AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ಪರ ಘೋಷಣೆ ಕಾಲ್ಪನಿಕ ಎಂದಿದ್ದ ಪ್ರಿಯಾಂಕ್ ಖರ್ಗೆ ಯೂಟರ್ನ್​

ರಾಜ್ಯಸಭಾ ಚುನಾವಣೆಯ ಫಲಿತಾಂಶದಿಂದ ಹುಚ್ಚೆದ್ದು ಕುಣಿಯುತ್ತಿದ್ದ ನಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಈ ಘಟನೆ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಈಗ ಅವರು ಯೂಟರ್ನ್ ತೆಗೆದುಕೊಂಡಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿರಬಹುದು, ಅವರ ಮೇಲೆ ಕ್ರಮ ಜರುಗುತ್ತೆ ಎಂದಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ಕಾಲ್ಪನಿಕ ಎಂದಿದ್ದ  ಪ್ರಿಯಾಂಕ್ ಖರ್ಗೆ ಯೂಟರ್ನ್​
ಸಚಿವ ಪ್ರಿಯಾಂಕ್ ಖರ್ಗೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Mar 06, 2024 | 12:23 PM

Share

ಗದಗ, ಮಾರ್ಚ್​.06: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿ ನೀಡಿದ್ದ ತಮ್ಮ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಯೂಟರ್ನ್​ ಹೊಡೆದಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕಾಲ್ಪನಿಕ ಎಂದು ಈ ಹಿಂದೆ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದರು. ಆದರೆ ಈಗ ನಾನು FSL ವರದಿ ನೋಡಿಲ್ಲ, ಗೃಹ ಸಚಿವರು ನೋಡಿದ್ದಾರೆ. FSL ವರದಿ ಬಂದಿದೆ, ಘೋಷಣೆ ಕೂಗಿರಬಹುದು ಅಂದಿದ್ದಾರೆ ಎಂದು ಹೇಳುವ ಮೂಲಕ ಗದಗದಲ್ಲಿ ತಮ್ಮ ಹೇಳಿಕೆಗೆ ಪ್ರಿಯಾಂಕ್​ ಖರ್ಗೆ ಯೂಟರ್ನ್ ಹೊಡೆದಿದ್ದಾರೆ.

ನನ್ನ ಬಳಿ ಬಂದಿದ್ದ ವಿಡಿಯೋ ನೋಡಿ ಪರೀಕ್ಷೆ ಮಾಡಿಸಿದ್ವಿ. ಆ ವಿಡಿಯೋವನ್ನ ಖಾಸಗಿಯಾಗಿ ಪರೀಕ್ಷೆ ಮಾಡಿಸಲಾಗಿತ್ತು. ಅದರಲ್ಲಿ ಬಂದಿಲ್ಲ ಅಂತಾ ಈ ಹಿಂದೆ ಹೇಳಿದ್ದೆ. ಸರ್ಕಾರದ ವರದಿ ಫೈನಲ್ ಅಂತನೂ ಹೇಳಿದ್ದೆ. ಬಿಜೆಪಿ ಖಾಸಗಿ ವರದಿಯನ್ನ ಸರ್ಕಾರಿ ವರದಿಯಾಗಿ ಬಿಂಬಿಸುವುದು ತಪ್ಪು ಅಂತಾ ಹೇಳಿದ್ದೆ. ಅಥವಾ ನನ್ನ ವರದಿ ಸರಿ ಅಂತಾ ಹೇಳುವುದೂ ತಪ್ಪು ಅಂತಾನೇ ಹೇಳಿದ್ದು ನಾನು ಎಫ್​ಎಸ್​ಎಲ್ ವರದಿ ನೋಡಿಲ್ಲ. ಗೃಹ ಸಚಿವರು ವರದಿ ನೋಡಿ ಹೇಳಿದ್ದಾರೆ. ಎಫ್​ಎಸ್​ಎಲ್ ರಿಪೋರ್ಟ್ ಬಂದಿದೆ. ಘೋಷಣೆ ಕೂಗಿರಬಹುದು ಅಂತಾ ಹೇಳಿದ್ದಾರೆ. ಮೂವರನ್ನ ಕರೆದುಕೊಂಡು ಹೋಗಿದಾರೆ. ಧ್ವನಿ ಮ್ಯಾಚ್ ಆಗ್ಬೇಕು. ಆ ಸಂದರ್ಭದಲ್ಲಿ ಅವರಿದ್ರಾ ಅಂತಾ ದೃಢಪಡಿಸಿಕೊಳ್ಳಬೇಕು ಎಂದು ಗದಗದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವರ ಹಿನ್ನೆಲೆ: ಪಾಕಿಸ್ತಾನಕ್ಕೆ ಹೋಗಿ ಬಂದಿದ್ನಾ ಪ್ರಮುಖ ಆರೋಪಿ?

ಬಿಜೆಪಿಯವರಂತೆ ಮಂಡ್ಯದಲ್ಲಿ ಕೂಗಿದ್ದನ್ನ ಮುಚ್ಚಿಹಾಕಿದ್ದೀವಾ? ಇನ್ನೂ ತನಿಖೆ ನಡೀತಿದೆ. ಧ್ವನಿಯ ಸ್ಯಾಂಪಲ್ ಅವ್ರದ್ದು ಇವ್ರದ್ದು ಅಂತಾ ಎಲ್ಲೂ ಹೇಳಿಲ್ಲ. ಮಾನ್ಯ ಗೃಹ ಸಚಿವರ ಹೇಳಿಕೆ ನೀವೇ ಕೇಳಿದ್ದೀರಾ. ಒಂದ್ರಲ್ಲಿ ಕೇಳಿದಂಗಿದೆ. ಹೈಪ್ರಾಬೆಬಲಿಟಿ ಇದೆ ಅಂತಾ ಹೇಳಿದ್ದಾರೆ. ಕರೆಸಿದ್ದೇವೆ, ವಿಚಾರಣೆ ಮಾಡ್ತಿದ್ದೀವಿ. ವೈಸ್ ಸ್ಯಾಂಪಲ್ ಮ್ಯಾಚ್ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತೆ. ಸರ್ಕಾರಿ ವರದಿ ಫೈನಲ್, ಆರ್​ಎಸ್​ಎಸ್ ವರದಿ ಒಪ್ಪಲ್ಲ ಅಂತಾನೇ ಹೇಳಿದ್ದು ಸರ್ಕಾರಿ ವರದಿ ಫೈನಲ್ ಅಂತಾ ಹೇಳಿದ್ವಿ. ಆ ವರದಿಗೆ ಅಪಸ್ವರ ಎತ್ತಿದ್ದೀವಾ? ಇಲ್ಲ ಎಂದರು.

ಇನ್ನು ಇದೇ ವೇಳೆ ಪ್ರಿಯಾಂಕ್ ಖರ್ಗೆ ವಿರುದ್ಧ ಗುಲಾಮ್ ಗ್ಯಾಂಗ್ ಅಭಿಯಾನ ಸಂಬಂಧ ಪ್ರತಿಕ್ರಿಯೆ ನೀಡಿದ ಸಚಿವರು, ಬಿಜೆಪಿಯವರಿಗೆ ನಾನು ಮನೆ ದೇವರು ಇದ್ದಂಗೆ. ಅವ್ರ ಮನೆ ಬಾಗಿಲು ತೆಗೆಯಲ್ಲ. ಊಟ ಜೀರ್ಣವಾಗಲ್ಲ. ಕರ್ನಾಟಕದಲ್ಲಿ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ‌ ಇರ್ತಾರೆ ಎಂದರು.

ಬಿಜೆಪಿ ವಿರುದ್ಧ ವಾಗ್ದಾಳಿ

ಬಿಜೆಪಿಯವರಿಗೆ ನಿಜವಾಗಲೂ ನೈತಿಕತೆ ಇದೆಯಾ? ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಗ್ಗೆ ಇಷ್ಟು ಮಾತಾಡ್ತಿದ್ದಾರೆ. ಮಂಗಳೂರು ಕುಕ್ಕರ್ ಬ್ಲಾಸ್ಟ್ ಯಾರ ಅವಧಿಯಲ್ಲಾಯ್ತು? ಕುಕ್ಕರ್ ಬ್ಲಾಸ್ಟ್ ಆರೋಪಿ ತರಬೇತಿ ಪಡೆದಿದ್ದು ಎಲ್ಲಿ? ಅಂದಿನ ಗೃಹ ಸಚಿವರ ಕ್ಷೇತ್ರ ತೀರ್ಥಹಳ್ಳಿಯಲ್ಲಿ ಕುಕ್ಕರ್​ ಬ್ಲಾಸ್ಟ್ ಆರೋಪಿಗೆ ತರಬೇತಿ. RSS ಪ್ರಯೋಗಾಲಯ ಮಂಗಳೂರಿನಲ್ಲಿ ಸ್ಫೋಟಿಸಿದ್ದ. ಆಗ ಇವರು ರಾಜೀನಾಮೆ ಕೊಟ್ಟಿದ್ರಾ? ಬಿಜೆಪಿಯವರು ಉಸಿರಾದ್ರೂ ಬಿಟ್ಟಿದ್ದರಾ ಎಂದು ಪ್ರಿಯಾಂಕ್ ಖರ್ಗೆ ಗರಂ ಆದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:45 am, Wed, 6 March 24

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್