ಸೇರಿದಂತೆ ವಿವಿಐಪಿ ಹಾಗೂ ವಿಐಪಿಗಳ ಅನೇಕ ಭದ್ರತಾ ಕರ್ತವ್ಯ ನಿರ್ವಹಿಸಿದ ಕೀರ್ತಿ ಸ್ವಾತಿಯದ್ದಾಗಿದೆ.

ಕೊನೆಯದಾಗಿ ನಿನ್ನೆ ಅಂದರೆ ಮೇ 1 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್ ಭಾಗವತ್‌ರವರ ಭದ್ರತಾ ಕರ್ತವ್ಯ ನಿರ್ವಹಿಸಿದ್ದ ಸ್ವಾತಿಯು ಇಂದು ಕೊನೆಯುಸಿರೆಳೆದಿದ್ದು, ಪೊಲೀಸ್ ಇಲಾಖೆಗೆ ಅತ್ಯಂತ ದುಃಖ ತಂದಿಟ್ಟಿದ್ದಾಳೆ.

ಸ್ವಾತಿಯು ಗದಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಒಟ್ಟು 95 ವಿವಿಧ ಪ್ರಕರಣಗಳಲ್ಲಿ ಕರ್ತವ್ಯ ನಿರ್ವಹಿಸಿದೆ. ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಸುಳಿವು ನೀಡಿ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದ ಸ್ವಾತಿ ಇನ್ನು ನೆನಪು ಮಾತ್ರ.

ಇನ್ನಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. 

‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ