AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಗಣರಾಜ್ಯೋತ್ಸವ ದಿನ ಭರ್ಜರಿ ಉಡುಗೊರೆ ನೀಡಿದ ಸರ್ಕಾರ

ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವಾಗ ಚಿನ್ನದ ನಿಧಿ ಪತ್ತೆಹಚ್ಚಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ರಾಜ್ಯ ಸರ್ಕಾರ ಗಣರಾಜ್ಯೋತ್ಸವದ ದಿನ ಬಂಪರ್ ಉಡುಗೊರೆ ಘೋಷಿಸಿದೆ. ಪ್ರಾಮಾಣಿಕವಾಗಿ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಕ್ಕೆ ಗೌರವಿಸಿ, 30x40 ನಿವೇಶನ, 5 ಲಕ್ಷ ರೂ. ನಗದು, ಹಾಗೂ ತಾಯಿಗೆ ಸರ್ಕಾರಿ ಕೆಲಸ ನೀಡಲಾಗಿದೆ. ಸಚಿವ ಎಚ್​.ಕೆ. ಪಾಟೀಲ್ ಈ ಘೋಷಣೆ ಮಾಡಿದರು.

ಗದಗ: ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಗಣರಾಜ್ಯೋತ್ಸವ ದಿನ ಭರ್ಜರಿ ಉಡುಗೊರೆ ನೀಡಿದ ಸರ್ಕಾರ
ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಭರ್ಜರಿ ಉಡುಗೊರೆ!
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jan 26, 2026 | 11:08 AM

Share

ಗದಗ, ಜನವರಿ 26: ಗದಗ (Gadag) ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಗಣರಾಜ್ಯೋತ್ಸವದ ದಿನವೇ ರಾಜ್ಯ ಸರ್ಕಾರ ಬಂಪರ್ ಉಡುಗೊರೆ ಘೋಷಿಸಿದೆ. ಗದಗ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ಬಳಿಕ ಸಚಿವ ಎಚ್​ಕೆ ಪಾಟೀಲ್ ಈ ಮಹತ್ವದ ಘೋಷಣೆ ಮಾಡಿದ್ದಾರೆ.

ಪ್ರಜ್ವಲ್ ರಿತ್ತಿ ಕುಟುಂಬಕ್ಕೆ 30×40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ. ನಗದು ಸಹಾಯ ಹಾಗೂ ಪ್ರಜ್ವಲ್ ಅವರ ತಾಯಿ ಕಸ್ತೂರೆವ್ವ ರಿತ್ತಿಗೆ ಹೊರಗುತ್ತಿಗೆ ಆಧಾರದ ಸರ್ಕಾರಿ ಕೆಲಸ ನೀಡಲಾಗುತ್ತದೆ ಎಂದು ಸಚಿವರು ಘೋಷಣೆ ಮಾಡಿದರು. ಈ ವೇಳೆ ಬಾಲಕ ಪ್ರಜ್ವಲ್ ರಿತ್ತಿ ಮತ್ತು ಅವರ ತಾಯಿ ಕಸ್ತೂರೆವ್ವ ಅವರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸಚಿವ ಪಾಟೀಲ್ ಅವರು ಕುಟುಂಬಕ್ಕೆ ನಿವೇಶನ ಪ್ರಮಾಣ ಪತ್ರ ಹಾಗೂ ಕಸ್ತೂರೆವ್ವ ಅವರಿಗೆ ಉದ್ಯೋಗದ ಆದೇಶ ಪತ್ರವನ್ನು ವಿತರಿಸಿದರು. ಸರ್ಕಾರದ ಈ ನಡೆ ಪ್ರಾಮಾಣಿಕತೆಗೆ ಸಿಕ್ಕ ಗೌರವ ಎಂದು ಸ್ಥಳೀಯರು ಪ್ರಶಂಸಿಸಿದ್ದಾರೆ.

ಜನವರಿ 10ರಂದು ಲಕ್ಕುಂಡಿಯಲ್ಲಿ ಪ್ರಜ್ವಲ್ ರಿತ್ತಿ ಕುಟುಂಬ ಮನೆ ನಿರ್ಮಾಣಕ್ಕಾಗಿ ಪಾಯ ಅಗೆಯುವ ವೇಳೆ 466 ಗ್ರಾಂ ತೂಕದ ಪುರಾತನ ಚಿನ್ನದ ಆಭರಣಗಳ ತಂಬಿಗೆ ಪತ್ತೆಯಾಗಿತ್ತು. ಚಿನ್ನ ನಿಧಿ ರೂಪದಲ್ಲಿ ಸಿಕ್ಕಿದ್ದರೂ ಯಾವುದೇ ಲಾಲಸೆಗೆ ಒಳಗಾಗದೆ ಕುಟುಂಬವು ಅದನ್ನು ಸರ್ಕಾರಕ್ಕೆ ಹಸ್ತಾಂತರಿಸಿದ್ದು ರಾಜ್ಯಾದ್ಯಂತ ಮೆಚ್ಚುಗೆಗೆ ಪಾತ್ರವಾಗಿತ್ತು.

ಲಕ್ಕುಂಡಿ ಗದಗ ಜಿಲ್ಲೆಯ ಐತಿಹಾಸಿಕ ಗ್ರಾಮವಾಗಿದ್ದು, ಚಾಲುಕ್ಯರ ಕಾಲದ ದೇವಾಲಯಗಳು, ಕೆರೆಗಳು ಹಾಗೂ ಪುರಾತತ್ವ ಮಹತ್ವದ ಸ್ಮಾರಕಗಳಿಗೆ ಹೆಸರುವಾಸಿಯಾಗಿದೆ. ಈ ಪ್ರದೇಶದಲ್ಲಿ ಹಿಂದೆಯೂ ಅನೇಕ ಬಾರಿ ಪುರಾತನ ವಸ್ತುಗಳು ಮತ್ತು ಅವಶೇಷಗಳು ಪತ್ತೆಯಾಗಿರುವ ದಾಖಲೆಗಳಿವೆ. ಪುರಾತತ್ವ ತಜ್ಞರ ಪ್ರಕಾರ, ಲಕ್ಕುಂಡಿ ಮಧ್ಯಯುಗೀನ ಕಾಲದಲ್ಲಿ ಪ್ರಮುಖ ವಾಣಿಜ್ಯ ಹಾಗೂ ಸಾಂಸ್ಕೃತಿಕ ಕೇಂದ್ರವಾಗಿದ್ದ ಕಾರಣ ಇಲ್ಲಿ ಚಿನ್ನ, ನಾಣ್ಯಗಳು ಮತ್ತು ಆಭರಣಗಳನ್ನು ನೆಲದಲ್ಲಿ ಸಂಗ್ರಹಿಸುವ ಪದ್ಧತಿ ಇದ್ದಿರಬಹುದೆಂದು ಅಂದಾಜಿಸಲಾಗಿದೆ. ಪ್ರಜ್ವಲ್ ರಿತ್ತಿ ಕುಟುಂಬ ಪತ್ತೆಹಚ್ಚಿದ ಚಿನ್ನದ ನಿಧಿಯೂ ಈ ಐತಿಹಾಸಿಕ ಹಿನ್ನೆಲೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!

ಒಟ್ಟಿನಲ್ಲಿ, ರಿತ್ತಿ ಕುಟುಂಬಕ್ಕೆ ಚಿನ್ನದ ನಿಧಿ ಸಿಕ್ಕ ಬಳಿಕ ಲಕ್ಕುಂಡಿಯಲ್ಲಿ ಆರಂಭವಾದ ಉತ್ಖನನ ಕಾರ್ಯ ಅನೇಕ ರಹಸ್ಯಗಳನ್ನು ಬಯಲಿಗೆಳೆಯುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!